AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್

ನಟಿ ಆಲಿಯಾ ಭಟ್ ಸ್ಟಾರ್ ಕಿಡ್ ಆದರೂ, ತಮ್ಮ ಶ್ರಮದಿಂದ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ. ಈಗ 'ಆಲ್ಫಾ' ಸಿನಿಮಾದಲ್ಲಿ ಆಕ್ಷನ್ ಅವತಾರ ತಾಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್ ಭಾಗವಾಗಿರುವ ಈ ಮಹಿಳಾ ಪ್ರಧಾನ ಚಿತ್ರದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದೆ. ಬಾಬಿ ಡಿಯೋಲ್ ತಂದೆಯಾಗಿ ಆಲಿಯಾರನ್ನು ಮಿಷನ್‌ಗಾಗಿ ಸಿದ್ಧಪಡಿಸುವ ಕಥಾಹಂದರ ಕುತೂಹಲ ಮೂಡಿಸಿದೆ.

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್
ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Jun 10, 2026 | 2:48 PM

Share

ನಟಿ ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆಗಿರಬಹುದು, ಆದರೆ, ತಮ್ಮನ್ನು ತಾವು ಸ್ಟಾರ್ ಕಿಡ್ ರೀತಿ ತೋರಿಸಿಕೊಂಡಿಲ್ಲ. ಅವರು ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ಆ್ಯಕ್ಷನ್ ಸಿನಿಮಾಗಳ ಮೂಲಕವೂ ಮಿಂಚುತ್ತಾರೆ. ಸಾಕಷ್ಟು ಶ್ರಮ ಹಾಕಿ ಈ ಹಂತಕ್ಕೆ ಬಂದಿದ್ದಾರೆ. ಈಗ ಇದಕ್ಕೆ ಹೊಸ ಸೇರ್ಪಡೆ ‘ಆಲ್ಫಾ’. ಈ ಮಹಿಳಾ ಪ್ರಧಾನ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರಚನೆ ಮಾಡಿದೆ. ಇದರ ಅಡಿಯಲ್ಲಿ‘ವಾರ್ 2’ ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರದ ಕ್ಲೈಮ್ಯಾಕ್ಸ್​​ನಲ್ಲಿ ‘ಆಲ್ಫಾ’ ಸಿನಿಮಾ ಬರಲಿದೆ ಎಂಬ ಸೂಚನೆ ನೀಡಲಾಗಿತ್ತು. ಈಗ ಟೀಸರ್ ಅನಾವರಣ ಮಾಡುವ ಮೂಲಕ ಆಲಿಯಾ ಭಟ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಲಾಗಿದೆ.

ಬಾಬಿ ಡಿಯೋಲ್ ಹಾಗೂ ಆಲಿಯಾ ಭಟ್ ತಂದೆ-ಮಗಳ ಪಾತ್ರ ಮಾಡಿದ್ದಾರೆ. ಆಲಿಯಾ 18ನೇ ವಯಸ್ಸಿಗೆ ಕಾಲಿಡುತ್ತಿದ್ದಂತೆ ಬಾಬಿ ಡಿಯೋಲ್ ಪಾರ್ಟಿ ನೀಡುತ್ತಾರೆ. ಇಷ್ಟು ವರ್ಷ ನಡೆಸಿದ ಸಿದ್ಧತೆಯ ಕಾರಣ ಏನು ಎಂಬುದು ಅಲ್ಲಿ ರಿವೀಲ್ ಆಗುತ್ತದೆ. ಮಿಷನ್ ಒಂದಕ್ಕಾಗಿ ಆಲಿಯಾ ಅವರನ್ನ ಬಾಬಿ ಈ ರೀತಿ ಸಿದ್ಧ ಮಾಡಿರುತ್ತಾರೆ.

‘ಈ ಜಗತ್ತಲ್ಲಿ ಕುರಿ ಹಾಗೂ ನರಿ ಎರಡೇ ರೀತಿಯ ಜನ ಇರುತ್ತಾರೆ. ನಾನು ನರಿ. ನಿನ್ನದು ಯಾವ ವರ್ಗ’ ಎಂದು ಆಲಿಯಾಗೆ ಬಾಬಿ ಕೇಳುತ್ತಾರೆ. ಇದಕ್ಕೆ ನೇರವಾಗಿ ಉತ್ತರಿಸೋ ಆಲಿಯಾ, ‘ನರಿಯ ಮಗಳು ನರಿಯೇ ಆಗಿರುತ್ತಾಳೆ’ ಎನ್ನುತ್ತಾರೆ.

ಇದನ್ನೂ ಓದಿ: ‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ

ಟೀಸರ್ ಉದ್ದಕ್ಕೂ ಆಲಿಯಾ ಆ್ಯಕ್ಷನ್ ಮೆರೆದಿದ್ದಾರೆ. ಆಲ್ಫಾ ಅನ್ನೋದು ಸೀಕ್ರೇಟ್ ಮಿಷನ್ ಎಂಬ ರೀತಿಯಲ್ಲಿ ಟೀಸರ್ ತೋರಿಸಲಾಗಿದೆ. ವಿಶೇಷ ಎಂದರೆ ಜುಲೈ 3ರಂದು ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಶಿವ್ ರವೈಲ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು