AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಸಾಧ್ಯವೇ ಇಲ್ಲ’; ವಿವರಿಸಿದ ರಾಜ್​ಕುಮಾರ್ ಹಿರಾನಿ

ಕಲೆಕ್ಷನ್ ವಿಚಾರದಲ್ಲಿ ‘ಸಲಾರ್’ ಮೇಲುಗೈ ಸಾಧಿಸಿದೆ. ‘ಎಲ್ಲರೂ ಎಲ್ಲಾ ಸಿನಿಮಾಗಳನ್ನು ನೋಡಲು ಸಾಧ್ಯವಿಲ್ಲ’ ಅನ್ನೋದು ರಾಜ್​ಕುಮಾರ್ ಹಿರಾನಿ ಅಭಿಪ್ರಾಯ.

‘ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಸಾಧ್ಯವೇ ಇಲ್ಲ’; ವಿವರಿಸಿದ ರಾಜ್​ಕುಮಾರ್ ಹಿರಾನಿ
ಶಾರುಖ್​-ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jan 03, 2024 | 11:02 AM

Share

ಹಬ್ಬ ಅಥವಾ ವಿಶೇಷ ಸಂದರ್ಭದಲ್ಲಿ ಬಾಕ್ಸ್ ಆಫೀಸ್​ನಲ್ಲಿ ಕ್ಲ್ಯಾಶ್​ಗಳು ಏರ್ಪಡುತ್ತವೆ. ದೊಡ್ಡ ದೊಡ್ಡ ಸಿನಿಮಾಗಳು ಮುಖಾಮುಖಿ ಆಗುತ್ತವೆ. ಈ ರೀತಿ ಕ್ಲ್ಯಾಶ್​ಗಳು ಮೊದಲೂ ಆಗಿದ್ದವು, ಮುಂದೆಯೂ ಆಗುತ್ತವೆ. ಇದನ್ನು ತಪ್ಪಿಸಲು ಸಾಧ್ಯವೇ ಇಲ್ಲ ಅನ್ನೋದು ರಾಜ್​ಕುಮಾರ್ ಹಿರಾನಿ (Rajkumar Hirani) ಅಭಿಪ್ರಾಯ. ಇತ್ತೀಚೆಗೆ ಬಾಕ್ಸ್ ಆಫೀಸ್​ನಲ್ಲಿ ‘ಡಂಕಿ’ ಹಾಗೂ ‘ಸಲಾರ್’ ಒಟ್ಟೊಟ್ಟಿಗೆ ರಿಲೀಸ್ ಆಗಿದ್ದವು. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ.

ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಸಿನಿಮಾ ಡಿಸೆಂಬರ್ 21ರಂದು ರಿಲೀಸ್ ಆಗಿ ಮೊದಲ ದಿನ 30 ಕೋಟಿ ರೂಪಾಯಿ ಗಳಿಸಿತು. ‘ಸಲಾರ್’ ಸಿನಿಮಾ ಮೊದಲ ದಿನ 95 ಕೋಟಿ ರೂಪಾಯಿ ಬಾಚಿಕೊಂಡಿತು. ಕಲೆಕ್ಷನ್ ವಿಚಾರದಲ್ಲಿ ‘ಸಲಾರ್’ ಮೇಲುಗೈ ಸಾಧಿಸಿದೆ. ‘ಎಲ್ಲರೂ ಎಲ್ಲಾ ಸಿನಿಮಾಗಳನ್ನು ನೋಡಲು ಸಾಧ್ಯವಿಲ್ಲ’ ಅನ್ನೋದು ರಾಜ್​ಕುಮಾರ್ ಹಿರಾನಿ ಅಭಿಪ್ರಾಯ.

‘ನಿರ್ಮಾಪಕರ ದೃಷ್ಟಿಯಿಂದ ಹೇಳೋದಾದರೆ ದೇಶದಲ್ಲಿ ಕಡಿಮೆ ಥಿಯೇಟರ್​ಗಳು ಇವೆ. ಒಂದಾದ ಮೇಲೆ ಒಂದರಂತೆ ಸಿನಿಮಾ ನೋಡುವಷ್ಟು ದುಡ್ಡು ಜನರ ಬಳಿ ಇಲ್ಲ. ಹೀಗಾಗಿ, ವಾರಕ್ಕೆ ಒಂದು ಅಥವಾ ತಿಂಗಳಿಗೆ ಒಂದು ಸಿನಿಮಾ ಮಾತ್ರ ನೋಡೋದು ಎನ್ನುವ ನಿರ್ಧಾರಕ್ಕೆ ಜನರು ಬರುತ್ತಾರೆ. ಒಂದು ಹಂತದಲ್ಲಿ ಇದು ಎರಡೂ ಸಿನಿಮಾಗಳ ಮೇಲೆ ಪ್ರಭಾವ ಬೀರುತ್ತದೆ’ ಎಂದಿದ್ದಾರೆ ರಾಜ್​ಕುಮಾರ್ ಹಿರಾನಿ.

‘ಕ್ಲ್ಯಾಶ್ ವೇಳೆ ಬಿಸ್ನೆಸ್​ ಮೇಲೆ ಹೊಡೆತ ಉಂಟಾಗಿಯೇ ಉಂಟಾಗುತ್ತದೆ. ಆದರೆ, ಬೇರೆ ಆಯ್ಕೆ ಇಲ್ಲ. 52 ವಾರಗಳಲ್ಲಿ 200 ಸಿನಿಮಾ ಮಾಡಲಾಗುತ್ತದೆ. ಹೀಗಿದ್ದಾಗ ಮುಖಾಮುಖಿ ಆಗಲೇಬೇಕು. ಕೆಲವೊಮ್ಮೆ ದೊಡ್ಡ ಸಿನಿಮಾಗಳು, ಇನ್ನೂ ಕೆಲವೊಮ್ಮೆ ಸಣ್ಣ ಸಿನಿಮಾಗಳು ಕ್ಲ್ಯಾಶ್ ಆಗುತ್ತವೆ. ಇದು ಆಗುತ್ತಲೇ ಇರುತ್ತದೆ. ಇದರಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ

ಇತ್ತೀಚೆಗೆ ‘ಡಂಕಿ’ ಸಿನಿಮಾ ಸಾಧಾರಣ ಗಳಿಕೆ ಮಾಡಿದ ಬಗ್ಗೆ ಅವರು ಮಾತನಾಡಿದ್ದರು. ಶಾರುಖ್ ಖಾನ್ ಅವರಿಗೆ ‘ಡಂಕಿ’ ಸಿನಿಮಾ ಸಾಧಾರಣ ಗಳಿಕೆ ಮಾಡಲಿದೆ ಎನ್ನುವ ವಿಚಾರ ಮೊದಲೇ ತಿಳಿದಿತ್ತಂತೆ. ಶಾರುಖ್ ಕಥೆಯನ್ನು ಇಷ್ಟಪಟ್ಟು ಸಿನಿಮಾ ಮಾಡಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!