AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರ ಜಗಳಕ್ಕೆ ಕಾರಣವಾಗಿದೆ ಆಲಿಯಾ ಭಟ್ ಮೆಹಂದಿ: ಏನಿದು ವಿವಾದ?

ಆಲಿಯಾ ಭಟ್ ತಮ್ಮ ಮದುವೆಯ ದಿನ ಹಾಕಿಸಿಕೊಂಡಿದ್ದ ಮೆಹಂದಿ ಡಿಸೈನ್ ಈಗ ವಿವಾದಕ್ಕೆ ಕಾರಣವಾಗಿದೆ! ಏನಿದು ವಿವಾದ? ಇಲ್ಲಿ ತಿಳಿಯಿರಿ...

ಇಬ್ಬರ ಜಗಳಕ್ಕೆ ಕಾರಣವಾಗಿದೆ ಆಲಿಯಾ ಭಟ್ ಮೆಹಂದಿ: ಏನಿದು ವಿವಾದ?
ಆಲಿಯಾ ಭಟ್
ಮಂಜುನಾಥ ಸಿ.
|

Updated on: Aug 09, 2023 | 11:54 PM

Share

ಆಲಿಯಾ ಭಟ್ (Alia Bhatt) ಮದುವೆಯಾಗಿ (Marriage) ಮುದ್ದಾದ ಹೆಣ್ಣು ಮಗುವಿನ ತಾಯಿಯೂ ಆಗಿದ್ದಾರೆ. ಆದರೆ ಈಗ ಆಲಿಯಾ ಭಟ್ ಮದುವೆಯ ಸಮಯದಲ್ಲಿ ಹಾಕಿಸಿಕೊಂಡಿದ್ದ ಮೆಹಂದಿ ವಿವಾದಕ್ಕೆ ಕಾರಣವಾಗಿದೆ. ಆಲಿಯಾ ಭಟ್ ಮೆಹಂದಿ (Mehandi) ಕುರಿತಾಗಿ ಇಬ್ಬರು ಕಲಾವಿದೆಯರು ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಸದ್ಯಕ್ಕೆ ಇವರ ಜಗಳ ಮಾಧ್ಯಮಗಳಿಗೆ ನೀಡುತ್ತಿರುವ ಹೇಳಿಕೆಗಳಿಗಷ್ಟೆ ಸೀಮಿತವಾಗಿದೆ. ಬೀದಿ ರಂಪವಾಗಲಿ ಅಥವಾ ನ್ಯಾಯಾಲಯದ ಮೆಟ್ಟಿಲಾಗಲಿ ಏರಿಲ್ಲ. ಹಾಗಿದ್ದರೆ ಏನಿದು ವಿವಾದ?

ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ರಣ್ವೀರ್ ಸಿಂಗ್ ಜೊತೆಗೆ ಆಲಿಯಾ ಭಟ್ ಈ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿದೆ. ಕೌಟುಂಬಿಕ ಕತೆಯನ್ನು ಒಳಗೊಂಡಿರುವ ಈ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡಿದ್ದು, ಸಿನಿಮಾದಲ್ಲಿ ಮದುವೆ, ಹಬ್ಬ ಆಚರಣೆ ಹೀಗೆ ಅನೇಕ ಸೆಲೆಬ್ರೇಟ್ ಮಾಡುವ ಸನ್ನಿವೇಶಗಳಿವೆ. ಆಲಿಯಾ ಹಾಗೂ ರಣ್ವೀರ್ ಸಿಂಗ್​ರ ಮದುವೆ ಸನ್ನಿವೇಶವೂ ಇದೆ.

ಸಿನಿಮಾದ ಮದುವೆಯ ದೃಶ್ಯದಲ್ಲಿ ಆಲಿಯಾ ಭಟ್ ಕೈಗೆ ಹಾಕಿಕೊಂಡಿರುವ ಮೆಹಂದಿ ಈಗ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದಲ್ಲಿ ಆಲಿಯಾ ಭಟ್ ಹಾಕಿಕೊಂಡಿರುವ ಮೆಹಂದಿ, ಆಲಿಯಾ ಭಟ್ ಮದುವೆಗೆ ಹಾಕಿಕೊಂಡಿದ್ದ ಮೆಹಂದಿಯೇ ಆಗಿದೆ. ಆಲಿಯಾರ ಮದುವೆಯ ಮೆಹಂದಿ ಡಿಸೈನ್ ಅನ್ನೇ ಸಿನಿಮಾದ ಚಿತ್ರೀಕರಣಕ್ಕೂ ಬಳಸಿಕೊಳ್ಳಲಾಗಿತ್ತು. ಆದರೆ ಈಗ ಆಲಿಯಾರ ಮದುವೆಗೆ ಮೆಹಂದಿ ಹಾಕಿದ್ದ ಕಲಾವಿದೆ ಈ ಬಗ್ಗೆ ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ:‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

ಸಿನಿಮಾದಲ್ಲಿ ಆಲಿಯಾರಿಗೆ ಮೆಹಂದಿ ಹಾಕಿದ್ದ ವೀಣಾ ನಗ್ಡ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿ, ”ಮದುವೆಗೆ ಹಾಕಲಾಗಿದ್ದ ಮೆಹಂದಿಯ ಕೆಲ ಭಾಗವನ್ನು ಉಳಿಸಿಕೊಂಡು ಅದರ ಮೇಲೆ ಬಣ್ಣದಿಂದ ತಿದ್ದಿದ್ದೇವೆ. ಆದರೆ ನಾವು ಮುಂಗೈನಿಂದ ಮೊಣಕೈ ವರೆಗೆ ಹೊಸ ಡಿಸೈನ್ ಹಾಕಿದ್ದೇವೆ ಅಲ್ಲದೆ ಬೆರಳುಗಳಿಗೂ ಮೂಲ ಡಿಸೈನ್ ಉಳಿಸಿಕೊಳ್ಳದೆ ಬೇರೆ ಡಿಸೈನ್ ಹಾಕಿದ್ದೇವೆ, ಆ ಮೂಲಕ ಹೊಸ ಲುಕ್ ಅನ್ನು ಮೆಹಂದಿಗೆ ನೀಡಿದ್ದೇವೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆಲಿಯಾ ಭಟ್​ರಿಗೆ ಮದುವೆಯಂದು ಮೆಹಂದಿ ಹಾಕಿದ್ದ ಕಲಾವಿದೆ ಜ್ಯೋತಿ ಚಡ್ಡಾ, ”ಮೂಲ ಮೆಹಂದಿಗೆ ಮೆರುಗು ತುಂಬುವ ಕಾರ್ಯವನ್ನು ಚೆನ್ನಾಗಿ ಮಾಡಿದ್ದಾರೆ. ಆದರೆ ಈಗ ಮಾಡಿರುವ ಮೆಹಂದಿ ಕಲೆಗೆ ನಾನು ಆಗ ಮಾಡಿದ್ದ ಮೆಹಂದಿಯನ್ನು ಬ್ಲೂ ಪ್ರಿಂಟ್ ಅನ್ನಾಗಿ ಬಳಸಿಕೊಳ್ಳಲಾಗಿದೆ. ನನ್ನ ಕಲೆಯನ್ನು ಆಧಾರವಾಗಿಟ್ಟುಕೊಂಡು ಅವರು ತಮ್ಮ ಕಲಾಪ್ರದರ್ಶನ ಮಾಡಿದ್ದಾರೆ. ಹೀಗಿದ್ದಾಗ ಮೂಲ ಕಲೆಗಾರರನ್ನು ಗುರುತಿಸುವ ಸೌಜನ್ಯವನ್ನು ಅವರು ತೋರಿಲ್ಲ” ಎಂದಿದ್ದಾರೆ. ಸದ್ಯಕ್ಕೆ ಈ ವಿವಾದ ಮಾತುಗಳಷ್ಟರಲ್ಲೇ ಇದೆ, ನ್ಯಾಯಾಲಯದ ಮೆಟ್ಟಿಲನ್ನೂ ಏರುತ್ತದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ