AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲವನ್ನೂ ಕಳೆದುಕೊಂಡು ಜೀರೋಗೆ ಹೋಗಿದ್ದ ಅಮಿತಾಭ್ ಕಂಬ್ಯಾಕ್ ಮಾಡಿದ್ದೇ ಅನೇಕರಿಗೆ ಸ್ಫೂರ್ತಿ

1999ಕ್ಕೂ ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಆ ವರ್ಷ ಬಿಸ್ನೆಸ್​ನಲ್ಲಿ ಅಮಿತಾಭ್​ ಬಚ್ಚನ್​ ಕೈ ಸುಟ್ಟುಕೊಂಡರು. ‘ಅಮಿತಾಭ್​ ಬಚ್ಚನ್​ ಕಾರ್ಪೊರೇಷನ್​ ಲಿಮಿಟೆಡ್​’ ಸಂಸ್ಥೆ ದೊಡ್ಡ ನಷ್ಟ ಅನುಭವಿಸಿತು. ಸಾಲ ಕೊಟ್ಟವರು ಮನೆ ಎದುರು ಬಂದರು.

ಎಲ್ಲವನ್ನೂ ಕಳೆದುಕೊಂಡು ಜೀರೋಗೆ ಹೋಗಿದ್ದ ಅಮಿತಾಭ್ ಕಂಬ್ಯಾಕ್ ಮಾಡಿದ್ದೇ ಅನೇಕರಿಗೆ ಸ್ಫೂರ್ತಿ
ಅಮಿತಾಬ್ ಬಚ್ಚನ್
Follow us
ರಾಜೇಶ್ ದುಗ್ಗುಮನೆ
|

Updated on: Oct 11, 2023 | 7:03 AM

ಅಮಿತಾಭ್​ ಬಚ್ಚನ್ (Amitabh Bachchan) ಅವರಿಗೆ ಇಂದು (ಅಕ್ಟೋಬರ್ 11) ಜನ್ಮದಿನದ ಸಂಭ್ರಮ. ಅವರು 81ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಯಸ್ಸಿನಲ್ಲೂ ಅವರು ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ. ಹಲವು ದಶಕಗಳಿಂದ ಅವರು ಕಲಾ ಸೇವೆ ಮಾಡುತ್ತಾ ಬರುತ್ತಿದ್ದಾರೆ. ಅವರ ನಟನೆಗೆ ಮನಸೋಲದವರೇ ಇಲ್ಲ ಎಂದರೂ ತಪ್ಪಾಗಲಾರದು. ಅಮಿತಾಭ್ ಬಚ್ಚನ್ ಅವರು ಸಾಗಿ ಬಂದ ಹಾದಿ ಸುಲಭದ್ದಾಗಿರಲಿಲ್ಲ. ಅವರು ಒಮ್ಮೆ ಎಲ್ಲವನ್ನೂ ಕಳೆದುಕೊಂಡಿದ್ದರು. ಆದರೆ ಅವರು ಕುಗ್ಗಲಿಲ್ಲ. ಮತ್ತೆ ಗೆದ್ದು ತೋರಿಸಿದರು.

1999ಕ್ಕೂ ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಆ ವರ್ಷ ಬಿಸ್ನೆಸ್​ನಲ್ಲಿ ಅಮಿತಾಭ್​ ಬಚ್ಚನ್​ ಕೈ ಸುಟ್ಟುಕೊಂಡರು. ‘ಅಮಿತಾಭ್​ ಬಚ್ಚನ್​ ಕಾರ್ಪೊರೇಷನ್​ ಲಿಮಿಟೆಡ್​’ ಸಂಸ್ಥೆ ದೊಡ್ಡ ನಷ್ಟ ಅನುಭವಿಸಿತು. ಸಾಲ ಕೊಟ್ಟವರು ಮನೆ ಎದುರು ಬಂದರು. ಕುಟುಂಬದ ಸದಸ್ಯರಿಗೆ ಕೊಲೆ ಬೆದರಿಕೆ ಬಂತು. ಆದರೆ, ಅಮಿತಾಭ್​ ಅವರು ಇದಕ್ಕೆ ಅಂಜಲಿಲ್ಲ. ನಟನೆಯ ಮೂಲಕ ಮತ್ತೆ ಗೆದ್ದು ತೋರಿಸಿದರು.

1999ರ ವೇಳೆಗೆ ಅಮಿತಾಭ್ ಅವರು ವೃತ್ತಿ ಜೀವನದಲ್ಲಿ 44 ವರ್ಷ ಕಳೆದಿದ್ದರು. ಆದರೆ, ಅವರಿಗೆ ಎಂದಿಗೂ ಆ ರೀತಿಯ ಕಷ್ಟ ಬಂದಿರಲೇ ಇಲ್ಲ. ಈ ಕಷ್ಟದಿಂದ ಹೊರ ಬರಲು ಅವರು ನಿರ್ಧರಿಸಿದರು. ನಿರ್ಮಾಪಕ ಯಶ್ ಚೋಪ್ರಾ ಮನೆಗೆ ಹೋದರು. ಅವಕಾಶಕ್ಕಾಗಿ ಅಂಗಲಾಚಿದರು. ಶಾರುಖ್ ಅಭಿನಯದ ‘ಮೊಹಬ್ಬತೇ’ (2000ರಲ್ಲಿ ರಿಲೀಸ್ ಆಯಿತು) ಚಿತ್ರದಲ್ಲಿ ಅಮಿತಾಭ್​ಗೆ ಒಂದು ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಈ ಚಿತ್ರದ ಮೂಲಕ ಅಮಿತಾಭ್ ಅವರು ಕಂಬ್ಯಾಕ್ ಮಾಡಿದರು. ಅವರ ಬದುಕು ಮತ್ತೆ ಬದಲಾಯಿತು.

ಇದನ್ನೂ ಓದಿ: ಪುರುಷತ್ವದ ಸಂಕೇತಕ್ಕೆ ಹೇಳಿಮಾಡಿಸಿದ ವ್ಯಕ್ತಿ ಅಮಿತಾಭ್ ಎಂದು ಟ್ವೀಟ್ ಮಾಡಿದ ತಾಲಿಬಾನ್

ಸಿಕ್ಕ ಎಲ್ಲಾ ಪಾತ್ರಗಳನ್ನು ಒಪ್ಪಿ ನಟಿಸಿದರು ಅಮಿತಾಭ್. ಇದರಿಂದ ಅವರಿಗೆ ಹಣ ಸಿಗುತ್ತಾ ಹೋಯಿತು. ಒಂದೊಂದೇ ಸಾಲವನ್ನು ಅವರು ತೀರಿಸುತ್ತಾ ಬಂದರು. ಮತ್ತೆ ಬೇಡಿಕೆ ಹೆಚ್ಚಿಸಿಕೊಂಡರು. ಈಗ 81ರ ವಯಸ್ಸಲ್ಲೂ ಅವರು ಚಾರ್ಮ್ ಉಳಿಸಿಕೊಂಡಿದ್ದಾರೆ. ‘ಕೌನ್​ ಬನೇಗಾ ಕರೋಡ್ಪತಿ’ ಶೋನ ಅವರು ನಡೆಸಿಕೊಡುತ್ತಿದ್ದಾರೆ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ಮುಖ್ಯ ಪಾತ್ರ ಒಂದನ್ನು ನಿರ್ವಹಿಸುತ್ತಿದ್ದಾರೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಅಮಿತಾಭ್ ಜನ್ಮದಿನಕ್ಕೆ ಅನೇಕ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ