AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಫ್ರೇಮ್​ನಲ್ಲಿ ಸೂರ್ಯ, ಅಮಿತಾಭ್​, ಅಕ್ಷಯ್​ ಕುಮಾರ್​; ಏನ್​ ಸಮಾಚಾರ?

81ನೇ ವಯಸ್ಸಿನಲ್ಲಿ ಕೂಡ ಅಮಿತಾಭ್​ ಬಚ್ಚನ್​ ಅವರು ಹದಿಹರೆಯದ ಯುವಕನಂತೆ ಆ್ಯಕ್ಟೀವ್​ ಆಗಿದ್ದಾರೆ. ಸೂರ್ಯ ಮತ್ತು ಅಕ್ಷಯ್​ ಕುಮಾರ್​ ಜೊತೆ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಆ ಸಂದರ್ಭದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

ಒಂದೇ ಫ್ರೇಮ್​ನಲ್ಲಿ ಸೂರ್ಯ, ಅಮಿತಾಭ್​, ಅಕ್ಷಯ್​ ಕುಮಾರ್​; ಏನ್​ ಸಮಾಚಾರ?
ಅಮಿತಾಭ್​ ಬಚ್ಚನ್​, ಅಕ್ಷಯ್​ ಕುಮಾರ್​, ಸೂರ್ಯ
ಮದನ್​ ಕುಮಾರ್​
|

Updated on:Jan 15, 2024 | 11:00 AM

Share

ಬಾಲಿವುಡ್​ ನಟರಾದ ಅಮಿತಾಭ್​ ಬಚ್ಚನ್​, ಅಕ್ಷಯ್​ ಕುಮಾರ್​ ಹಾಗೂ ದಕ್ಷಿಣದ ಸ್ಟಾರ್​ ಕಲಾವಿದ ಸೂರ್ಯ (Suriya) ಅವರು ಒಂದೆಡೆ ಸೇರಿದ್ದಾರೆ. ಅವರು ಮೂವರು ಒಂದೇ ಫ್ರೇಮ್​ನಲ್ಲಿ ಇರುವ ಫೋಟೋ ವೈರಲ್​ ಆಗಿದೆ. ಈ ಫೋಟೋವನ್ನು ಸ್ವತಃ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ತಕ್ಷಣ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಮೂವರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಆದರೆ ಅಸಲಿ ವಿಚಾರ ಅದಲ್ಲ. ಒಂದು ಜಾಹೀರಾತಿನ ಸಲುವಾಗಿ ಅಮಿತಾಭ್​ ಬಚ್ಚನ್​, ಸೂರ್ಯ ಮತ್ತು ಅಕ್ಷಯ್​ ಕುಮಾರ್​ (Akshay Kumar) ಅವರು ಒಂದೆಡೆ ಸೇರಿದ್ದಾರೆ.

‘ಇಂಡಿಯನ್​ ಸ್ಟ್ರೀಟ್​ ಪ್ರೀಮಿಯರ್​ ಲೀಗ್​’ ಶೀಘ್ರದಲ್ಲೇ ಆರಂಭ ಆಗಲಿದೆ. ಇದರಲ್ಲಿ ಆಟ ಆಡಲಿರುವ ತಂಡಗಳ ಮಾಲಿಕತ್ವವನ್ನು ಸೆಲೆಬ್ರಿಟಿಗಳು ಪಡೆದುಕೊಂಡಿದ್ದಾರೆ. ಆ ಕಾರಣದಿಂದ ಅಕ್ಷಯ್​ ಕುಮಾರ್​, ಅಮಿತಾಭ್​ ಬಚ್ಚನ್​, ಸೂರ್ಯ ಮುಂತಾದ ನಟರು ಇದರ ಜಾಹೀರಾತಿನಲ್ಲಿ ಪಾಲ್ಗೊಂಡಿದ್ದಾರೆ. ಬಾಲಿವುಡ್​ ನಟ ಹೃತಿಕ್ ರೋಷನ್​ ಕೂಡ ಇದರ ಜಾಹೀರಾತು ಶೂಟಿಂಗ್​ಗೆ ಬಂದಿದ್ದರು. ಆದರೆ ಗ್ರೂಪ್​ ಫೋಟೋ ತೆಗೆದುಕೊಳ್ಳುವುದಕ್ಕೂ ಮುನ್ನ ಹೃತಿಕ್​ ರೋಷನ್​ ಅವರು ಬೇರೆ ಕೆಲಸದ ಸಲುವಾಗಿ ಅಲ್ಲಿಂದ ಹೊರಟು ಹೋದರು.

ಅಕ್ಷಯ್​ ಕುಮಾರ್​ ಮತ್ತು ಸೂರ್ಯ ಜೊತೆ ಫೋಟೋ ತೆಗೆದುಕೊಂಡಿದ್ದು ಅಮಿತಾಭ್​ ಬಚ್ಚನ್​ ಅವರಿಗೆ ಖುಷಿ ನೀಡಿದೆ. ‘ಹೃತಿಕ್ ರೋಷನ್​ ಬೇಗ ಈ ಶೂಟಿಂಗ್​ ಮುಗಿಸಿ ಹೊರಟುಹೋದರು. ನಾನು ನಮ್ಮ ಚಿತ್ರೀಕರಣಕ್ಕೆ ಸಿದ್ಧವಾದೆವು. ದಕ್ಷಿಣ ಭಾರತದ ನಟ ಸೂರ್ಯ ಅವರನ್ನು ಭೇಟಿಯಾಗಿದ್ದಕ್ಕೆ ಸಂತೋಷ ಆಗಿದೆ’ ಎಂದು ಅವರು ಹೇಳಿದ್ದಾರೆ. ಅಲ್ಲದೇ ಸೂರ್ಯ ಅವರ ಸಿನಿಮಾ ಮತ್ತು ಹಾಡುಗಳನ್ನು ಕೂಡ ಅಮಿತಾಭ್​ ಬಚ್ಚನ್​ ಹೊಗಳಿದ್ದಾರೆ.

ಇದನ್ನೂ ಓದಿ: ‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು

ಅಮಿತಾಭ್​ ಬಚ್ಚನ್​ ಅವರ ಕೈಗೆ ಗಾಯ ಆಗಿದೆ. ಕೈಗೆ ಬ್ಯಾಂಡೇಜ್​ ಹಾಕಿಕೊಂಡೇ ಅವರು ‘ಕೌನ್​ ಬನೇಗ ಕರೋಡ್​ಪತಿ’ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈಗ ‘ಇಂಡಿಯನ್​ ಸ್ಟ್ರೀಟ್​ ಪ್ರೀಮಿಯರ್​ ಲೀಗ್​’ ಜಾಹೀರಾತು ಶೂಟಿಂಗ್​ಗೂ ಅವರು ಬ್ಯಾಂಡೇಜ್​ ಹಾಕಿಕೊಂಡು ಬಂದಿದ್ದಾರೆ. ತಮ್ಮ ಕೈಗೆ ಏನಾಗಿದೆ ಎಂಬುದನ್ನು ಅವರು ಅಕ್ಷಯ್​ ಕುಮಾರ್​ಗೆ ವಿವರಿಸಿದ್ದಾರೆ. ಆ ಸಂದರ್ಭದ ಫೋಟೋವನ್ನು ಅವರು ತಮ್ಮ ಬ್ಲಾಗ್​ನಲ್ಲಿ ಹಂಚಿಕೊಂಡಿದ್ದಾರೆ. 81ನೇ ವಯಸ್ಸಿನಲ್ಲಿ ಕೂಡ ಅಮಿತಾಭ್​ ಬಚ್ಚನ್​ ಅವರು ಹದಿಹರೆಯದ ಯುವಕನಂತೆ ಆ್ಯಕ್ಟೀವ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:43 am, Mon, 15 January 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು