AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿಪುರುಷ್ ಸಿನಿಮಾಕ್ಕೆ ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್

Adipurush: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾಕ್ಕೆ ಅಲಹಾಬಾದ್ ಹೈಕೋರ್ಟ್ ಛೀಮಾರಿ ಹಾಕಿದೆ. ವಯಸ್ಕರ ಸಿನಿಮಾದಲ್ಲಿರಬೇಕಾದ ದೃಶ್ಯಗಳು ರಾಮಾಯಣದ ಸಿನಿಮಾದಲ್ಲಿದೆ ಎಂದು ಕಟು ಟೀಕೆ ಮಾಡಿದೆ.

ಆದಿಪುರುಷ್ ಸಿನಿಮಾಕ್ಕೆ ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್
ಆದಿಪುರುಷ್
ಮಂಜುನಾಥ ಸಿ.
|

Updated on: Jun 27, 2023 | 9:21 PM

Share

ಪ್ರಭಾಸ್ (Prabhas) ನಟನೆಯ ಬಹುಕೋಟಿ ಸಿನಿಮಾ ಆದಿಪುರುಷ್ (Adipurush) ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಮೊತ್ತವನ್ನೇನೋ ಕಲೆ ಹಾಕಿದೆ ಆದರೆ ಜನರ ತೀವ್ರ ಟೀಕೆಗೆ ಗುರಿಯಾಗಿದೆ. ರಾಮಾಯಣ (Ramayan) ಕತೆ ಆಧರಿತ ಈ ಸಿನಿಮಾದ ಮೇಕಿಂಗ್, ಪಾತ್ರಗಳ ವೇಷ, ಸಂಭಾಷಣೆ, ಕಲಾವಿದರ ನಟನೆ, ಐತಿಹಾಸಿಕ ಸ್ಥಳಗಳ ಮರುಸೃಷ್ಟಿ ಇನ್ನೂ ಹಲವು ವಿಷಯಗಳ ಬಗ್ಗೆ ಟೀಕಿಸಲಾಗುತ್ತಿದೆ. ಆದಿಪುರುಷ್ ಸಿನಿಮಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಹಲವೆಡೆ ಸಿನಿಮಾದ ವಿರುದ್ಧ ದೂರುಗಳು ಸಹ ದಾಖಲಾಗಿವೆ. ಇದೀಗ ಅಲಹಾಬಾದ್ ಹೈಕೋರ್ಟ್ ಸಹ ಆದಿಪುರುಷ್ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಛೀಮಾರಿ ಹಾಕಿದೆ.

ಈ ಸಿನಿಮಾದ ಸಂಭಾಷಣೆ ಹಲೆವೆಡೆ ಪ್ರಶ್ನಾರ್ಹವಾಗಿದೆ ಎಂದಿರುವ ನ್ಯಾಯಮೂರ್ತಿಗಳ ಪೀಠ, ಈ ಪ್ರಕರಣದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಶುಕ್ಲಾ ಅನ್ನು ಪ್ರತಿವಾದಿ ಮಾಡಿ ಎಂದು ಸೂಚಿಸಿದೆ. ಮಾತ್ರವಲ್ಲದೆ, ”ಹಿಂದೂಗಳು ಸಹಿಷ್ಣುಗಳು ಎಂದು ಹೇಳಲಾಗುತ್ತದೆ, ಹಾಗೆಂದು ಆ ಸಹಿಷ್ಣುತೆಯ ಪರೀಕ್ಷೆ ಮಾಡಲಾಗುತ್ತಿದೆಯಾ?” ಎಂದು ಖಾರವಾಗಿಯೇ ನ್ಯಾಯಾಲಯ ಪ್ರಶ್ನಿಸಿದೆ.

”ಹನುಮ ಹಾಗೂ ಸೀತೆಯರನ್ನು ಅವರೇನೂ ಅಲ್ಲ ಎಂಬ ರೀತಿಯಲ್ಲಿ ಚಿತ್ರಿಸಲಾಗಿದೆ. ಕೆಲವು ದೃಶ್ಯಗಳಂತೂ ಎ ಪ್ರಮಾಣ ಪತ್ರ ಪಡೆದ ಸಿನಿಮಾದಲ್ಲಿ ಇರಬೇಕಾದ ದೃಶ್ಯಗಳಿವೆ. ಈ ಸಿನಿಮಾವನ್ನು ನೋಡುವುದೇ ಕಷ್ಟ. ಪುಣ್ಯಕ್ಕೆ ಈ ಸಿನಿಮಾ ನೋಡಿದ ಜನ ಶಾಂತರೀತಿಯಲ್ಲಿ ವರ್ತಿಸಿದ್ದಾರೆ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿಲ್ಲ. ಕೆಲವು ದೃಶ್ಯಗಳನ್ನು ಸಿನಿಮಾ ಬಿಡುಗಡೆಗೆ ಮುನ್ನವೇ ತೆಗೆದು ಹಾಕಬೇಕಿತ್ತು. ಸೆನ್ಸಾರ್ ಬೋರ್ಡ್ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದೆಯೇ” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:Om Raut: ಸಾವಿರ ಕೋಟಿ ರೂ. ಬಜೆಟ್​ನಲ್ಲಿ ‘ಆದಿಪುರುಷ್​ 2’ ಮಾಡುವ ಪ್ಲಾನ್​; ನಿರ್ದೇಶಕರ ಐಡಿಯಾಗೆ ಪ್ರಭಾಸ್​ ಏನಂದ್ರು?

ವಿವಾದಕ್ಕೆ ಕಾರಣವಾಗಿದ್ದ ಸಂಭಾಷಣೆಗಳನ್ನು ತೆಗೆಯಲಾಗಿದೆ ಎಂದು ವಕೀಲರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ, ”ಸಂಭಾಷಣೆಗಳನ್ನು ತೆಗೆದು ಬೇರೆ ಸೇರಿಸಿದ್ದೀರಿ ಆದರೆ ದೃಶ್ಯಗಳಿಗೆ ಏನು ಮಾಡಿದ್ದೀರಿ? ಅವು ಹಾಗೆಯೇ ಇವೆಯಲ್ಲವೆ?” ಎಂದು ಪ್ರಶ್ನಿಸಿದ್ದಾರೆ ನ್ಯಾಯಮೂರ್ತಿಗಳು. ಸಿನಿಮಾಕ್ಕೆ ಪ್ರದರ್ಶನಕ್ಕೆ ಮುನ್ನ ಡಿಸ್ಕೇಮರ್ ಹಾಕಿರುವ ಬಗ್ಗೆ ಗಮನ ಸೆಳೆದಾಗ ಆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಪೀಠ, ”ನೀವು ರಾಮ, ಲಕ್ಷ್ಮಣ, ಸೀತೆ, ರಾವಣ, ಲಂಕೆಯನ್ನು ತೋರಿಸಿ ಇದು ರಾಮಾಯಣ ಅಲ್ಲ ಎಂದು ಹೇಳುತ್ತೀರಿ. ದೇಶದ ಜನರನ್ನು ತಲೆ ಇಲ್ಲದವರು ಎಂದು ತಿಳಿದಿದ್ದೀರಾ?” ಎಂದು ಪ್ರಶ್ನೆ ಮಾಡಿದೆ.

ಆದಿಪುರುಷ್ ಸಿನಿಮಾ ಬಿಡುಗಡೆ ಆದಾಗಿನಿಂದಲೂ ವಿವಾದದಲ್ಲಿಯೇ ಇದೆ. ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಿನಿಮಾದ ಸಂಭಾಷಣೆಗಳು ಕೀಳು ಅಭಿರುಚಿಯಿಂದ ಕೂಡಿವೆ. ಸಿನಿಮಾದ ನಿರ್ದೇಶಕರು ಮೂಲ ಕತೆಯಲ್ಲಿ ಇಲ್ಲದ ದೃಶ್ಯಗಳನ್ನು ಸೇರಿಸಿದ್ದಾರೆ. ರಾವಣನ ಪಾತ್ರ ಸೇರಿದಂತೆ ಕೆಲವು ಪಾತ್ರಗಳ ವ್ಯಕ್ತಿತ್ವವನ್ನು ತಿರುಚಿದ್ದಾರೆ. ಕತೆಗೆ ನಿಷ್ಠರಾಗುವ ಬದಲಿಗೆ ಹೀರೋಯಿಸಂಗೆ ಹೆಚ್ಚು ಒತ್ತು ನೀಡಲಾಗಿದೆ. ಕೆಲವು ಪಾತ್ರಗಳನ್ನು ಕೈಬಿಡಲಾಗಿದೆ, ಪಾತ್ರಗಳ ವೇಷ ಭೂಷಣಗಳನ್ನು ಬದಲಾಯಿಸಲಾಗಿದೆ, ಕೇಶ ವಿನ್ಯಾಸಗಳನ್ನು ಬದಲಾಯಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಆದಿಪುರುಷ್ ಸಿನಿಮಾವನ್ನು ಓಂ ರಾವತ್ ನಿರ್ದೇಶನ ಮಾಡಿದ್ದು ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್