AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಎಲ್ಲಿದ್ದಾಳೆ ಎಂದು ತಿಳಿಯದೆ ಊಟ ಮಾಡಲ್ಲ, ಬಾತ್​ರೂಮ್ ಹೋಗಲ್ಲ ಎಂದ ರಣಬೀರ್ ಕಪೂರ್

‘ಬಹ್ಮಾಸ್ತ್ರ’ ಸಿನಿಮಾ ತೆರೆಕಂಡ ನಂತರವೂ ರಣಬೀರ್ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಆಲಿಯಾ ಬಗ್ಗೆ ಮಾತನಾಡಿದ್ದಾರೆ. 

ಆಲಿಯಾ ಎಲ್ಲಿದ್ದಾಳೆ ಎಂದು ತಿಳಿಯದೆ ಊಟ ಮಾಡಲ್ಲ, ಬಾತ್​ರೂಮ್ ಹೋಗಲ್ಲ ಎಂದ ರಣಬೀರ್ ಕಪೂರ್
ರಣಬೀರ್-ಆಲಿಯಾ
TV9 Web
| Edited By: |

Updated on:Sep 18, 2022 | 11:19 AM

Share

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಧ್ಯೆ ಪ್ರೀತಿ ಹುಟ್ಟಿ ಹಲವು ವರ್ಷಗಳೇ ಕಳೆದಿದ್ದವು. ಏಪ್ರಿಲ್ ತಿಂಗಳಲ್ಲಿ ಇಬ್ಬರೂ ಮದುವೆ ಆಗುವ ಮೂಲಕ ಪ್ರೀತಿಗೆ ಹೊಸ ಅರ್ಥ ನೀಡಿದರು. ಈಗ ಈ ದಂಪತಿಯ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಆಲಿಯಾ ಭಟ್ ಪ್ರೆಗ್ನೆಂಟ್ ಆಗಿದ್ದು, ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ರಣಬೀರ್ ಕಪೂರ್ ಅವರು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಆಲಿಯಾ ಭಟ್ ಮೇಲೆ ರಣಬೀರ್ ಅವಲಂಬಿತರಾಗಿದ್ದಾರಂತೆ.

ರಣಬೀರ್ ಕಪೂರ್ ಹಾಗೂ ಆಲಿಯಾ ನಟನೆಯ ‘ಬಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಸಿನಿಮಾ ತೆರೆಕಂಡ ನಂತರವೂ ರಣಬೀರ್ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಆಲಿಯಾ ಬಗ್ಗೆ ಮಾತನಾಡಿದ್ದಾರೆ.

‘ನಾನು ಯಾರ ಮೇಲೂ ಅವಲಂಬಿತನಾಗಿಲ್ಲ ಎಂದು ಎಲ್ಲರಿಗೂ ಅನಿಸುತ್ತದೆ. ಆದರೆ, ನಿಜ ಹೇಳಬೇಕೆಂದರೆ ನಾನು ಆಲಿಯಾ ಭಟ್​ಗೆ ತುಂಬಾನೇ ಅವಲಂಬಿತನಾಗಿದ್ದೇನೆ. ಆಲಿಯಾ ಭಟ್ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂದು ತಿಳಿಯದೆ ಇದ್ದರೆ ನಾನು ಬಾತ್​ರೂಮ್​ಗೂ ಹೋಗುವುದಿಲ್ಲ, ಊಟವನ್ನೂ ಮಾಡುವುದಿಲ್ಲ. ಅವಳು ನನ್ನ ಜತೆ ಇರಬೇಕು. ನಾವು ಮಾತನಾಡದೇ ಇದ್ದರೂ ಆಲಿಯಾ ಸದಾ ನನ್ನ ಹತ್ತಿರವೇ ಇರಬೇಕು’ ಎಂದಿದ್ದಾರೆ ರಣಬೀರ್ ಕಪೂರ್.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಆಲಿಯಾ ಹಾಗೂ ರಣಬೀರ್ ಕಪೂರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಾಂತರ ಮಂದಿ ಈ ದಂಪತಿಯನ್ನು ಇಷ್ಟಪಡುತ್ತಾರೆ. ಮದುವೆ ಆದ ಕೇವಲ ಎರಡೂವರೆ ತಿಂಗಳಿಗೆ ಆಲಿಯಾ ಪ್ರೆಗ್ನೆಂಟ್ ಎಂದು ಘೋಷಿಸಿದರು. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿತ್ತು. ಇತ್ತೀಚೆಗೆ ಆಲಿಯಾ ಸಿನಿಮಾ ಶೂಟಿಂಗ್​ಗಾಗಿ ಲಂಡನ್​ಗೆ ತೆರಳಿದ್ದರು. ಮರಳಿ ಬಂದ ನಂತರ ಆಲಿಯಾರನ್ನು ಸ್ವಾಗತಿಸಲು ರಣಬೀರ್ ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ತಗ್ಗುತ್ತಿದೆ ‘ಬ್ರಹ್ಮಾಸ್ತ್ರ’ ಸಿನಿಮಾ ಕಲೆಕ್ಷನ್; ರಣಬೀರ್​-ಆಲಿಯಾ ಚಿತ್ರ ಬಾಚಿದ ಹಣ ಎಷ್ಟು?

ರಣಬೀರ್​-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ಬಾಲಿವುಡ್​ಗೆ ಚೇತರಿಕೆ ಸಿಕ್ಕಿದೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

Published On - 7:41 am, Sun, 18 September 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!