AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿಪುರುಷ್ ಸಿನಿಮಾಕ್ಕೆ ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್

Adipurush: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾಕ್ಕೆ ಅಲಹಾಬಾದ್ ಹೈಕೋರ್ಟ್ ಛೀಮಾರಿ ಹಾಕಿದೆ. ವಯಸ್ಕರ ಸಿನಿಮಾದಲ್ಲಿರಬೇಕಾದ ದೃಶ್ಯಗಳು ರಾಮಾಯಣದ ಸಿನಿಮಾದಲ್ಲಿದೆ ಎಂದು ಕಟು ಟೀಕೆ ಮಾಡಿದೆ.

ಆದಿಪುರುಷ್ ಸಿನಿಮಾಕ್ಕೆ ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್
ಆದಿಪುರುಷ್
ಮಂಜುನಾಥ ಸಿ.
|

Updated on: Jun 27, 2023 | 9:21 PM

Share

ಪ್ರಭಾಸ್ (Prabhas) ನಟನೆಯ ಬಹುಕೋಟಿ ಸಿನಿಮಾ ಆದಿಪುರುಷ್ (Adipurush) ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಮೊತ್ತವನ್ನೇನೋ ಕಲೆ ಹಾಕಿದೆ ಆದರೆ ಜನರ ತೀವ್ರ ಟೀಕೆಗೆ ಗುರಿಯಾಗಿದೆ. ರಾಮಾಯಣ (Ramayan) ಕತೆ ಆಧರಿತ ಈ ಸಿನಿಮಾದ ಮೇಕಿಂಗ್, ಪಾತ್ರಗಳ ವೇಷ, ಸಂಭಾಷಣೆ, ಕಲಾವಿದರ ನಟನೆ, ಐತಿಹಾಸಿಕ ಸ್ಥಳಗಳ ಮರುಸೃಷ್ಟಿ ಇನ್ನೂ ಹಲವು ವಿಷಯಗಳ ಬಗ್ಗೆ ಟೀಕಿಸಲಾಗುತ್ತಿದೆ. ಆದಿಪುರುಷ್ ಸಿನಿಮಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಹಲವೆಡೆ ಸಿನಿಮಾದ ವಿರುದ್ಧ ದೂರುಗಳು ಸಹ ದಾಖಲಾಗಿವೆ. ಇದೀಗ ಅಲಹಾಬಾದ್ ಹೈಕೋರ್ಟ್ ಸಹ ಆದಿಪುರುಷ್ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಛೀಮಾರಿ ಹಾಕಿದೆ.

ಈ ಸಿನಿಮಾದ ಸಂಭಾಷಣೆ ಹಲೆವೆಡೆ ಪ್ರಶ್ನಾರ್ಹವಾಗಿದೆ ಎಂದಿರುವ ನ್ಯಾಯಮೂರ್ತಿಗಳ ಪೀಠ, ಈ ಪ್ರಕರಣದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಶುಕ್ಲಾ ಅನ್ನು ಪ್ರತಿವಾದಿ ಮಾಡಿ ಎಂದು ಸೂಚಿಸಿದೆ. ಮಾತ್ರವಲ್ಲದೆ, ”ಹಿಂದೂಗಳು ಸಹಿಷ್ಣುಗಳು ಎಂದು ಹೇಳಲಾಗುತ್ತದೆ, ಹಾಗೆಂದು ಆ ಸಹಿಷ್ಣುತೆಯ ಪರೀಕ್ಷೆ ಮಾಡಲಾಗುತ್ತಿದೆಯಾ?” ಎಂದು ಖಾರವಾಗಿಯೇ ನ್ಯಾಯಾಲಯ ಪ್ರಶ್ನಿಸಿದೆ.

”ಹನುಮ ಹಾಗೂ ಸೀತೆಯರನ್ನು ಅವರೇನೂ ಅಲ್ಲ ಎಂಬ ರೀತಿಯಲ್ಲಿ ಚಿತ್ರಿಸಲಾಗಿದೆ. ಕೆಲವು ದೃಶ್ಯಗಳಂತೂ ಎ ಪ್ರಮಾಣ ಪತ್ರ ಪಡೆದ ಸಿನಿಮಾದಲ್ಲಿ ಇರಬೇಕಾದ ದೃಶ್ಯಗಳಿವೆ. ಈ ಸಿನಿಮಾವನ್ನು ನೋಡುವುದೇ ಕಷ್ಟ. ಪುಣ್ಯಕ್ಕೆ ಈ ಸಿನಿಮಾ ನೋಡಿದ ಜನ ಶಾಂತರೀತಿಯಲ್ಲಿ ವರ್ತಿಸಿದ್ದಾರೆ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿಲ್ಲ. ಕೆಲವು ದೃಶ್ಯಗಳನ್ನು ಸಿನಿಮಾ ಬಿಡುಗಡೆಗೆ ಮುನ್ನವೇ ತೆಗೆದು ಹಾಕಬೇಕಿತ್ತು. ಸೆನ್ಸಾರ್ ಬೋರ್ಡ್ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದೆಯೇ” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:Om Raut: ಸಾವಿರ ಕೋಟಿ ರೂ. ಬಜೆಟ್​ನಲ್ಲಿ ‘ಆದಿಪುರುಷ್​ 2’ ಮಾಡುವ ಪ್ಲಾನ್​; ನಿರ್ದೇಶಕರ ಐಡಿಯಾಗೆ ಪ್ರಭಾಸ್​ ಏನಂದ್ರು?

ವಿವಾದಕ್ಕೆ ಕಾರಣವಾಗಿದ್ದ ಸಂಭಾಷಣೆಗಳನ್ನು ತೆಗೆಯಲಾಗಿದೆ ಎಂದು ವಕೀಲರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ, ”ಸಂಭಾಷಣೆಗಳನ್ನು ತೆಗೆದು ಬೇರೆ ಸೇರಿಸಿದ್ದೀರಿ ಆದರೆ ದೃಶ್ಯಗಳಿಗೆ ಏನು ಮಾಡಿದ್ದೀರಿ? ಅವು ಹಾಗೆಯೇ ಇವೆಯಲ್ಲವೆ?” ಎಂದು ಪ್ರಶ್ನಿಸಿದ್ದಾರೆ ನ್ಯಾಯಮೂರ್ತಿಗಳು. ಸಿನಿಮಾಕ್ಕೆ ಪ್ರದರ್ಶನಕ್ಕೆ ಮುನ್ನ ಡಿಸ್ಕೇಮರ್ ಹಾಕಿರುವ ಬಗ್ಗೆ ಗಮನ ಸೆಳೆದಾಗ ಆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಪೀಠ, ”ನೀವು ರಾಮ, ಲಕ್ಷ್ಮಣ, ಸೀತೆ, ರಾವಣ, ಲಂಕೆಯನ್ನು ತೋರಿಸಿ ಇದು ರಾಮಾಯಣ ಅಲ್ಲ ಎಂದು ಹೇಳುತ್ತೀರಿ. ದೇಶದ ಜನರನ್ನು ತಲೆ ಇಲ್ಲದವರು ಎಂದು ತಿಳಿದಿದ್ದೀರಾ?” ಎಂದು ಪ್ರಶ್ನೆ ಮಾಡಿದೆ.

ಆದಿಪುರುಷ್ ಸಿನಿಮಾ ಬಿಡುಗಡೆ ಆದಾಗಿನಿಂದಲೂ ವಿವಾದದಲ್ಲಿಯೇ ಇದೆ. ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಿನಿಮಾದ ಸಂಭಾಷಣೆಗಳು ಕೀಳು ಅಭಿರುಚಿಯಿಂದ ಕೂಡಿವೆ. ಸಿನಿಮಾದ ನಿರ್ದೇಶಕರು ಮೂಲ ಕತೆಯಲ್ಲಿ ಇಲ್ಲದ ದೃಶ್ಯಗಳನ್ನು ಸೇರಿಸಿದ್ದಾರೆ. ರಾವಣನ ಪಾತ್ರ ಸೇರಿದಂತೆ ಕೆಲವು ಪಾತ್ರಗಳ ವ್ಯಕ್ತಿತ್ವವನ್ನು ತಿರುಚಿದ್ದಾರೆ. ಕತೆಗೆ ನಿಷ್ಠರಾಗುವ ಬದಲಿಗೆ ಹೀರೋಯಿಸಂಗೆ ಹೆಚ್ಚು ಒತ್ತು ನೀಡಲಾಗಿದೆ. ಕೆಲವು ಪಾತ್ರಗಳನ್ನು ಕೈಬಿಡಲಾಗಿದೆ, ಪಾತ್ರಗಳ ವೇಷ ಭೂಷಣಗಳನ್ನು ಬದಲಾಯಿಸಲಾಗಿದೆ, ಕೇಶ ವಿನ್ಯಾಸಗಳನ್ನು ಬದಲಾಯಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಆದಿಪುರುಷ್ ಸಿನಿಮಾವನ್ನು ಓಂ ರಾವತ್ ನಿರ್ದೇಶನ ಮಾಡಿದ್ದು ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!