60 ಕೋಟಿ ರೂಪಾಯಿ ಕೊಟ್ಟು ಭರ್ಜರಿ ಆಫೀಸ್ ಜಾಗ ಖರೀದಿಸಿದ ಅಮಿತಾಭ್ ಬಚ್ಚನ್

ನಟ ಅಮಿತಾಭ್ ಬಚ್ಚನ್ ಅವರು ಹೂಡಿಕೆ ಬಗ್ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ನಾನಾ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಅವರು ಈಗ 60 ಕೋಟಿ ರೂಪಾಯಿ ಕೊಟ್ಟು ಮುಂಬೈನಲ್ಲಿ ದುಬಾರಿ ಜಾಗ ಖರೀದಿ ಮಾಡಿದ್ದಾರೆ. ಕಚೇರಿ ಬಳಕೆಗೆ ಈ ಜಾಗವನ್ನು ಬಳಕೆ ಮಾಡಬಹುದಾಗಿದೆ.

60 ಕೋಟಿ ರೂಪಾಯಿ ಕೊಟ್ಟು ಭರ್ಜರಿ ಆಫೀಸ್ ಜಾಗ ಖರೀದಿಸಿದ ಅಮಿತಾಭ್ ಬಚ್ಚನ್
ಅಮಿತಾಭ್
Follow us
|

Updated on: Jun 26, 2024 | 2:08 PM

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಈಗ 81 ವರ್ಷ ವಯಸ್ಸು. ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದರ ಜೊತೆಗೆ ಅವರು ಹೂಡಿಕೆ ಮಾಡುವುದನ್ನು ನಿಲ್ಲಿಸಿಲ್ಲ. ಈ ಮೊದಲು ಅವರು ಅಯೋಧ್ಯೆಯಲ್ಲಿ ಜಾಗ ಖರೀದಿ ಮಾಡಿದ್ದರು. ಈಗ ಅವರು ಮುಂಬೈನಲ್ಲಿ 59.58 ಕೋಟಿ ರೂಪಾಯಿ ಕೊಟ್ಟು ಜಾಗ ಖರೀದಿ ಮಾಡಿದ್ದಾರೆ. ಇದು ಕಚೇರಿ ಜಾಗ ಎನ್ನಲಾಗಿದೆ.

ಮುಂಬೈನ ಅಂಧೇರಿಯಲ್ಲಿರುವ ವೀರ ದೇಸಾಯಿ ರಸ್ತೆಯಲ್ಲಿರುವ ಕಟ್ಟಡವನ್ನು ಅಮಿತಾಭ್ ಖರೀದಿ ಮಾಡಿದ್ದಾರೆ. ಈ ಜಾಗದ ಒಟ್ಟಾರೆ ಅಳತೆ 8,429 ಚದರ ಅಡಿ ಇದೆ. ಕಾರ್ ಪಾರ್ಕಿಂಗ್​ಗೂ ವಿಶಾಲವಾದ ಜಾಗ ಇದೆ. ಅಮಿತಾಭ್ ಅವರು ಬರೋಬ್ಬರಿ 3.57 ಕೋಟಿ ರೂಪಾಯಿ ಸ್ಟ್ಯಾಂಪ್​ಡ್ಯೂಟಿ ಪಾವತಿ ಮಾಡಿದ್ದಾರೆ. ಜೂನ್ 20ರಂದು ಈ ಆಸ್ತಿ ನೋಂದಣಿ ಆಗಿದೆ.

ಅಮಿತಾಭ್ ಬಚ್ಚನ್ ಅವರು ನಿರಂತರವಾಗಿ ಹೂಡಿಕೆ ಮಾಡುತ್ತಿದ್ದಾರೆ. ಅಲಿಭಾಗ್​ನಲ್ಲಿ 10 ಕೋಟಿ ರೂಪಾಯಿ ಜಾಗವನ್ನು ಖರೀದಿ ಮಾಡಿದ್ದರು. ಅಯೋಧ್ಯೆಯಲ್ಲಿ 14.5 ಕೋಟಿ ರೂಪಾಯಿ ಕೊಟ್ಟು ಜಾಗ ಖರೀದಿ ಮಾಡಿದ್ದರು. ಸದ್ಯ ಅಯೋಧ್ಯೆಯಲ್ಲಿ ಹೂಡಿಕೆಗೆ ಜನರು ಹೆಚ್ಚೆಚ್ಚು ಬರುತ್ತಿದ್ದಾರೆ. ಈ ಕಾರಣಕ್ಕೆ ಅಮಿತಾಭ್ ಅವರು ಇಲ್ಲಿ ಜಾಗ ಕೊಂಡುಕೊಂಡಿದ್ದಾರೆ.

ಅಮಿತಾಭ್ ಬಚ್ಚನ್ ಮಗ ಅಭಿಷೇಕ್ ಬಚ್ಚನ್ ಕೂಡ ರಿಯಲ್ ಎಸ್ಟೇಟ್​​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಇತ್ತೀಚೆಗೆ ಸ್ಕೈ ಸಿಟಿ ಪ್ರಾಜೆಕ್ಟ್​​ನಲ್ಲಿ 15.42 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಆರು ಅಪಾರ್ಟ್​ಮೆಂಟ್​ಗಳನ್ನು ಅವರು ಖರೀದಿ ಮಾಡಿದ್ದರು. ಈ ಅಪಾರ್ಟ್​ಮೆಂಟ್ 57ನೇ ಫ್ಲೋರ್​ನಲ್ಲಿದೆ. ಮೇ ತಿಂಗಳಲ್ಲಿ ಅಭಿಷೇಕ್ ಅವರು ಇದನ್ನು ಖರೀದಿ ಮಾಡಿದ್ದರು.

ಇದನ್ನೂ ಓದಿ:  ಪ್ರಭಾಸ್​ರ ‘ಕಲ್ಕಿ 2898 ಎಡಿ’ಯಲ್ಲಿ ‘ದಿವಂಗತ ಸ್ಟಾರ್’ ಇದು ಹೇಗೆ ಸಾಧ್ಯ?

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ. ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ