AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ

Amit Shah | Samrat Prithviraj: ಅಮಿತ್​ ಶಾ ಅವರಿಗೆ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಇಷ್ಟ ಆಗಿದೆ. ಚಿತ್ರ ನೋಡಿದ ‘ನಮ್ಮ ಕುಟುಂಬಕ್ಕೆ ಇದು ಸ್ಪೆಷಲ್​ ದಿನ’ ಎಂದು ಅವರು ಹೇಳಿದ್ದಾರೆ.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
ಅಕ್ಷಯ್​ ಕುಮಾರ್​, ಸೋನಲ್​ ಶಾ. ಅಮಿತ್​ ಶಾ
TV9 Web
| Edited By: |

Updated on:Jun 02, 2022 | 1:38 PM

Share

ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರ ನೋಡಲು ಅವರ ಅಭಿಮಾನಿಗಳು ಕಾದಿದ್ದಾರೆ. ಜೂನ್​ 3ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆಕಾಣಲಿದೆ. ಅದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಚಿತ್ರವನ್ನು ವೀಕ್ಷಿಸಿದ್ದಾರೆ. ದೆಹಲಿಯಲ್ಲಿ ಗಣ್ಯರಿಗಾಗಿ ಬುಧವಾರ (ಜೂನ್​ 1) ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ತಮ್ಮ ಎಂದಿನ ರಾಜಕೀಯ ಕೆಲಸಗಳಿಗೆ ಬಿಡುವು ನೀಡಿದ್ದ ಅಮಿತ್​ ಶಾ ಅವರು ಈ ಸಿನಿಮಾವನ್ನು ನೋಡಿ ಎಂಜಾಯ್​ ಮಾಡಿದರು. ಅವರ ಜೊತೆಗೆ ಕುಟುಂಬದ ಸದಸ್ಯರು ಕೂಡ ಹಾಜರಾಗಿದ್ದರು. ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆ ಹಂಚಿಕೊಂಡರು. ಅಲ್ಲದೇ, ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ನಾಯಕಿ ಮಾನುಶಿ ಚಿಲ್ಲರ್​ಗೆ ಹೇಳಿದ ಡೈಲಾಗ್​ ಅನ್ನು ತಮ್ಮ ಪತ್ನಿಗೆ ಹೇಳುವ ಮೂಲಕ ಅಮಿತ್​ ಶಾ (Amit Shah) ಎಲ್ಲರ ಗಮನ ಸೆಳೆದರು. ಆ ಕುರಿತು ಇಲ್ಲಿದೆ ಮಾಹಿತಿ..

ದೇಶ ಭಕ್ತಿ ಕಥಾಹಂದರ ಇರುವ ಸಿನಿಮಾಗಳನ್ನು ಮಾಡುವಲ್ಲಿ ಅಕ್ಷಯ್​ ಕುಮಾರ್​ ಫೇಮಸ್​. ಈ ಬಾರಿ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲಿಯೂ ಅವರು ಅಂಥದ್ದೇ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಐತಿಹಾಸಿಕ ಕಥೆ ಇರುವ ಈ ಚಿತ್ರವನ್ನು ನೋಡಿ ಅಮಿತ್​ ಶಾ ಮೆಚ್ಚಿಕೊಂಡಿದ್ದಾರೆ. ‘ಸುಮಾರು 13 ವರ್ಷಗಳ ಬಳಿಕ ನಾನು ನನ್ನ ಕುಟುಂಬದವರ ಜೊತೆ ಕುಳಿತು ಸಿನಿಮಾ ನೋಡಿದೆ. ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಥಿಯೇಟರ್​ನ ಕೊನೇ ಸಾಲಿನಲ್ಲಿ ನಾವು ಕುಳಿತಿದ್ದೆವು. ನಮ್ಮ ಕುಟುಂಬಕ್ಕೆ ಇದು ಸ್ಪೆಷಲ್​ ದಿನ’ ಎಂದು ಅಮಿತ್​ ಶಾ ಹೇಳಿದ್ದಾರೆ.

‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ‘ಚಲಿಯೇ ಹುಕುಂ’ ಎಂದು ನಾಯಕಿಗೆ ಡೈಲಾಗ್​ ಹೊಡೆಯುತ್ತಾರೆ. ಈ ಸಿನಿಮಾದ ವಿಶೇಷ ಪ್ರದರ್ಶನದ ಬಳಿಕ ಮಾತನಾಡಿ ಮುಗಿಸಿದ ಅಮಿತ್​ ಶಾ ಕೂಡ ತಮ್ಮ ಪತ್ನಿ ಸೋನಲ್​ ಶಾ ಕಡೆಗೆ ನೋಡುತ್ತಾ ‘ಚಲಿಯೇ ಹುಕುಂ’ ಎಂದು ಹೇಳಿದರು. ಆಗ ಸೋನಲ್​ ಅವರು ನಗು ಚೆಲ್ಲಿದರು. ಅಲ್ಲಿದ್ದ ಇತರರು ಕೂಡ ನಕ್ಕರು.

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

‘ಇತಿಹಾಸದ ವಿದ್ಯಾರ್ಥಿ ಆದ ನಾನು ಈ ಸಿನಿಮಾ ನೋಡಿ ಕೇವಲ ಎಂಜಾಯ್​ ಮಾಡಲಿಲ್ಲ. ಭಾರತೀಯರಿಗೆ ಈ ಚಿತ್ರ ಎಷ್ಟು ಮುಖ್ಯ ಎಂಬುದನ್ನು ಕೂಡ ಅರ್ಥ ಮಾಡಿಕೊಂಡೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಎಲ್ಲ ಕಾರಣಗಳಿಂದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:38 pm, Thu, 2 June 22

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?