ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ

Alia Bhatt-Ranbir Kapoor: ಆಲಿಯಾ ಭಟ್ ಮತ್ತು ರಣ್​ಬೀರ್ ಕಪೂರ್ ರಾಹಾ ಹೆಸರಿನ ಮಗಳನ್ನು ಹೊಂದಿದ್ದಾರೆ. ಆದರೆ ಆಲಿಯಾ ಭಟ್​ಗೆ ಇನ್ನೂ ಹೆಚ್ಚು ಮಕ್ಕಳು ಬೇಕಂತೆ ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ
Follow us
| Updated By: ಮಂಜುನಾಥ ಸಿ.

Updated on: Oct 12, 2024 | 4:59 PM

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗೆ ರಹಾ ಹೆಸರಿನ ಮಗಳು ಇದ್ದಾಳೆ. ಈ ದಂಪತಿ 2022ರ ಏಪ್ರಿಲ್ನಲ್ಲಿ ಮದುವೆ ಆದರು. ಕೇವಲ 7 ತಿಂಗಳಲ್ಲಿ ಅಂದರೆ ಅದೇ ವರ್ಷ ನವೆಂಬರ್ನಲ್ಲಿ ಆಲಿಯಾ ಭಟ್ ಅವರು ರಹಾಗೆ ಜನ್ಮ ನೀಡಿದರು. ಅವರ ಫ್ಯೂಚರ್ ಪ್ಲ್ಯಾನ್ ಬಗ್ಗೆ ಕೇಳಲಾಯಿತು. ಅವರು ಮತ್ತಷ್ಟು ಮಗುವನ್ನು ಹೊಂದುವ ಆಲೋಚನೆಯಲ್ಲಿ ಇದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಜಿಗ್ರಾ’ ಸಿನಿಮಾ ರಿಲೀಸ್ ಆಗಿದೆ. ಇದು ಹಿಂದಿಯ ಜೊತೆಗೆ ತೆಲುಗಿನಲ್ಲೂ ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ನಟಿಸೋದರ ಜೊತೆಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಮಾಡುವುದರ ಜೊತೆಗೆ ಅವರು ಕುಟುಂಬದ ಬಗ್ಗೆಯೂ ಗಮನ ಹರಿಸುತ್ತಾ ಇದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಹಲವು ಸಿನಿಮಾಗಳನ್ನು ಮಾಡಬೇಕು. ನಟನಾಗಿ ಮಾತ್ರವಲ್ಲ, ನಿರ್ಮಾಪಕಿ ಆಗಿಯೂ ಸಿನಿಮಾ ಮಾಡಬೇಕು. ಹಲವು ಮಕ್ಕಳನ್ನು ಹೊಂದಬೇಕು. ಸಾಕಷ್ಟು ಟ್ರಾವೆಲ್ ಮಾಡಬೇಕು. ಆರೋಗ್ಯವಾಗಿ, ಖುಷಿಯಾಗಿ, ಸರಳವಾಗಿ, ಶಾಂತವಾಗಿ ಜೀವನ ಸಾಗಿಸಬೇಕು’ ಎಂದಿದ್ದಾರೆ ಆಲಿಯಾ ಭಟ್ ಅವರು.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’

ರಹಾಗೆ ಹೊರ ಜಗತ್ತಿನ ಬಗ್ಗೆ, ತಮ್ಮ ಕುಟುಂಬಕ್ಕೆ ಇರೋ ಫೇಮ್ ಬಗ್ಗೆ ಅಷ್ಟಾಗಿ ತಿಳಿಯುತ್ತಿಲ್ಲ. ‘ಮುಂದೊಂದು ದಿನ ನಾನು ನನ್ನ ಸ್ಟುಡೆಂಟ್ ಆಫ್ ದಿ ಇಯರ್ನ ಮಗಳಿಗೆ ತೋರಿಸಬೇಕು. ಮಕ್ಕಳು ಈ ಚಿತ್ರವನ್ನು ವೀಕ್ಷಿಸಬಹುದು. ಅದು ನನ್ನ ಮೊದಲ ಸಿನಿಮಾ. ಅದರಲ್ಲಿ ನನ್ನ ನಟನೆ ಉತ್ತಮವಾಗಿಲ್ಲ. ಸಿನಿಮಾನ ನಾನು ಎಂಜಾಯ್ ಮಾಡಿದ್ದೆ’ ಎಂದಿದ್ದಾರೆ ಅವರು.

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಮೆಚ್ಚುಗೆ ಪಡೆದಿದೆ. ಕರಣ್ ಜೋಹರ್ ಜೊತೆ ಸೇರಿ ಇದನ್ನು ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಮೊದಲ ದಿನ 4 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಸನ್ ಬಾಲಾ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ತಮ್ಮನಿಗಾಗಿ ಹೋರಾಡುವ ಅಕ್ಕನಾಗಿ ಅವರು ಕಾಣಿಸಿಕೊಂಡಿದ್ದಾರೆ. ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಈ ಚಿತ್ರದ ಹೀರೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು