AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯವನ್ನು ಬದಿಗಿಟ್ಟು ದುಬೈಗೆ ತೆರಳಲು ರೆಡಿ ಆದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​ನಿಂದ ಕೊಲೆ ಬೆದರಿಕೆಗಳು ಸತತವಾಗಿ ಬರುತ್ತಲೇ ಇವೆ. ಇತ್ತೀಚೆಗಷ್ಟೆ ಸಲ್ಮಾನ್ ಖಾನ್​ರ ಆಪ್ತ ಗೆಳೆಯ ಬಾಬಾ ಸಿದ್ಧಿಕಿಯನ್ನು ಇದೇ ಗುಂಪಿನ ಕೆಲವರು ಕೊಂದಿದ್ದಾರೆ. ಇದರ ನಡುವೆ ಸಲ್ಮಾನ್ ಖಾನ್ ದುಬೈಗೆ ಹಾರಲು ಸಜ್ಜಾಗಿದ್ದಾರೆ.

ಭಯವನ್ನು ಬದಿಗಿಟ್ಟು ದುಬೈಗೆ ತೆರಳಲು ರೆಡಿ ಆದ ಸಲ್ಮಾನ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 27, 2024 | 12:30 PM

Share

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಕಳೆದ ಹಲವು ವರ್ಷಗಳಿಂದ ಗೂಂಡಾ ಲಾರೆನ್ಸ್ ಬಿಷ್ಣೋಯ್ ಅವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಟನಿಗೆ ಹಲವು ಬಾರಿ ಬೆದರಿಕೆ ಕೂಡ ಬಂದಿದೆ. ಇದೇ ವೇಳೆ ಸಲ್ಮಾನ್ ಖಾನ್ ಅವರ ವಿಶೇಷ ಸ್ನೇಹಿತ ಹಾಗೂ ಹಿರಿಯ ನಾಯಕ ಬಾಬಾ ಸಿದ್ಧಿಕಿ ಅವರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ತಕ್ಷಣವೇ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಯಿತು. ಸದ್ಯ ಖಾನ್ ಕುಟುಂಬ ಭಯದ ಸ್ಥಿತಿಯಲ್ಲಿದೆ. ಇದರ ಹೊರತಾಗಿಯೂ ಸಲ್ಮಾನ್ ಖಾನ್ ತಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತಿದ್ದಾರೆ. ಸಲ್ಮಾನ್ ಖಾನ್ ಇತ್ತೀಚೆಗೆ ‘ಸಿಂಗಮ್ ಅಗೇನ್’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಇದಲ್ಲದೇ ನಟ ದುಬೈಗೂ ಹೋಗಲಿದ್ದಾರೆ ಎಂಬ ವರದಿಗಳಿವೆ.

ಲಾರೆನ್ಸ್ ಬಿಷ್ಣೋಯ್ ಬೆದರಿಕೆಯಿಂದಾಗಿ ಸಲ್ಮಾನ್ ಖಾನ್ ಸಂಪೂರ್ಣ ಭದ್ರತೆಯೊಂದಿಗೆ ಮುಂಬೈನಲ್ಲಿದ್ದಾರೆ. ‘ಸಿಖಂದರ್’ ಸಿನಿಮಾದ ಶೂಟಿಂಗ್ ಮುಂಬೈನ ಹೊರಗೆ ನಡೆಯಬೇಕಿತ್ತು. ಆದರೆ ಅದನ್ನು ರದ್ದುಪಡಿಸಿ ಮುಂಬೈನಲ್ಲಿ ಸೆಟ್ ಹಾಕಲಾಗಿದೆ ಎಂಬ ಮಾಹಿತಿ ಇದೆ. ವರದಿಯ ಪ್ರಕಾರ ಸಲ್ಮಾನ್ ಖಾನ್ ಶೀಘ್ರದಲ್ಲೇ ದುಬೈಗೆ ಕಾರ್ಯಕ್ರಮವೊಂದಕ್ಕೆ ತೆರಳಲಿದ್ದಾರೆ.

‘ದಬಾಂಗ್ ರಿಲೋಡೆಡ್’ಗಾಗಿ ಸಲ್ಮಾನ್ ಖಾನ್ ದುಬೈಗೆ ಹೋಗಲಿದ್ದಾರೆ ಎಂಬ ವರದಿಗಳಿವೆ. ಡಿಸೆಂಬರ್ 7ರಂದು ಶೋ ಆರಂಭವಾಗಲಿದೆ ಎಂದು ವರದಿಯಾಗಿದೆ. ಸಲ್ಮಾನ್ ತಮ್ಮ ಜೀವಕ್ಕೆ ಅಪಾಯವಿರುವಾಗಲೂ ಎಲ್ಲಾ ಚಿತ್ರೀಕರಣ ಮತ್ತು ಕಾರ್ಯಕ್ರಮಗಳನ್ನು ಸಮಯಕ್ಕೆ ಮುಗಿಸುತ್ತಿದ್ದಾರೆ.

ಇದನ್ನೂ ಓದಿ:ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೇಳೋದೇನು?

ಸಲ್ಮಾನ್ ಖಾನ್ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್, ಸೋನಾಕ್ಷಿ ಸಿನ್ಹಾ, ಸುನಿಲ್ ಗ್ರೋವರ್, ಆಸ್ತಾ ಗಿಲ್ ಮತ್ತು ಮನೀಶ್ ಪಾಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶೋ ದುಬೈ ಹಾರ್ಬರ್‌ನಲ್ಲಿ ನಡೆಯಲಿದೆ. ಸಿಕ್ಕಿರುವ ಮಾಹಿತಿಯಂತೆ ಶೋ ಟಿಕೆಟ್‌ಗಳ ಮಾರಾಟವೂ ಆರಂಭವಾಗಿದೆ.

ಸಲ್ಮಾನ್ ಖಾನ್ ಸಂಪೂರ್ಣ ಭದ್ರತೆಯೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಆದರೆ ಯಾವುದೇ ಸಮಸ್ಯೆಗಳು ಉದ್ಭವಿಸಿದರೆ, ಪ್ರೋಗ್ರಾಂನಲ್ಲಿ ಕೆಲವು ಬದಲಾವಣೆಗಳಾಗಬಹುದು… ಎಂದು ಕೂಡ ಹೇಳಲಾಗುತ್ತದೆ. ನಿಮಗೆ ಹೇಳಬೇಕೆಂದರೆ, ಸಲ್ಮಾನ್ ಖಾನ್ ಅವರು ‘ಸಿಂಗಮ್ ಅಗೇನ್’ ಚಿತ್ರದ ಶೂಟಿಂಗ್ ಕೂಡ ಮುಗಿಸಿದ್ದಾರೆ. ಚಿತ್ರದಲ್ಲಿ ಅತಿಥಿ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ.

ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರದ ಬಗ್ಗೆ ಮಾತನಾಡುತ್ತಾ, ನಟ ‘ಸಿಖಂದರ್’ ಚಿತ್ರದ ಮೂಲಕ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಚಿತ್ರದಲ್ಲಿ ಸಲ್ಮಾನ್ ಜೊತೆ ನಟಿ ರಶ್ಮಿಕಾ ಮಂದಣ್ಣ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು