AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿಯಿಂದ ಯಶ್​ಗೆ ಸಿಕ್ಕಿತು ಎರಡು ಕೋಟಿ ಮೌಲ್ಯದ ಉಡುಗೊರೆ

ಅನಂತ್ ಅಂಬಾನಿ-ರಾಧಿಕಾ ಮದುವೆಯಲ್ಲಿ ದೇಶ-ವಿದೇಶದ ಹಲವು ಗಣ್ಯರು ಅತಿಥಿಗಳಾಗಿ ಭಾಗಿಯಾಗಿದ್ದರು. ನಟ ಯಶ್ ಸಹ ಮದುವೆಯಲ್ಲಿ ಭಾಗಿಯಾಗಿದ್ದರು. ಯಶ್​ಗೆ ಅಂಬಾನಿ ಕುಟುಂಬದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆ ದೊರೆತಿದೆ.

ಅಂಬಾನಿಯಿಂದ ಯಶ್​ಗೆ ಸಿಕ್ಕಿತು ಎರಡು ಕೋಟಿ ಮೌಲ್ಯದ ಉಡುಗೊರೆ
ಮಂಜುನಾಥ ಸಿ.
|

Updated on: Jul 14, 2024 | 12:57 PM

Share

ವಿಶ್ವದ ಟಾಪ್ ಹತ್ತು ಶ್ರೀಮಂತರಲ್ಲಿ ಒಬ್ಬರಾದ ಮುಕೇಶ್ ಅಂಬಾನಿ ತಮ್ಮ ಪುತ್ರ ಅನಂತ್ ಅಂಬಾನಿಯ ಮದುವೆಯನ್ನು ಬಲು ಅದ್ಧೂರಿಯಾಗಿ ಮಾಡುತ್ತಿದ್ದಾರೆ. ದೇಶ, ವಿದೇಶದ ಹಲವು ಸಿನಿಮಾ, ಪಾಪ್ ತಾರೆಯರು, ರಾಜಕಾರಣಿಗಳು, ಉದ್ಯಮಿಗಳು ಅಂಬಾನಿ ಪುತ್ರನ ಮದುವೆಗೆ ಆಗಮಿಸಿದ್ದಾರೆ. ಸುಮಾರು 6000 ಕೋಟಿ ಹಣವನ್ನು ಮುಕೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಖರ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ. ಎಷ್ಟರ ಮಟ್ಟಿಗೆ ಅದ್ಧೂರಿಯಾಗಿ ಮದುವೆ ಮಾಡುತ್ತಿದ್ದಾರೆಂದರೆ ಮದುವೆಗೆ ಬಂದ ಅತಿಥಿಗಳಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಯನ್ನು ಅಂಬಾನಿ ನೀಡಿದ್ದಾರೆ.

ಕನ್ನಡದ ನಟ ಯಶ್ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಸಹ ಮದುವೆಯಲ್ಲಿ ಭಾಗಿಯಾಗಿದ್ದರು. ಅವರಿಗೂ ಸಹ ಕೋಟ್ಯಂತರ ಮೌಲ್ಯದ ಉಡುಗೊರೆ ಅಂಬಾನಿ ಅವರಿಂದ ದೊರೆತಿದೆ. ಅಂಬಾನಿ, ಮದುವೆಗೆ ಬಂದ ಅತಿಥಿಗಳಿಗೆ ಬರೋಬ್ಬರಿ ಎರಡು ಕೋಟಿ ರೂಪಾಯಿ ಮೌಲ್ಯದ ದುಬಾರಿ ವಾಚ್ ಅನ್ನು ಉಡುಗೊರೆಯಾಗಿ ನೀಡಿದ್ದಾರಂತೆ. ಶಾರುಖ್ ಖಾನ್ ಸೇರಿದಂತೆ ಮದುವೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ಈ ದುಬಾರಿ ವಾಚು ಉಡುಗೊರೆಯಾಗಿ ದೊರೆತಿದೆ.

ಸ್ವಿಟ್ಜರ್​ಲ್ಯಾಂಡ್​ನ ಆಡಿಮೆರಾಸ್ ಪಿಗೆಟ್ ಬ್ರ್ಯಾಂಡ್​ನ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಅಂಬಾನಿ ಕುಟುಂಬದವರು ಬಂದ ಅತಿಥಿಗಳಿಗೆ ನೀಡಿದ್ದಾರೆ. ಈ ವಾಚಿನ ಬೆಲೆ ಸುಮಾರು 1.5 ರಿಂದ 2 ಕೋಟಿ ಎನ್ನಲಾಗುತ್ತಿದ್ದು, ಬಂದ ಪ್ರತಿಯೊಬ್ಬ ಅತಿಥಿಗೂ ಈ ವಾಚನ್ನು ನೀಡಲಾಗಿದೆ. ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚಿನ ಮೊತ್ತವನ್ನು ಕೇವಲ ಉಡುಗೊರೆಗಾಗಿಯೇ ಮುಕೇಶ್ ಅಂಬಾನಿ ಖರ್ಚು ಮಾಡಿದ್ದಾರೆ. ಅಂಬಾನಿ ಮದುವೆಯಲ್ಲಿ ಉಡುಗೊರೆಯಾಗಿ ಸಿಕ್ಕ ವಾಚುಗಳನ್ನು ಧರಿಸಿಕೊಂಡು ಕೆಲ ಸೆಲೆಬ್ರಿಟಿಗಳು ಫೋಟೊಗಳನ್ನು ತೆಗೆಸಿಕೊಂಡಿದ್ದಾರೆ.

ಮದುವೆಯ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್, ಸಲ್ಮಾನ್ ಖಾನ್ ಇನ್ನೂ ಕೆಲವರಿಗೆ ವಾಚ್​ನ ಜೊತೆಗೆ ಕೆಲವು ದುಬಾರಿ ಉಡುಗೊರೆಗಳನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಮದುವೆಯಲ್ಲಿ ಭಾಗವಹಿಸಿದ ನಟಿಯರು ಹಾಗೂ ಇತರೆ ಸೆಲೆಬ್ರಿಟಿ ಮಹಿಳೆಯರಿಗೆ ಭಾರಿ ದುಬಾರಿ ಸೀರೆಯ ಜೊತೆಗೆ ಚಿನ್ನದ ಆಭರಣವನ್ನು ಸಹ ನೀಡಲಾಗಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!