ಈ ಫೋಟೋದಲ್ಲಿ ಇದ್ದಾರೆ ಅಮಿತಾಭ್ ಬಚ್ಚನ್; ಯಾರೆಂದು ಪತ್ತೆ ಹಚ್ಚುವಿರಾ?

ಅಮಿತಾಭ್ ಬಚ್ಚನ್ ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಸಾಮಾನ್ಯ ವ್ಯಕ್ತಿ ಎನಿಸಿಕೊಂಡಿದ್ದರು. ಆದರೆ, ಅವರು ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಅವರ ಬದುಕು ಬದಲಾಯಿತು. ಈಗ ಫ್ಯಾನ್ಸ್​ಗೋಸ್ಕರ ಅವರು 70 ವರ್ಷಗಳ ಹಿಂದೆ ತೆಗೆದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಾವು ಇರೋದು ಎಲ್ಲಿ ಎಂಬುದನ್ನು ಕೂಡ ತೋರಿಸಿದ್ದಾರೆ.

ಈ ಫೋಟೋದಲ್ಲಿ ಇದ್ದಾರೆ ಅಮಿತಾಭ್ ಬಚ್ಚನ್; ಯಾರೆಂದು ಪತ್ತೆ ಹಚ್ಚುವಿರಾ?
ಅಮಿತಾಭ್ ಬಚ್ಚನ್
Follow us
|

Updated on:Aug 02, 2024 | 7:28 AM

ನಟ ಅಮಿತಾಭ್ ಬಚ್ಚನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಅಭಿಮಾನಿಗಳಿಗಾಗಿ ಫೋಟೋ ಹಂಚಿಕೊಳ್ಳುತ್ತಾರೆ. ಅಷ್ಟೇ ಅಲ್ಲ ಮಾಡುವ ಪ್ರತಿ ಟ್ವೀಟ್​ಗೂ ಅವರು ಸಂಖ್ಯೆ ನೀಡುತ್ತಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 70 ವರ್ಷಗಳ ಹಿಂದೆ ತೆಗೆದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಾವು ಇರೋದು ಎಲ್ಲಿ ಎಂಬುದನ್ನು ಕೂಡ ತೋರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಸಾಕಷ್ಟು ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿದ್ದಾರೆ. ಅವರ ಖ್ಯಾತಿ ಈಗ ದೊಡ್ಡ ಮಟ್ಟದಲ್ಲಿ ಹಬ್ಬಿದೆ. ಇದಕ್ಕೆ ಅವರು ಹಾಕಿರುವ ಶ್ರಮವೇ ಕಾರಣ. ತಮ್ಮ ಕಷ್ಟದ ಸಮಯದ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಈಗ ಅವರು ಬಾಲ್ಯದಲ್ಲಿ ಹೇಗಿದ್ದೆ ಎಂಬುದನ್ನು ತೋರಿಸಿದ್ದಾರೆ.

ಆಗ ಅಮಿತಾಭ್ ಬಚ್ಚನ್ ಅವರು ಸ್ಕೌಟ್ ಆ್ಯಂಡ್ ಗೈಡ್ಸ್​ನಲ್ಲಿ ಇದ್ದರು. ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹಗಳನ್ನು ಕಲಿಯುವದರ ಜೊತೆಗೆ, ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರೇಪಿಸಲಿರುವ ಕಾರ್ಯಕ್ರಮವೇ ಸ್ಕೌಟ್ ಮತ್ತು. ಇದರ ಭಾಗವಾಗಿದ್ದರು ಅಮಿತಾಭ್ ಬಚ್ಚನ್.

1954ರ ಅಲಹಾಬಾದ್ ಜಿಲ್ಲೆಯಲ್ಲಿ ತೆಗೆದ ಫೋಟೋವನ್ನು ಅಮಿತಾಭ್ ಬಚ್ಚನ್ ಹಂಚಿಕೊಂಡಿದ್ದಾರೆ. ‘ಇಂಟರ್​ ಟ್ರೂಪ್ ಚಾಲೆಂಜ್ ಶೀಲ್ಡ್​’ನ ವಿನ್ನರ್ ತಂಡದ ಫೋಟೋ ಇದಾಗಿದೆ. ಅಮಿತಾಭ್ ಅವರು ತಾವು ಎಲ್ಲಿ ನಿಂತಿದ್ದೆ ಎಂಬುದನ್ನು ತೋರಿಸಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘1954ರಲ್ಲಿ ಅಲ್ಲಿದ್ದ ಯಾರಿಗೂ ಅಮಿತಾಭ್ ಅವರ ಭವಿಷ್ಯದ ಬಗ್ಗೆ ಕಲ್ಪನೆಯೂ ಇರಲಿಲ್ಲ. ಈ ಬಾಲಕ ಇಷ್ಟು ದೊಡ್ಡ ವ್ಯಕ್ತಿ ಆಗುತ್ತಾನೆ ಎಂದು ಅಲ್ಲಿದ್ದ ಯಾರಿಗೂ ಗೊತ್ತಾಗುವುದಿಲ್ಲ’ ಎಂದಿದ್ದಾರೆ ಅಮಿತಾಭ್.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್ ಬಚ್ಚನ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Fri, 2 August 24

ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ
ಖರೀದಿ ಭರಾಟೆ: K.R.ಮಾರ್ಕೆಟ್​ನಿಂದ ಟೌನ್​ಹಾಲ್​​ವರೆಗೆ ಟ್ರಾಫಿಕ್ ಜಾಮ್​
ಖರೀದಿ ಭರಾಟೆ: K.R.ಮಾರ್ಕೆಟ್​ನಿಂದ ಟೌನ್​ಹಾಲ್​​ವರೆಗೆ ಟ್ರಾಫಿಕ್ ಜಾಮ್​
Shocking: ಕ್ರೇನ್ ಮೂಲಕ ನರಕಕ್ಕೆ ಎಂಟ್ರಿಕೊಟ್ಟ ದಾಂಡಿಗರು
Shocking: ಕ್ರೇನ್ ಮೂಲಕ ನರಕಕ್ಕೆ ಎಂಟ್ರಿಕೊಟ್ಟ ದಾಂಡಿಗರು
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ