AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿಯಿಂದ ಯಶ್​ಗೆ ಸಿಕ್ಕಿತು ಎರಡು ಕೋಟಿ ಮೌಲ್ಯದ ಉಡುಗೊರೆ

ಅನಂತ್ ಅಂಬಾನಿ-ರಾಧಿಕಾ ಮದುವೆಯಲ್ಲಿ ದೇಶ-ವಿದೇಶದ ಹಲವು ಗಣ್ಯರು ಅತಿಥಿಗಳಾಗಿ ಭಾಗಿಯಾಗಿದ್ದರು. ನಟ ಯಶ್ ಸಹ ಮದುವೆಯಲ್ಲಿ ಭಾಗಿಯಾಗಿದ್ದರು. ಯಶ್​ಗೆ ಅಂಬಾನಿ ಕುಟುಂಬದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆ ದೊರೆತಿದೆ.

ಅಂಬಾನಿಯಿಂದ ಯಶ್​ಗೆ ಸಿಕ್ಕಿತು ಎರಡು ಕೋಟಿ ಮೌಲ್ಯದ ಉಡುಗೊರೆ
ಮಂಜುನಾಥ ಸಿ.
|

Updated on: Jul 14, 2024 | 12:57 PM

Share

ವಿಶ್ವದ ಟಾಪ್ ಹತ್ತು ಶ್ರೀಮಂತರಲ್ಲಿ ಒಬ್ಬರಾದ ಮುಕೇಶ್ ಅಂಬಾನಿ ತಮ್ಮ ಪುತ್ರ ಅನಂತ್ ಅಂಬಾನಿಯ ಮದುವೆಯನ್ನು ಬಲು ಅದ್ಧೂರಿಯಾಗಿ ಮಾಡುತ್ತಿದ್ದಾರೆ. ದೇಶ, ವಿದೇಶದ ಹಲವು ಸಿನಿಮಾ, ಪಾಪ್ ತಾರೆಯರು, ರಾಜಕಾರಣಿಗಳು, ಉದ್ಯಮಿಗಳು ಅಂಬಾನಿ ಪುತ್ರನ ಮದುವೆಗೆ ಆಗಮಿಸಿದ್ದಾರೆ. ಸುಮಾರು 6000 ಕೋಟಿ ಹಣವನ್ನು ಮುಕೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಖರ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ. ಎಷ್ಟರ ಮಟ್ಟಿಗೆ ಅದ್ಧೂರಿಯಾಗಿ ಮದುವೆ ಮಾಡುತ್ತಿದ್ದಾರೆಂದರೆ ಮದುವೆಗೆ ಬಂದ ಅತಿಥಿಗಳಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಯನ್ನು ಅಂಬಾನಿ ನೀಡಿದ್ದಾರೆ.

ಕನ್ನಡದ ನಟ ಯಶ್ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಸಹ ಮದುವೆಯಲ್ಲಿ ಭಾಗಿಯಾಗಿದ್ದರು. ಅವರಿಗೂ ಸಹ ಕೋಟ್ಯಂತರ ಮೌಲ್ಯದ ಉಡುಗೊರೆ ಅಂಬಾನಿ ಅವರಿಂದ ದೊರೆತಿದೆ. ಅಂಬಾನಿ, ಮದುವೆಗೆ ಬಂದ ಅತಿಥಿಗಳಿಗೆ ಬರೋಬ್ಬರಿ ಎರಡು ಕೋಟಿ ರೂಪಾಯಿ ಮೌಲ್ಯದ ದುಬಾರಿ ವಾಚ್ ಅನ್ನು ಉಡುಗೊರೆಯಾಗಿ ನೀಡಿದ್ದಾರಂತೆ. ಶಾರುಖ್ ಖಾನ್ ಸೇರಿದಂತೆ ಮದುವೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ಈ ದುಬಾರಿ ವಾಚು ಉಡುಗೊರೆಯಾಗಿ ದೊರೆತಿದೆ.

ಸ್ವಿಟ್ಜರ್​ಲ್ಯಾಂಡ್​ನ ಆಡಿಮೆರಾಸ್ ಪಿಗೆಟ್ ಬ್ರ್ಯಾಂಡ್​ನ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಅಂಬಾನಿ ಕುಟುಂಬದವರು ಬಂದ ಅತಿಥಿಗಳಿಗೆ ನೀಡಿದ್ದಾರೆ. ಈ ವಾಚಿನ ಬೆಲೆ ಸುಮಾರು 1.5 ರಿಂದ 2 ಕೋಟಿ ಎನ್ನಲಾಗುತ್ತಿದ್ದು, ಬಂದ ಪ್ರತಿಯೊಬ್ಬ ಅತಿಥಿಗೂ ಈ ವಾಚನ್ನು ನೀಡಲಾಗಿದೆ. ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚಿನ ಮೊತ್ತವನ್ನು ಕೇವಲ ಉಡುಗೊರೆಗಾಗಿಯೇ ಮುಕೇಶ್ ಅಂಬಾನಿ ಖರ್ಚು ಮಾಡಿದ್ದಾರೆ. ಅಂಬಾನಿ ಮದುವೆಯಲ್ಲಿ ಉಡುಗೊರೆಯಾಗಿ ಸಿಕ್ಕ ವಾಚುಗಳನ್ನು ಧರಿಸಿಕೊಂಡು ಕೆಲ ಸೆಲೆಬ್ರಿಟಿಗಳು ಫೋಟೊಗಳನ್ನು ತೆಗೆಸಿಕೊಂಡಿದ್ದಾರೆ.

ಮದುವೆಯ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್, ಸಲ್ಮಾನ್ ಖಾನ್ ಇನ್ನೂ ಕೆಲವರಿಗೆ ವಾಚ್​ನ ಜೊತೆಗೆ ಕೆಲವು ದುಬಾರಿ ಉಡುಗೊರೆಗಳನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಮದುವೆಯಲ್ಲಿ ಭಾಗವಹಿಸಿದ ನಟಿಯರು ಹಾಗೂ ಇತರೆ ಸೆಲೆಬ್ರಿಟಿ ಮಹಿಳೆಯರಿಗೆ ಭಾರಿ ದುಬಾರಿ ಸೀರೆಯ ಜೊತೆಗೆ ಚಿನ್ನದ ಆಭರಣವನ್ನು ಸಹ ನೀಡಲಾಗಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?