AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್

ನಟಿ ಆಲಿಯಾ ಭಟ್ ಸ್ಟಾರ್ ಕಿಡ್ ಆದರೂ, ತಮ್ಮ ಶ್ರಮದಿಂದ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ. ಈಗ 'ಆಲ್ಫಾ' ಸಿನಿಮಾದಲ್ಲಿ ಆಕ್ಷನ್ ಅವತಾರ ತಾಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್ ಭಾಗವಾಗಿರುವ ಈ ಮಹಿಳಾ ಪ್ರಧಾನ ಚಿತ್ರದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದೆ. ಬಾಬಿ ಡಿಯೋಲ್ ತಂದೆಯಾಗಿ ಆಲಿಯಾರನ್ನು ಮಿಷನ್‌ಗಾಗಿ ಸಿದ್ಧಪಡಿಸುವ ಕಥಾಹಂದರ ಕುತೂಹಲ ಮೂಡಿಸಿದೆ.

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್
ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Jun 10, 2026 | 2:48 PM

Share

ನಟಿ ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆಗಿರಬಹುದು, ಆದರೆ, ತಮ್ಮನ್ನು ತಾವು ಸ್ಟಾರ್ ಕಿಡ್ ರೀತಿ ತೋರಿಸಿಕೊಂಡಿಲ್ಲ. ಅವರು ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ಆ್ಯಕ್ಷನ್ ಸಿನಿಮಾಗಳ ಮೂಲಕವೂ ಮಿಂಚುತ್ತಾರೆ. ಸಾಕಷ್ಟು ಶ್ರಮ ಹಾಕಿ ಈ ಹಂತಕ್ಕೆ ಬಂದಿದ್ದಾರೆ. ಈಗ ಇದಕ್ಕೆ ಹೊಸ ಸೇರ್ಪಡೆ ‘ಆಲ್ಫಾ’. ಈ ಮಹಿಳಾ ಪ್ರಧಾನ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರಚನೆ ಮಾಡಿದೆ. ಇದರ ಅಡಿಯಲ್ಲಿ‘ವಾರ್ 2’ ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರದ ಕ್ಲೈಮ್ಯಾಕ್ಸ್​​ನಲ್ಲಿ ‘ಆಲ್ಫಾ’ ಸಿನಿಮಾ ಬರಲಿದೆ ಎಂಬ ಸೂಚನೆ ನೀಡಲಾಗಿತ್ತು. ಈಗ ಟೀಸರ್ ಅನಾವರಣ ಮಾಡುವ ಮೂಲಕ ಆಲಿಯಾ ಭಟ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಲಾಗಿದೆ.

ಬಾಬಿ ಡಿಯೋಲ್ ಹಾಗೂ ಆಲಿಯಾ ಭಟ್ ತಂದೆ-ಮಗಳ ಪಾತ್ರ ಮಾಡಿದ್ದಾರೆ. ಆಲಿಯಾ 18ನೇ ವಯಸ್ಸಿಗೆ ಕಾಲಿಡುತ್ತಿದ್ದಂತೆ ಬಾಬಿ ಡಿಯೋಲ್ ಪಾರ್ಟಿ ನೀಡುತ್ತಾರೆ. ಇಷ್ಟು ವರ್ಷ ನಡೆಸಿದ ಸಿದ್ಧತೆಯ ಕಾರಣ ಏನು ಎಂಬುದು ಅಲ್ಲಿ ರಿವೀಲ್ ಆಗುತ್ತದೆ. ಮಿಷನ್ ಒಂದಕ್ಕಾಗಿ ಆಲಿಯಾ ಅವರನ್ನ ಬಾಬಿ ಈ ರೀತಿ ಸಿದ್ಧ ಮಾಡಿರುತ್ತಾರೆ.

‘ಈ ಜಗತ್ತಲ್ಲಿ ಕುರಿ ಹಾಗೂ ನರಿ ಎರಡೇ ರೀತಿಯ ಜನ ಇರುತ್ತಾರೆ. ನಾನು ನರಿ. ನಿನ್ನದು ಯಾವ ವರ್ಗ’ ಎಂದು ಆಲಿಯಾಗೆ ಬಾಬಿ ಕೇಳುತ್ತಾರೆ. ಇದಕ್ಕೆ ನೇರವಾಗಿ ಉತ್ತರಿಸೋ ಆಲಿಯಾ, ‘ನರಿಯ ಮಗಳು ನರಿಯೇ ಆಗಿರುತ್ತಾಳೆ’ ಎನ್ನುತ್ತಾರೆ.

ಇದನ್ನೂ ಓದಿ: ‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ

ಟೀಸರ್ ಉದ್ದಕ್ಕೂ ಆಲಿಯಾ ಆ್ಯಕ್ಷನ್ ಮೆರೆದಿದ್ದಾರೆ. ಆಲ್ಫಾ ಅನ್ನೋದು ಸೀಕ್ರೇಟ್ ಮಿಷನ್ ಎಂಬ ರೀತಿಯಲ್ಲಿ ಟೀಸರ್ ತೋರಿಸಲಾಗಿದೆ. ವಿಶೇಷ ಎಂದರೆ ಜುಲೈ 3ರಂದು ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಶಿವ್ ರವೈಲ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ