AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಎಲ್ಲಿದ್ದಾಳೆ ಎಂದು ತಿಳಿಯದೆ ಊಟ ಮಾಡಲ್ಲ, ಬಾತ್​ರೂಮ್ ಹೋಗಲ್ಲ ಎಂದ ರಣಬೀರ್ ಕಪೂರ್

‘ಬಹ್ಮಾಸ್ತ್ರ’ ಸಿನಿಮಾ ತೆರೆಕಂಡ ನಂತರವೂ ರಣಬೀರ್ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಆಲಿಯಾ ಬಗ್ಗೆ ಮಾತನಾಡಿದ್ದಾರೆ. 

ಆಲಿಯಾ ಎಲ್ಲಿದ್ದಾಳೆ ಎಂದು ತಿಳಿಯದೆ ಊಟ ಮಾಡಲ್ಲ, ಬಾತ್​ರೂಮ್ ಹೋಗಲ್ಲ ಎಂದ ರಣಬೀರ್ ಕಪೂರ್
ರಣಬೀರ್-ಆಲಿಯಾ
TV9 Web
| Edited By: |

Updated on:Sep 18, 2022 | 11:19 AM

Share

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಧ್ಯೆ ಪ್ರೀತಿ ಹುಟ್ಟಿ ಹಲವು ವರ್ಷಗಳೇ ಕಳೆದಿದ್ದವು. ಏಪ್ರಿಲ್ ತಿಂಗಳಲ್ಲಿ ಇಬ್ಬರೂ ಮದುವೆ ಆಗುವ ಮೂಲಕ ಪ್ರೀತಿಗೆ ಹೊಸ ಅರ್ಥ ನೀಡಿದರು. ಈಗ ಈ ದಂಪತಿಯ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಆಲಿಯಾ ಭಟ್ ಪ್ರೆಗ್ನೆಂಟ್ ಆಗಿದ್ದು, ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ರಣಬೀರ್ ಕಪೂರ್ ಅವರು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಆಲಿಯಾ ಭಟ್ ಮೇಲೆ ರಣಬೀರ್ ಅವಲಂಬಿತರಾಗಿದ್ದಾರಂತೆ.

ರಣಬೀರ್ ಕಪೂರ್ ಹಾಗೂ ಆಲಿಯಾ ನಟನೆಯ ‘ಬಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಸಿನಿಮಾ ತೆರೆಕಂಡ ನಂತರವೂ ರಣಬೀರ್ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಆಲಿಯಾ ಬಗ್ಗೆ ಮಾತನಾಡಿದ್ದಾರೆ.

‘ನಾನು ಯಾರ ಮೇಲೂ ಅವಲಂಬಿತನಾಗಿಲ್ಲ ಎಂದು ಎಲ್ಲರಿಗೂ ಅನಿಸುತ್ತದೆ. ಆದರೆ, ನಿಜ ಹೇಳಬೇಕೆಂದರೆ ನಾನು ಆಲಿಯಾ ಭಟ್​ಗೆ ತುಂಬಾನೇ ಅವಲಂಬಿತನಾಗಿದ್ದೇನೆ. ಆಲಿಯಾ ಭಟ್ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂದು ತಿಳಿಯದೆ ಇದ್ದರೆ ನಾನು ಬಾತ್​ರೂಮ್​ಗೂ ಹೋಗುವುದಿಲ್ಲ, ಊಟವನ್ನೂ ಮಾಡುವುದಿಲ್ಲ. ಅವಳು ನನ್ನ ಜತೆ ಇರಬೇಕು. ನಾವು ಮಾತನಾಡದೇ ಇದ್ದರೂ ಆಲಿಯಾ ಸದಾ ನನ್ನ ಹತ್ತಿರವೇ ಇರಬೇಕು’ ಎಂದಿದ್ದಾರೆ ರಣಬೀರ್ ಕಪೂರ್.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಆಲಿಯಾ ಹಾಗೂ ರಣಬೀರ್ ಕಪೂರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಾಂತರ ಮಂದಿ ಈ ದಂಪತಿಯನ್ನು ಇಷ್ಟಪಡುತ್ತಾರೆ. ಮದುವೆ ಆದ ಕೇವಲ ಎರಡೂವರೆ ತಿಂಗಳಿಗೆ ಆಲಿಯಾ ಪ್ರೆಗ್ನೆಂಟ್ ಎಂದು ಘೋಷಿಸಿದರು. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿತ್ತು. ಇತ್ತೀಚೆಗೆ ಆಲಿಯಾ ಸಿನಿಮಾ ಶೂಟಿಂಗ್​ಗಾಗಿ ಲಂಡನ್​ಗೆ ತೆರಳಿದ್ದರು. ಮರಳಿ ಬಂದ ನಂತರ ಆಲಿಯಾರನ್ನು ಸ್ವಾಗತಿಸಲು ರಣಬೀರ್ ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ತಗ್ಗುತ್ತಿದೆ ‘ಬ್ರಹ್ಮಾಸ್ತ್ರ’ ಸಿನಿಮಾ ಕಲೆಕ್ಷನ್; ರಣಬೀರ್​-ಆಲಿಯಾ ಚಿತ್ರ ಬಾಚಿದ ಹಣ ಎಷ್ಟು?

ರಣಬೀರ್​-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ಬಾಲಿವುಡ್​ಗೆ ಚೇತರಿಕೆ ಸಿಕ್ಕಿದೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

Published On - 7:41 am, Sun, 18 September 22

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು