AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ vs ಆಲಿಯಾ ಭಟ್: ಬಾಕ್ಸ್​ ಆಫೀಸ್​ನಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು ಆರ್​ಆರ್​​ಆರ್​ ಮುಖಾಮುಖಿ

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲೂ ಆಲಿಯಾ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಒಂದು ದಿನದ ಅಂತರದಲ್ಲಿ ತೆರೆಗೆ ಬರುತ್ತಿದೆ.

ಆಲಿಯಾ ಭಟ್​ vs ಆಲಿಯಾ ಭಟ್: ಬಾಕ್ಸ್​ ಆಫೀಸ್​ನಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು ಆರ್​ಆರ್​​ಆರ್​ ಮುಖಾಮುಖಿ
ಆಲಿಯಾ ಭಟ್
TV9 Web
| Edited By: |

Updated on: Oct 02, 2021 | 11:51 PM

Share

ಕೊವಿಡ್​ ಎರಡನೇ ಅಲೆ ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸಾಲುಸಾಲು ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ರಿಲೀಸ್​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಅಚ್ಚರಿ ಎಂದರೆ ನಟಿ ಆಲಿಯಾ ಭಟ್ ಅವರ ಎರಡು​  ಸಿನಿಮಾ ಈಗ ಮುಖಾಮುಖಿ​ ಆಗುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲೂ ಆಲಿಯಾ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಒಂದು ದಿನದ ಅಂತರದಲ್ಲಿ ತೆರೆಗೆ ಬರುತ್ತಿದೆ. ಹೀಗಾಗಿ, ಎರಡೂ ಸಿನಿಮಾಗಳಿಗೆ ಒಟ್ಟಿಗೆ ಪ್ರಚಾರ ಮಾಡೋದು ಆಲಿಯಾಗೆ ಅನಿವಾರ್ಯವಾಗಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಜನವರಿ 6ರಂದು ತೆರೆಗೆ ಬರುತ್ತಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ.

ಇನ್ನು, ‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವ್​​ಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್​ಗೆ ಸೀತಾ ಹೆಸರಿನ ಪಾತ್ರ ನೀಡಲಾಗಿದೆ. ‘ಬಾಹುಬಲಿ 2’ ನಂತರ ತೆರೆಗೆ ಬರುತ್ತಿರುವ ರಾಜಮೌಳಿ ನಿರ್ದೇಶನದ ಸಿನಿಮಾ ಇದಾಗಿದೆ. ಈ ಕಾರಣಕ್ಕೆ ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಚಿತ್ರ ಆಗಿದ್ದು, ಹಿಂದಿಯಲ್ಲೂ ರಿಲೀಸ್​ ಆಗುತ್ತಿದೆ. ರಾಜಮೌಳಿ ಈಗಾಗಲೇ ‘ಬಾಹುಬಲಿ’ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಆರ್​ಆರ್​ಆರ್​ ಸಿನಿಮಾಗೆ ಬಾಲಿವುಡ್​​ನಲ್ಲಿ ಬೇಡಿಕೆ ಇದೆ.

ಇದನ್ನೂ ಓದಿ: ಬಿಡುವಿಲ್ಲದೆ ದುಡಿಯುವ ಬಾಲಿವುಡ್ ತಾರೆಯರು ಸೆಟ್​ಗಳಲ್ಲಿ ಮೂರ್ಛೆ ಹೋದ ಪ್ರಸಂಗಳು ಒಂದೆರಡಲ್ಲ!

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ