AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮೇಲೆ ಆಲಿಯಾ ಭಟ್ ಎಂದು ಕರೆಯುವಂತಿಲ್ಲ; ಹೆಸರು ಬದಲಿಸಿಕೊಂಡ ನಟಿ

Alia Bhatt: ಆಲಿಯಾ ಭಟ್ ತಮ್ಮ ಹೆಸರನ್ನು ಆಲಿಯಾ ಕಪೂರ್ ಎಂದು ಬದಲಿಸಿಕೊಂಡಿದ್ದಾರೆ. ಇದು ಅವರ ವಿವಾಹದ ನಂತರದ ಬೆಳವಣಿಗೆಯಾಗಿದೆ. ಹೋಟೆಲ್‌ನಲ್ಲಿ ಅವರ ಹೆಸರು ಆಲಿಯಾ ಕಪೂರ್ ಎಂದು ಬರೆಯಲ್ಪಟ್ಟಿರುವುದು ಇದಕ್ಕೆ ಪುರಾವೆಯಾಗಿದೆ. ಆದರೆ, ಅಭಿಮಾನಿಗಳು ಈ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

ಇನ್ಮೇಲೆ ಆಲಿಯಾ ಭಟ್ ಎಂದು ಕರೆಯುವಂತಿಲ್ಲ; ಹೆಸರು ಬದಲಿಸಿಕೊಂಡ ನಟಿ
ಆಲಿಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 12, 2025 | 11:28 AM

Share

ನಟಿ ಆಲಿಯಾ ಭಟ್ (Alia Bhatt) ಎಂದರೆ ಬಹುತೇಕರಿಗೆ ಗೊತ್ತಾಗುತ್ತದೆ. ಅವರ ಪರಿಚಯ ಬಹುತೇಕರಿಗೆ ಇದೆ. ಈಗ ಅವರು ಹೆಸರು ಬದಲಿಸಿಕೊಂಡಿದ್ದಾರೆ. ಚಿತ್ರರಂಗಕ್ಕೆ ಬಂದು ಇಷ್ಟು ವರ್ಷಗಳಾದ ಬಳಿಕ ಅವರು ಹೆಸರನ್ನು ಬದಲಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಆಲಿಯಾ ಅನ್ನೋದು ಹಾಗೆಯೇ ಇದೆ. ಆದರೆ, ಭಟ್ ಬದಲು ಅವರು ಕಪೂರ್ ಎಂದು ಬದಲಾಯಿಸಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಆಲಿಯಾ ಭಟ್ ಎಂದೇ ಇರಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಆಲಿಯಾ ಭಟ್ ಅವರು ವಿವಾಹ ಆಗಿದ್ದು ಕಪೂರ್ ಕುಟುಂಬದ ಕುಡಿ ರಣಬೀರ್​ನ. ವಿವಾಹದ ಬಳಿಕವೂ ಅವರನ್ನು ಆಲಿಯಾ ಭಟ್ ಎಂದೇ ಕರೆಯಲಾಗುತ್ತಿದೆ. ಈ ಮೊದಲು ಬಚ್ಚನ್ ಕುಟುಂಬ ಸೇರಿದ ಐಶ್ವರ್ಯಾ ರೈ ಅವರನ್ನು ಐಶ್ವರ್ಯಾ ರೈ ಬಚ್ಚನ್ ಎಂದು ಕರೆಯಲಾಗಿದೆ. ಕರೀನಾ ಕಪೂರ್ ಅವರನ್ನು ಕರೀನಾ ಕಪೂರ್ ಖಾನ್ ಎಂದು ಕರೆಯಲಾಗಿದೆ. ಆದರೆ, ಆಲಿಯಾನ ಎಂದಿಗೂ ಆಲಿಯಾ ಭಟ್ ಕಪೂರ್ ಎಂದು ಕರೆಯಲಾಗಿಲ್ಲ. ಆದರೆ, ಈಗ ಅವರು ಇದನ್ನು ಅಧಿಕೃತ ಮಾಡಿಕೊಂಡಂತಿದೆ.

ಆಲಿಯಾ ಭಟ್ ಅವರು ವ್ಲಾಗ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಹೋಟೆಲ್ ರೂಂನ ದೃಶ್ಯ ಕೂಡ ಇದೆ. ಹೋಟೆಲ್​ನಲ್ಲಿ ‘ಆಲಿಯಾ ಕಪೂರ್’ ಎಂದು ಬರೆಯಲಾಗಿದೆ. ಹೀಗಾಗಿ, ಆಲಿಯಾ ಭಟ್ ಅವರು ಅಧಿಕೃತವಾಗಿ ಹೆಸರು ಬದಲಿಸಿಕೊಂಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
Image
ಕೆಲಸದವರನ್ನು ಗೌರಿ ಖಾನ್ ಎಷ್ಟು ಉತ್ತಮವಾಗಿ ನೋಡಿಕೊಳ್ತಾರೆ ನೋಡಿ..
Image
ನನಗೆ ಮಾರ್ಗದರ್ಶನ ನೀಡಿದ್ದರೆ; ಡ್ರಗ್ಸ್ ಪಾರ್ಟಿ ಬಗ್ಗೆ ಮೌನ ಮುರಿದ ಮಂಗ್ಲಿ
Image
‘ಸಿತಾರೆ ಜಮೀನ್ ​ಪರ್’ ನೋಡಿ ವಿಮರ್ಶೆ ತಿಳಿಸಿದ ಸುಧಾ ಮೂರ್ತಿ

ಈ ಪೋಸ್ಟ್​ಗೆ ನಾನಾ ಕಮೆಂಟ್​ಗಳು ಬಂದಿವೆ. ಕೆಲವರು ‘ಅವರು ನನಗೆ ಯಾವಾಗಲೂ ಆಲಿಯಾ ಭಟ್. ಇದೇ ಬ್ರ್ಯಾಂಡ್. ಅವರ ಹೆಸರನ್ನು ಯಾರೂ ಬದಲಿಸಲು ಸಾಧ್ಯವಿಲ್ಲ’ ಎಂದು ಕೆಲವರು ಹೇಳಿದ್ದಾರೆ.  ‘ಆಲಿಯಾ ಕಪೂರ್ ಎಂದು ಕರೆಯಲು ಮನಸ್ಸೇ ಬರುತ್ತಿಲ್ಲ. ದಯವಿಟ್ಟು ಆಲಿಯಾ ಭಟ್ ಎಂದೇ ಇಟ್ಟುಕೊಳ್ಳಿ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಇದು ಹೋಟೆಲ್​ನವರ ತಪ್ಪಿರಬಹುದು ಎಂದು ಊಹಿಸಿದ್ದಾರೆ.

ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ದಕ್ಷಿಣದ ನಟನ ಬಗ್ಗೆ ಆಲಿಯಾ ಭಟ್ ಮಾತು

ಆಲಿಯಾ ಕಪೂರ್ ಕುಟುಂಬದವರನ್ನು ವಿವಾಹ ಆಗಿದ್ದಾರೆ. ಈ ಕಾರಣದಿಂದಲೇ ಆಲಿಯಾ ಕಪೂರ್ ಎಂದು ಹೋಟೆಲ್​ನವರು ಬದಲಿಸಿರಬಹುದು ಎಂಬುದು ಕೆಲವರ ಊಹೆ.  ಸದ್ಯ ಆಲಿಯಾ ಅವರು ಮಗಳು ರಹಾ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಸಿನಿಮಾಗಳನ್ನು ಕೂಡ ಮಾಡುತ್ತಿದ್ದಾರೆ. ‘ಲವ್ ಆ್ಯಂಡ್ ವಾರ್’ ಸಿನಿಮಾದಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Thu, 12 June 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​