AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ

Alia Bhatt-Ranbir Kapoor: ಆಲಿಯಾ ಭಟ್ ಮತ್ತು ರಣ್​ಬೀರ್ ಕಪೂರ್ ರಾಹಾ ಹೆಸರಿನ ಮಗಳನ್ನು ಹೊಂದಿದ್ದಾರೆ. ಆದರೆ ಆಲಿಯಾ ಭಟ್​ಗೆ ಇನ್ನೂ ಹೆಚ್ಚು ಮಕ್ಕಳು ಬೇಕಂತೆ ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 12, 2024 | 4:59 PM

Share

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗೆ ರಹಾ ಹೆಸರಿನ ಮಗಳು ಇದ್ದಾಳೆ. ಈ ದಂಪತಿ 2022ರ ಏಪ್ರಿಲ್ನಲ್ಲಿ ಮದುವೆ ಆದರು. ಕೇವಲ 7 ತಿಂಗಳಲ್ಲಿ ಅಂದರೆ ಅದೇ ವರ್ಷ ನವೆಂಬರ್ನಲ್ಲಿ ಆಲಿಯಾ ಭಟ್ ಅವರು ರಹಾಗೆ ಜನ್ಮ ನೀಡಿದರು. ಅವರ ಫ್ಯೂಚರ್ ಪ್ಲ್ಯಾನ್ ಬಗ್ಗೆ ಕೇಳಲಾಯಿತು. ಅವರು ಮತ್ತಷ್ಟು ಮಗುವನ್ನು ಹೊಂದುವ ಆಲೋಚನೆಯಲ್ಲಿ ಇದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಜಿಗ್ರಾ’ ಸಿನಿಮಾ ರಿಲೀಸ್ ಆಗಿದೆ. ಇದು ಹಿಂದಿಯ ಜೊತೆಗೆ ತೆಲುಗಿನಲ್ಲೂ ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ನಟಿಸೋದರ ಜೊತೆಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಮಾಡುವುದರ ಜೊತೆಗೆ ಅವರು ಕುಟುಂಬದ ಬಗ್ಗೆಯೂ ಗಮನ ಹರಿಸುತ್ತಾ ಇದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಹಲವು ಸಿನಿಮಾಗಳನ್ನು ಮಾಡಬೇಕು. ನಟನಾಗಿ ಮಾತ್ರವಲ್ಲ, ನಿರ್ಮಾಪಕಿ ಆಗಿಯೂ ಸಿನಿಮಾ ಮಾಡಬೇಕು. ಹಲವು ಮಕ್ಕಳನ್ನು ಹೊಂದಬೇಕು. ಸಾಕಷ್ಟು ಟ್ರಾವೆಲ್ ಮಾಡಬೇಕು. ಆರೋಗ್ಯವಾಗಿ, ಖುಷಿಯಾಗಿ, ಸರಳವಾಗಿ, ಶಾಂತವಾಗಿ ಜೀವನ ಸಾಗಿಸಬೇಕು’ ಎಂದಿದ್ದಾರೆ ಆಲಿಯಾ ಭಟ್ ಅವರು.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’

ರಹಾಗೆ ಹೊರ ಜಗತ್ತಿನ ಬಗ್ಗೆ, ತಮ್ಮ ಕುಟುಂಬಕ್ಕೆ ಇರೋ ಫೇಮ್ ಬಗ್ಗೆ ಅಷ್ಟಾಗಿ ತಿಳಿಯುತ್ತಿಲ್ಲ. ‘ಮುಂದೊಂದು ದಿನ ನಾನು ನನ್ನ ಸ್ಟುಡೆಂಟ್ ಆಫ್ ದಿ ಇಯರ್ನ ಮಗಳಿಗೆ ತೋರಿಸಬೇಕು. ಮಕ್ಕಳು ಈ ಚಿತ್ರವನ್ನು ವೀಕ್ಷಿಸಬಹುದು. ಅದು ನನ್ನ ಮೊದಲ ಸಿನಿಮಾ. ಅದರಲ್ಲಿ ನನ್ನ ನಟನೆ ಉತ್ತಮವಾಗಿಲ್ಲ. ಸಿನಿಮಾನ ನಾನು ಎಂಜಾಯ್ ಮಾಡಿದ್ದೆ’ ಎಂದಿದ್ದಾರೆ ಅವರು.

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಮೆಚ್ಚುಗೆ ಪಡೆದಿದೆ. ಕರಣ್ ಜೋಹರ್ ಜೊತೆ ಸೇರಿ ಇದನ್ನು ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಮೊದಲ ದಿನ 4 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಸನ್ ಬಾಲಾ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ತಮ್ಮನಿಗಾಗಿ ಹೋರಾಡುವ ಅಕ್ಕನಾಗಿ ಅವರು ಕಾಣಿಸಿಕೊಂಡಿದ್ದಾರೆ. ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಈ ಚಿತ್ರದ ಹೀರೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ