AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​

Shah Rukh Khan: ಅಲ್ಲು ಅರ್ಜುನ್​ ಅವರದ್ದು ಅತಿಥಿ ಪಾತ್ರ ಆಗಿರಲಿದ್ದು, ಅವರು ಈಗಾಗಲೇ ಶೂಟಿಂಗ್​ ಕೂಡ ಮುಗಿಸಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಹೊಸ ಮಾಹಿತಿ ಹಬ್ಬಿದೆ.

Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​
ಶಾರುಖ್​ ಖಾನ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: May 28, 2023 | 12:22 PM

Share

ಬಹುನಿರೀಕ್ಷಿತ ಸಿನಿಮಾಗಳ ಬಗ್ಗೆ ಗಾಸಿಪ್​ ವಲಯದಲ್ಲಿ ಸಾಕಷ್ಟು ಅಂತೆ-ಕಂತೆಗಳು ಹರಿದಾಡುತ್ತವೆ. ಶಾರುಖ್​ ಖಾನ್​ (Shah Rukh Khan) ನಟನೆಯ ‘ಜವಾನ್​’ ಸಿನಿಮಾ ಬಗ್ಗೆಯೂ ಸಿಕ್ಕಾಪಟ್ಟೆ ಗಾಸಿಪ್​ ಹುಟ್ಟಿಕೊಂಡಿವೆ. ಈ ಸಿನಿಮಾದಲ್ಲಿ ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ (Allu Arjun) ನಟಿಸುತ್ತಾರೆ ಎಂದು ಕೆಲವೇ ದಿನಗಳ ಹಿಂದೆ ಗುಸುಗುಸು ಕೇಳಿಬಂದಿತ್ತು. ಆದರೆ ಆ ಬಗ್ಗೆ ಚಿತ್ರತಂಡದಿಂದ ಯಾರೂ ಕೂಡ ಅಧಿಕೃತ ಹೇಳಿಕೆ ನೀಡಲಿಲ್ಲ. ಅಲ್ಲು ಅರ್ಜುನ್​ ಅವರದ್ದು ಅತಿಥಿ ಪಾತ್ರ ಆಗಿರಲಿದ್ದು, ಅವರು ಈಗಾಗಲೇ ಶೂಟಿಂಗ್​ ಕೂಡ ಮುಗಿಸಿದ್ದಾರೆ ಎನ್ನಲಾಗಿತ್ತು. ಈಗ ಹೊಸ ಮಾಹಿತಿ ಹಬ್ಬಿದೆ. ‘ಜವಾನ್​’ (Jawan) ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ನಟಿಸಿಲ್ಲ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಲ್ಲಿಯವರೆಗೂ ಇಂಥ ಅಂತೆ-ಕಂತೆಗಳು ಕೇಳಿಬರುವುದು ಸಹಜ. ಈ ಚಿತ್ರಕ್ಕೆ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ.

ಅಲ್ಲು ಅರ್ಜುನ್​ ಅವರು ಸದ್ಯಕ್ಕೆ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್​ ಮತ್ತು ಸೌತ್​ ಸಿನಿಮಾ ಇಂಡಸ್ಟ್ರಿ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಹಿಂದಿ ನಟರು ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸೋದು ಹೆಚ್ಚಾಗಿದೆ. ಅದೇ ರೀತಿ ಸೌತ್​ ಸ್ಟಾರ್​ಗಳಿಗೆ ಬಾಲಿವುಡ್​ ಸಿನಿಮಾಗಳಲ್ಲಿ ಅವಕಾಶ ಸಿಗುತ್ತಿದೆ. ಹಾಗಾಗಿ ‘ಜವಾನ್​’ ಚಿತ್ರದಲ್ಲಿ ಅಲ್ಲು ಅರ್ಜುನ್​ ನಟಿಸಬಹುದು ಎಂಬ ಗಾಸಿಪ್ ಹುಟ್ಟಿಕೊಂಡಿತ್ತು. ಆದರೆ ಅದು ನಿಜವಾಗುವಂತೆ ಕಾಣುತ್ತಿಲ್ಲ.

ಇದನ್ನೂ ಓದಿ: Pushpa 2: ಈ ವರ್ಷ ರಿಲೀಸ್ ಆಗಲ್ವಾ ‘ಪುಷ್ಪ 2’ ಸಿನಿಮಾ? ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಬೇಸರ

‘ಜವಾನ್​’ ಸಿನಿಮಾದಲ್ಲಿ ಸಾನ್ಯಾ ಮಲ್ಹೋತ್ರಾ:

ಶಾರುಖ್​ ಖಾನ್​ ಜೊತೆ ‘ಜವಾನ್​’ ಸಿನಿಮಾದಲ್ಲಿ ಸಾನ್ಯಾ ಮಲ್ಹೋತ್ರಾ ಕೂಡ ಬಣ್ಣ ಹಚ್ಚಿದ್ದಾರೆ ಎಂಬುದು ಈಗ ಖಚಿತವಾಗಿದೆ. ಸ್ವತಃ ಅವರೇ ಈ ವಿಷಯ ಸ್ಪಷ್ಟಪಡಿಸಿದ್ದಾರೆ ಎಂದು ‘ಈ ಟೈಮ್ಸ್​’ ಇತ್ತೀಚೆಗೆ ವರದಿ ಮಾಡಿತ್ತು. ನಯನತಾರಾ, ವಿಜಯ್​ ಸೇತುಪತಿ ಮುಂತಾದ ಘಟಾನುಘಟಿ ಕಲಾವಿದರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಸಾನ್ಯಾ ಮಲ್ಹೋತ್ರಾ ಅವರು ಸಹ ಈ ಬಹುನಿರೀಕ್ಷಿತ ಚಿತ್ರದಲ್ಲಿ ನಟಿಸಿರಬಹುದು ಎಂಬ ಗುಮಾನಿ ಹಲವರಿಗೆ ಮೂಡಿತ್ತು. ಆ ಬಗ್ಗೆ ಕೆಲವು ವರದಿಗಳು ಪ್ರಕಟ ಆಗಿದ್ದವು. ಈಗ ಆ ಗುಮಾನಿ ನಿಜವಾಗಿದೆ. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಸಾನ್ಯಾ ಮಲ್ಹೋತ್ರಾ ಅವರು ಖುಷಿಯಾಗಿದ್ದಾರೆ.

ಇದನ್ನೂ ಓದಿ: Shah Rukh Khan: ‘ಮಲ್ಲಿಕಾ ಶೆರಾವತ್​ ಜತೆ ನಾನು ಆಟ ಆಡಬಹುದಾ?’: ಶಾರುಖ್​ ಖಾನ್​ ಹಳೇ ವಿಡಿಯೋ ವೈರಲ್​

ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಸೃಷ್ಟಿ ಆಗಿದೆ. ಪ್ರಸ್ತುತ ಶಾರುಖ್​ ಖಾನ್​ ಅವರು ‘ಡಂಕಿ’ ಮತ್ತು ‘ಜವಾನ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಜವಾನ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್​ ದಿನಾಂಕ ತಿಳಿಸಲು ಇತ್ತೀಚೆಗೆ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಸೆಪ್ಟೆಂಬರ್​ 7ರಂದು ‘ಜವಾನ್​’ ತೆರೆಕಾಣಲಿದೆ ಎಂದು ಶಾರುಖ್​ ಖಾನ್​ ತಿಳಿಸಿದ್ದಾರೆ. ಶಾರುಖ್​ ಖಾನ್​ ಅವರ ಹೋಂ ಬ್ಯಾನರ್​ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ‘ಜವಾನ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಶಾರುಖ್​ ಪತ್ನಿ ಗೌರಿ ಖಾನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು