Jawan: ಶಾರುಖ್​ ಖಾನ್​ ವಿಷಯದಲ್ಲಿ ಮನಸ್ಸು ಬದಲಾಯಿಸಿದ ಅಲ್ಲು ಅರ್ಜುನ್​? ‘ಜವಾನ್​’ ಬಗ್ಗೆ ಹಬ್ಬಿದೆ ಗಾಸಿಪ್​

Allu Arjun: ಬಹುತಾರಾಗಣ ಇರುವ ಕಾರಣಕ್ಕೆ ‘ಜವಾನ್​’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಅಲ್ಲು ಅರ್ಜುನ್​ ಅವರ ಪಾತ್ರದ ಬಗ್ಗೆಯೂ ಗಾಸಿಪ್​ ಜೋರಾಗಿದೆ.

Jawan: ಶಾರುಖ್​ ಖಾನ್​ ವಿಷಯದಲ್ಲಿ ಮನಸ್ಸು ಬದಲಾಯಿಸಿದ ಅಲ್ಲು ಅರ್ಜುನ್​? ‘ಜವಾನ್​’ ಬಗ್ಗೆ ಹಬ್ಬಿದೆ ಗಾಸಿಪ್​
ಶಾರುಖ್ ಖಾನ್, ಅಲ್ಲು ಅರ್ಜುನ್
Follow us
|

Updated on:Apr 10, 2023 | 7:59 PM

ನಟ ಶಾರುಖ್​ ಖಾನ್​ (Shah Rukh Khan) ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ‘ಜವಾನ್​’ ಚಿತ್ರದ ಬಗ್ಗೆ ಗಮನ ಹರಿಸಿದ್ದಾರೆ. ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾರುಖ್​ ಖಾನ್​ ಮತ್ತು ಅಟ್ಲಿ ಕುಮಾರ್​ ಕಾಂಬಿನೇಷನ್​ ಆದ್ದರಿಂದ ಈ ಪ್ರಾಜೆಕ್ಟ್​ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ‘ಜವಾನ್​’ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ‘ಪುಷ್ಪ 2’ ಚಿತ್ರದಲ್ಲಿ ಬ್ಯುಸಿ ಆಗಿರುವ ಅವರು ಡೇಟ್ಸ್​ ಕ್ಲ್ಯಾಶ್​ ಆದ ಕಾರಣದಿಂದ ಒಪ್ಪಿಕೊಳ್ಳಲಿಲ್ಲ ಎಂದು ಕೂಡ ಗುಸುಗುಸು ಹಬ್ಬಿತ್ತು. ಆದರೆ ಈಗ ಗಾಸಿಪ್​ ಮಂದಿ ಬೇರೆಯದೇ ವಿಷಯ ಹೇಳುತ್ತಿದ್ದಾರೆ. ಅಲ್ಲು ಅರ್ಜುನ್​ ಅವರು ‘ಜವಾನ್​’ (Jawan Movie) ಸಿನಿಮಾದಲ್ಲಿನ ತಮ್ಮ ಪಾತ್ರದ ಚಿತ್ರೀಕರಣವನ್ನು ಈಗಾಗಲೇ ಮುಗಿಸಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ತುಂಬ ಅದ್ದೂರಿಯಾಗಿ ಜವಾನ್​ ಸಿನಿಮಾ ಮೂಡಿಬರುತ್ತಿದೆ. ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಶಾರುಖ್​ ಖಾನ್ ವಹಿಸಿಕೊಂಡಿದ್ದಾರೆ. ಅವರ ಒಡೆತನದ ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​ ಸಂಸ್ಥೆ ಮೂಲಕ ಈ ಚಿತ್ರ ಸಿದ್ಧವಾಗುತ್ತಿದೆ. ಬಹುತಾರಾಗಣ ಇರುವ ಕಾರಣಕ್ಕೆ ‘ಜವಾನ್​’ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ನಯನತಾರಾ, ವಿಜಯ್​ ಸೇತುಪತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಅಲ್ಲು ಅರ್ಜುನ್​ ಅವರು ಅತಿಥಿ ಪಾತ್ರ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಬಾಲಿವುಡ್​ ಮತ್ತು ಸೌತ್​ ಸಿನಿಮಾ ಸೆಲೆಬ್ರಿಟಿಗಳ ನಡುವೆ ಈಗ ಬಾಂಧವ್ಯ ಚೆನ್ನಾಗಿ ಬೆಳೆದಿದೆ. ಸಲ್ಮಾನ್​ ಖಾನ್​ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಹಾಡಿನಲ್ಲಿ ಟಾಲಿವುಡ್​ನ ಸ್ಟಾರ್​ ನಟ ರಾಮ್​ ಚರಣ್​ ಅವರು ಡ್ಯಾನ್ಸ್​ ಮಾಡಿರುವುದು ಅಭಿಮಾನಿಗಳಿಗೆ ಇಷ್ಟ ಆಗಿದೆ. ಅದೇ ರೀತಿ ‘ಜವಾನ್​’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಗೆಸ್ಟ್​ ಅಪಿಯರೆನ್ಸ್​ ನೀಡಿದರೆ ಫ್ಯಾನ್ಸ್​ ಖಂಡಿತಾ ಇಷ್ಟಪಡುತ್ತಾರೆ.

ಇದನ್ನೂ ಓದಿ: Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ

ಸದ್ಯಕ್ಕಂತೂ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿರುವುದರಿಂದ ಅದಕ್ಕೆ ತಕ್ಕಂತೆಯೇ ಇಡೀ ಚಿತ್ರತಂಡ ಕಾರ್ಯ ನಿರತವಾಗಿದೆ. ಈ ಬ್ಯುಸಿ ಶೆಡ್ಯೂಲ್​ ಮಧ್ಯೆ ಅವರು ‘ಜವಾನ್​’ ಚಿತ್ರಕ್ಕಾಗಿ ಡೇಟ್ಸ್​ ನೀಡಲು ಹೇಗೆ ಸಾಧ್ಯವಾಯ್ತು ಎಂಬ ಪ್ರಶ್ನೆ ಕೂಡ ಫ್ಯಾನ್ಸ್​ ಮನದಲ್ಲಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:59 pm, Mon, 10 April 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ