AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ವ್ಯಕ್ತಿ ಜತೆ ಜಿಮ್​ನಲ್ಲಿ ವರ್ಕೌಟ್​ ಮಾಡಿದ ನಟಿ ಆಲಿಯಾ ಭಟ್

ಆಲಿಯಾ ಹೈದರಾಬಾದ್​ನಲ್ಲಿ ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಶೇಷ ವ್ಯಕ್ತಿ ಜತೆ ಜಿಮ್​ನಲ್ಲಿ ವರ್ಕೌಟ್​ ಮಾಡಿದ ನಟಿ ಆಲಿಯಾ ಭಟ್
ಆಲಿಯಾ ಹೈದರಾಬಾದ್​ನಲ್ಲಿ ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
TV9 Web
| Edited By: |

Updated on: Jul 25, 2021 | 8:07 PM

Share

‘ಆರ್​ಆರ್​ಆರ್​’ ಚಿತ್ರದ ಶೂಟಿಂಗ್​ಗಾಗಿ ನಟಿ ವೈಷ್ಣವಿ ಗೌಡ ಹೈದರಾಬಾದ್​ಗೆ ಆಗಮಿಸಿದ್ದರು. ಈಗ ಇದರ ಶೂಟಿಂಗ್​ ಪೂರ್ಣಗೊಂಡಿದ್ದು, ಆಲಿಯಾ ಮುಂಬೈಗೆ ತೆರಳಿದ್ದಾರೆ. ಅದಕ್ಕೂ ಮೊದಲು ಆಲಿಯಾ ಹೈದರಾಬಾದ್​ನಲ್ಲಿ ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಆಲಿಯಾ ಫಿಟ್​ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ ಶೂಟಿಂಗ್​ ಮಧ್ಯೆಯೂ ಆಲಿಯಾ ಜಿಮ್​ನಲ್ಲಿ ಸಮಯ ಕಳೆದಿದ್ದಾರೆ. ಈಗ ಅವರು ಸಡಕ್​ 2 ಸಿನಿಮಾದ ಹೀರೋ ಜೀಶು ಸೇನ್​ಗುಪ್ತಾ ಜತೆ ಜಿಮ್​ನಲ್ಲಿ ವರ್ಕೌಟ್​ ಮಾಡಿದ್ದಾರೆ. ಜೀಶು ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್​’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಲಾಕ್​ಡೌನ್​ ಮುಗಿದ ಬಳಿಕ ಚಿತ್ರದ ಶೂಟಿಂಗ್​ಗೆ ಚುರುಕು ಮುಟ್ಟಿಸಲಾಗಿದೆ. ರಾಜಮೌಳಿ ಸಾರಥ್ಯದಲ್ಲಿ ಆರ್​ಆರ್​ಆರ್​ ಮೂಡಿಬರುತ್ತಿದ್ದು, ಇತ್ತೀಚೆಗ ಅದರ ಮೇಕಿಂಗ್​ ವಿಡಿಯೋ ಬಿಡುಗಡೆ ಮಾಡಲಾಗಿತ್ತು.

ಕೊಮರಾಮ್​ ಭೀಮ್​ ಪಾತ್ರಕ್ಕೆ ಜ್ಯೂ. ಎನ್​ಟಿಆರ್​ ಬಣ್ಣ ಹಚ್ಚಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ಅವರಿಗೆ ಮೊದಲ ಸಿನಿಮಾ. ಅಜಯ್​ ದೇವಗನ್​ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅ.13ರಂದು ಆರ್​ಆರ್​ಆರ್​ ರಿಲೀಸ್​ ಮಾಡಲು ಉದ್ದೇಶಿಸಲಾಗಿದೆ. ಅಂದುಕೊಂಡ ದಿನಾಂಕದಲ್ಲೇ ಸಿನಿಮಾವನ್ನು ತೆರೆಕಾಣಿಸಬೇಕು ಎಂದು ಇಡೀ ತಂಡ ಶ್ರಮವಹಿಸುತ್ತಿದೆ.

ಇದನ್ನೂ ಓದಿ: ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?