AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​

Shah Rukh Khan: ಅಲ್ಲು ಅರ್ಜುನ್​ ಅವರದ್ದು ಅತಿಥಿ ಪಾತ್ರ ಆಗಿರಲಿದ್ದು, ಅವರು ಈಗಾಗಲೇ ಶೂಟಿಂಗ್​ ಕೂಡ ಮುಗಿಸಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಹೊಸ ಮಾಹಿತಿ ಹಬ್ಬಿದೆ.

Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​
ಶಾರುಖ್​ ಖಾನ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: May 28, 2023 | 12:22 PM

Share

ಬಹುನಿರೀಕ್ಷಿತ ಸಿನಿಮಾಗಳ ಬಗ್ಗೆ ಗಾಸಿಪ್​ ವಲಯದಲ್ಲಿ ಸಾಕಷ್ಟು ಅಂತೆ-ಕಂತೆಗಳು ಹರಿದಾಡುತ್ತವೆ. ಶಾರುಖ್​ ಖಾನ್​ (Shah Rukh Khan) ನಟನೆಯ ‘ಜವಾನ್​’ ಸಿನಿಮಾ ಬಗ್ಗೆಯೂ ಸಿಕ್ಕಾಪಟ್ಟೆ ಗಾಸಿಪ್​ ಹುಟ್ಟಿಕೊಂಡಿವೆ. ಈ ಸಿನಿಮಾದಲ್ಲಿ ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ (Allu Arjun) ನಟಿಸುತ್ತಾರೆ ಎಂದು ಕೆಲವೇ ದಿನಗಳ ಹಿಂದೆ ಗುಸುಗುಸು ಕೇಳಿಬಂದಿತ್ತು. ಆದರೆ ಆ ಬಗ್ಗೆ ಚಿತ್ರತಂಡದಿಂದ ಯಾರೂ ಕೂಡ ಅಧಿಕೃತ ಹೇಳಿಕೆ ನೀಡಲಿಲ್ಲ. ಅಲ್ಲು ಅರ್ಜುನ್​ ಅವರದ್ದು ಅತಿಥಿ ಪಾತ್ರ ಆಗಿರಲಿದ್ದು, ಅವರು ಈಗಾಗಲೇ ಶೂಟಿಂಗ್​ ಕೂಡ ಮುಗಿಸಿದ್ದಾರೆ ಎನ್ನಲಾಗಿತ್ತು. ಈಗ ಹೊಸ ಮಾಹಿತಿ ಹಬ್ಬಿದೆ. ‘ಜವಾನ್​’ (Jawan) ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ನಟಿಸಿಲ್ಲ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಲ್ಲಿಯವರೆಗೂ ಇಂಥ ಅಂತೆ-ಕಂತೆಗಳು ಕೇಳಿಬರುವುದು ಸಹಜ. ಈ ಚಿತ್ರಕ್ಕೆ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ.

ಅಲ್ಲು ಅರ್ಜುನ್​ ಅವರು ಸದ್ಯಕ್ಕೆ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್​ ಮತ್ತು ಸೌತ್​ ಸಿನಿಮಾ ಇಂಡಸ್ಟ್ರಿ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಹಿಂದಿ ನಟರು ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸೋದು ಹೆಚ್ಚಾಗಿದೆ. ಅದೇ ರೀತಿ ಸೌತ್​ ಸ್ಟಾರ್​ಗಳಿಗೆ ಬಾಲಿವುಡ್​ ಸಿನಿಮಾಗಳಲ್ಲಿ ಅವಕಾಶ ಸಿಗುತ್ತಿದೆ. ಹಾಗಾಗಿ ‘ಜವಾನ್​’ ಚಿತ್ರದಲ್ಲಿ ಅಲ್ಲು ಅರ್ಜುನ್​ ನಟಿಸಬಹುದು ಎಂಬ ಗಾಸಿಪ್ ಹುಟ್ಟಿಕೊಂಡಿತ್ತು. ಆದರೆ ಅದು ನಿಜವಾಗುವಂತೆ ಕಾಣುತ್ತಿಲ್ಲ.

ಇದನ್ನೂ ಓದಿ: Pushpa 2: ಈ ವರ್ಷ ರಿಲೀಸ್ ಆಗಲ್ವಾ ‘ಪುಷ್ಪ 2’ ಸಿನಿಮಾ? ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಬೇಸರ

‘ಜವಾನ್​’ ಸಿನಿಮಾದಲ್ಲಿ ಸಾನ್ಯಾ ಮಲ್ಹೋತ್ರಾ:

ಶಾರುಖ್​ ಖಾನ್​ ಜೊತೆ ‘ಜವಾನ್​’ ಸಿನಿಮಾದಲ್ಲಿ ಸಾನ್ಯಾ ಮಲ್ಹೋತ್ರಾ ಕೂಡ ಬಣ್ಣ ಹಚ್ಚಿದ್ದಾರೆ ಎಂಬುದು ಈಗ ಖಚಿತವಾಗಿದೆ. ಸ್ವತಃ ಅವರೇ ಈ ವಿಷಯ ಸ್ಪಷ್ಟಪಡಿಸಿದ್ದಾರೆ ಎಂದು ‘ಈ ಟೈಮ್ಸ್​’ ಇತ್ತೀಚೆಗೆ ವರದಿ ಮಾಡಿತ್ತು. ನಯನತಾರಾ, ವಿಜಯ್​ ಸೇತುಪತಿ ಮುಂತಾದ ಘಟಾನುಘಟಿ ಕಲಾವಿದರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಸಾನ್ಯಾ ಮಲ್ಹೋತ್ರಾ ಅವರು ಸಹ ಈ ಬಹುನಿರೀಕ್ಷಿತ ಚಿತ್ರದಲ್ಲಿ ನಟಿಸಿರಬಹುದು ಎಂಬ ಗುಮಾನಿ ಹಲವರಿಗೆ ಮೂಡಿತ್ತು. ಆ ಬಗ್ಗೆ ಕೆಲವು ವರದಿಗಳು ಪ್ರಕಟ ಆಗಿದ್ದವು. ಈಗ ಆ ಗುಮಾನಿ ನಿಜವಾಗಿದೆ. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಸಾನ್ಯಾ ಮಲ್ಹೋತ್ರಾ ಅವರು ಖುಷಿಯಾಗಿದ್ದಾರೆ.

ಇದನ್ನೂ ಓದಿ: Shah Rukh Khan: ‘ಮಲ್ಲಿಕಾ ಶೆರಾವತ್​ ಜತೆ ನಾನು ಆಟ ಆಡಬಹುದಾ?’: ಶಾರುಖ್​ ಖಾನ್​ ಹಳೇ ವಿಡಿಯೋ ವೈರಲ್​

ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಸೃಷ್ಟಿ ಆಗಿದೆ. ಪ್ರಸ್ತುತ ಶಾರುಖ್​ ಖಾನ್​ ಅವರು ‘ಡಂಕಿ’ ಮತ್ತು ‘ಜವಾನ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಜವಾನ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್​ ದಿನಾಂಕ ತಿಳಿಸಲು ಇತ್ತೀಚೆಗೆ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಸೆಪ್ಟೆಂಬರ್​ 7ರಂದು ‘ಜವಾನ್​’ ತೆರೆಕಾಣಲಿದೆ ಎಂದು ಶಾರುಖ್​ ಖಾನ್​ ತಿಳಿಸಿದ್ದಾರೆ. ಶಾರುಖ್​ ಖಾನ್​ ಅವರ ಹೋಂ ಬ್ಯಾನರ್​ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ‘ಜವಾನ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಶಾರುಖ್​ ಪತ್ನಿ ಗೌರಿ ಖಾನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ