AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘3 ಈಡಿಯಟ್ಸ್​’, ‘ಬಾಹುಬಲಿ’ಗಿಂತಲೂ ‘ಪುಷ್ಪ’ ಸಿನಿಮಾದ ಯಶಸ್ಸು ದೊಡ್ಡದು ಎಂದ ಆಮಿರ್ ಖಾನ್

ಬಾಲಿವುಡ್​ ಹಂಗಾಮಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್​ ಖಾನ್​ ಮಾತನಾಡಿದ್ದಾರೆ. ಈ ವೇಳೆ ಸಿನಿಮಾದ ಯಶಸ್ಸನ್ನು ಯಾವ ರೀತಿಯಲ್ಲಿ ಅಳೆಯಬೇಕು ಎಂಬುದನ್ನು ಅವರು ಹೇಳಿದ್ದಾರೆ.

‘3 ಈಡಿಯಟ್ಸ್​’, ‘ಬಾಹುಬಲಿ’ಗಿಂತಲೂ ‘ಪುಷ್ಪ’ ಸಿನಿಮಾದ ಯಶಸ್ಸು ದೊಡ್ಡದು ಎಂದ ಆಮಿರ್ ಖಾನ್
ಅಲ್ಲು ಅರ್ಜುನ್​-ಆಮಿರ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 18, 2022 | 7:22 PM

ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ: ದಿ ರೈಸ್​’ (Pushpa: The Rise) ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾದ ಕಲೆಕ್ಷನ್​ 300 ಕೋಟಿ ರೂಪಾಯಿ ಗಡಿ ದಾಟಿದೆ. ಈ ಮೂಲಕ ಚಿತ್ರ ಬ್ಲಾಕ್​ಬಸ್ಟರ್​ ಹಿಟ್​ ಎನಿಸಿಕೊಂಡಿದೆ. ಈ ಸಿನಿಮಾ ಬಾಲಿವುಡ್​ನಲ್ಲೂ ಒಳ್ಳೆಯ ಕಲೆಕ್ಷನ್​ ಮಾಡಿದೆ. ಹಿಂದಿಗೆ ಡಬ್​ ಆಗಿ ತೆರೆ ಕಂಡ ಈ ಚಿತ್ರದ ಕಲೆಕ್ಷನ್​ 100 ಕೋಟಿ ರೂಪಾಯಿ ಸಮೀಪಿಸಿದೆ. ಈ ಚಿತ್ರದ ಬಗ್ಗೆ ಆಮಿರ್​ ಖಾನ್​ (Aamir Khan) ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲದೆ, ಗಳಿಕೆ ವಿಚಾರದಲ್ಲಿ ‘ಪುಷ್ಪ’ ಸಿನಿಮಾ ‘3 ಈಡಿಯಟ್ಸ್​’ ಅನ್ನೂ ಹಿಂದಿಕ್ಕಿದೆ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.  

ಬಾಲಿವುಡ್​ ಹಂಗಾಮಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್​ ಖಾನ್​ ಮಾತನಾಡಿದ್ದಾರೆ. ಈ ವೇಳೆ ಸಿನಿಮಾದ ಯಶಸ್ಸನ್ನು ಯಾವ ರೀತಿಯಲ್ಲಿ ಅಳೆಯಬೇಕು ಎಂಬುದನ್ನು ಅವರು ಹೇಳಿದ್ದಾರೆ. ‘ಚಿತ್ರದ ಯಶಸ್ಸನ್ನು ಅಳೆಯಲು ವಾರಾಂತ್ಯದ ಕಲೆಕ್ಷನ್​ ಹಾಗೂ ಸಿನಿಮಾದ ಒಟ್ಟೂ ಕಲೆಕ್ಷನ್​ ನಡುವೆ ಹೋಲಿಕೆ ಮಾಡಿ ನೋಡಬೇಕು. ‘3 ಈಡಿಯಟ್ಸ್​’ ಸಿನಿಮಾ ವಾರಾಂತ್ಯದಲ್ಲಿ 40 ಕೋಟಿ ಗಳಿಕೆ ಮಾಡಿತ್ತು. ಈ ಚಿತ್ರದ ಒಟ್ಟೂ ಗಳಿಕೆ 200 ಕೋಟಿ ರೂಪಾಯಿ. ಅಂದರೆ, ವಾರಾಂತ್ಯದ ಕಲೆಕ್ಷನ್​ಗಿಂತ ಐದು ಪಟ್ಟು ಹೆಚ್ಚು ಈ ಸಿನಿಮಾ ಗಳಿಕೆ ಮಾಡಿತ್ತು. ಹೀಗಾಗಿ, ಈ ಚಿತ್ರ ಉತ್ತಮವಾಗಿದೆ ಎನ್ನಬಹುದು. ವಾರಾಂತ್ಯದಲ್ಲಿ 100 ಕೋಟಿ ಗಳಿಸಿ, ಸಿನಿಮಾದ ಒಟ್ಟೂ ಗಳಿಕೆ 200 ಕೋಟಿ ಎಂದರೆ, ಆ ಸಿನಿಮಾ ಉತ್ತಮವಾಗಿಲ್ಲ ಎಂದರ್ಥ’ ಎಂದಿದ್ದಾರೆ ಆಮಿರ್​ ಖಾನ್ .

‘ಪುಷ್ಪ ಸಿನಿಮಾ ಮೊದಲ ವಾರಾಂತ್ಯದ ಕಲೆಕ್ಷನ್​ಗಿಂತ ​7.04 ಪಟ್ಟು ಹೆಚ್ಚು ಒಟ್ಟೂ ಕಲೆಕ್ಷನ್​ ಮಾಡಿದೆ. ಈ ಫಾರ್ಮುಲಾ ವಿಚಾರದಲ್ಲಿ, ಉರಿ: ದಿ ಸರ್ಜಿಕಲ್​ ಸ್ಟ್ರೈಕ್​ (6.87), ಬಾಹುಬಲಿ: ದಿ ಬಿಗಿನಿಂಗ್​ (5.31) 3 ಈಡಿಯಟ್ಸ್​ (5) ರೇಟಿಂಗ್​ ಕಡಿಮೆ. ಈ ಲೆಕ್ಕಕ್ಕೆ ಹೋಲಿಕೆ ಮಾಡಿದರೆ ಪುಷ್ಪ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಈ ಚಿತ್ರವನ್ನು ನೋಡೋಕೆ ಪ್ರೇಕ್ಷಕರು ಮತ್ತೆಮತ್ತೆ ಚಿತ್ರಮಂದಿರಕ್ಕೆ ಆಗಮಿಸಿದ್ದಾರೆ’ ಎಂದಿದ್ದಾರೆ ಆಮಿರ್​ ಖಾನ್​.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ

ಮಗಳ ಪಾತ್ರ ಮಾಡಿದ್ದ ನಟಿ ಜತೆ ಆಮಿರ್​ ಖಾನ್​ ಶಾದಿ? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

Published On - 6:04 pm, Tue, 18 January 22

ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ