AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ

Alia Bhatt-Ranbir Kapoor: ಆಲಿಯಾ ಭಟ್ ಮತ್ತು ರಣ್​ಬೀರ್ ಕಪೂರ್ ರಾಹಾ ಹೆಸರಿನ ಮಗಳನ್ನು ಹೊಂದಿದ್ದಾರೆ. ಆದರೆ ಆಲಿಯಾ ಭಟ್​ಗೆ ಇನ್ನೂ ಹೆಚ್ಚು ಮಕ್ಕಳು ಬೇಕಂತೆ ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 12, 2024 | 4:59 PM

Share

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗೆ ರಹಾ ಹೆಸರಿನ ಮಗಳು ಇದ್ದಾಳೆ. ಈ ದಂಪತಿ 2022ರ ಏಪ್ರಿಲ್ನಲ್ಲಿ ಮದುವೆ ಆದರು. ಕೇವಲ 7 ತಿಂಗಳಲ್ಲಿ ಅಂದರೆ ಅದೇ ವರ್ಷ ನವೆಂಬರ್ನಲ್ಲಿ ಆಲಿಯಾ ಭಟ್ ಅವರು ರಹಾಗೆ ಜನ್ಮ ನೀಡಿದರು. ಅವರ ಫ್ಯೂಚರ್ ಪ್ಲ್ಯಾನ್ ಬಗ್ಗೆ ಕೇಳಲಾಯಿತು. ಅವರು ಮತ್ತಷ್ಟು ಮಗುವನ್ನು ಹೊಂದುವ ಆಲೋಚನೆಯಲ್ಲಿ ಇದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಜಿಗ್ರಾ’ ಸಿನಿಮಾ ರಿಲೀಸ್ ಆಗಿದೆ. ಇದು ಹಿಂದಿಯ ಜೊತೆಗೆ ತೆಲುಗಿನಲ್ಲೂ ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ನಟಿಸೋದರ ಜೊತೆಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಮಾಡುವುದರ ಜೊತೆಗೆ ಅವರು ಕುಟುಂಬದ ಬಗ್ಗೆಯೂ ಗಮನ ಹರಿಸುತ್ತಾ ಇದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಹಲವು ಸಿನಿಮಾಗಳನ್ನು ಮಾಡಬೇಕು. ನಟನಾಗಿ ಮಾತ್ರವಲ್ಲ, ನಿರ್ಮಾಪಕಿ ಆಗಿಯೂ ಸಿನಿಮಾ ಮಾಡಬೇಕು. ಹಲವು ಮಕ್ಕಳನ್ನು ಹೊಂದಬೇಕು. ಸಾಕಷ್ಟು ಟ್ರಾವೆಲ್ ಮಾಡಬೇಕು. ಆರೋಗ್ಯವಾಗಿ, ಖುಷಿಯಾಗಿ, ಸರಳವಾಗಿ, ಶಾಂತವಾಗಿ ಜೀವನ ಸಾಗಿಸಬೇಕು’ ಎಂದಿದ್ದಾರೆ ಆಲಿಯಾ ಭಟ್ ಅವರು.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ, ರಣ್​ಬೀರ್ ಕಪೂರ್ ಅಲ್ಲ, ಯಶ್ ‘ನಾಯಕ’

ರಹಾಗೆ ಹೊರ ಜಗತ್ತಿನ ಬಗ್ಗೆ, ತಮ್ಮ ಕುಟುಂಬಕ್ಕೆ ಇರೋ ಫೇಮ್ ಬಗ್ಗೆ ಅಷ್ಟಾಗಿ ತಿಳಿಯುತ್ತಿಲ್ಲ. ‘ಮುಂದೊಂದು ದಿನ ನಾನು ನನ್ನ ಸ್ಟುಡೆಂಟ್ ಆಫ್ ದಿ ಇಯರ್ನ ಮಗಳಿಗೆ ತೋರಿಸಬೇಕು. ಮಕ್ಕಳು ಈ ಚಿತ್ರವನ್ನು ವೀಕ್ಷಿಸಬಹುದು. ಅದು ನನ್ನ ಮೊದಲ ಸಿನಿಮಾ. ಅದರಲ್ಲಿ ನನ್ನ ನಟನೆ ಉತ್ತಮವಾಗಿಲ್ಲ. ಸಿನಿಮಾನ ನಾನು ಎಂಜಾಯ್ ಮಾಡಿದ್ದೆ’ ಎಂದಿದ್ದಾರೆ ಅವರು.

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಮೆಚ್ಚುಗೆ ಪಡೆದಿದೆ. ಕರಣ್ ಜೋಹರ್ ಜೊತೆ ಸೇರಿ ಇದನ್ನು ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಮೊದಲ ದಿನ 4 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಸನ್ ಬಾಲಾ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ತಮ್ಮನಿಗಾಗಿ ಹೋರಾಡುವ ಅಕ್ಕನಾಗಿ ಅವರು ಕಾಣಿಸಿಕೊಂಡಿದ್ದಾರೆ. ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಈ ಚಿತ್ರದ ಹೀರೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​