AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿ ಇದ್ದಾರೆ ಅಮಿತಾಭ್ ಬಚ್ಚನ್; ಯಾರೆಂದು ಪತ್ತೆ ಹಚ್ಚುವಿರಾ?

ಅಮಿತಾಭ್ ಬಚ್ಚನ್ ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಸಾಮಾನ್ಯ ವ್ಯಕ್ತಿ ಎನಿಸಿಕೊಂಡಿದ್ದರು. ಆದರೆ, ಅವರು ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಅವರ ಬದುಕು ಬದಲಾಯಿತು. ಈಗ ಫ್ಯಾನ್ಸ್​ಗೋಸ್ಕರ ಅವರು 70 ವರ್ಷಗಳ ಹಿಂದೆ ತೆಗೆದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಾವು ಇರೋದು ಎಲ್ಲಿ ಎಂಬುದನ್ನು ಕೂಡ ತೋರಿಸಿದ್ದಾರೆ.

ಈ ಫೋಟೋದಲ್ಲಿ ಇದ್ದಾರೆ ಅಮಿತಾಭ್ ಬಚ್ಚನ್; ಯಾರೆಂದು ಪತ್ತೆ ಹಚ್ಚುವಿರಾ?
ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on:Aug 02, 2024 | 7:28 AM

Share

ನಟ ಅಮಿತಾಭ್ ಬಚ್ಚನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಅಭಿಮಾನಿಗಳಿಗಾಗಿ ಫೋಟೋ ಹಂಚಿಕೊಳ್ಳುತ್ತಾರೆ. ಅಷ್ಟೇ ಅಲ್ಲ ಮಾಡುವ ಪ್ರತಿ ಟ್ವೀಟ್​ಗೂ ಅವರು ಸಂಖ್ಯೆ ನೀಡುತ್ತಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 70 ವರ್ಷಗಳ ಹಿಂದೆ ತೆಗೆದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಾವು ಇರೋದು ಎಲ್ಲಿ ಎಂಬುದನ್ನು ಕೂಡ ತೋರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಸಾಕಷ್ಟು ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿದ್ದಾರೆ. ಅವರ ಖ್ಯಾತಿ ಈಗ ದೊಡ್ಡ ಮಟ್ಟದಲ್ಲಿ ಹಬ್ಬಿದೆ. ಇದಕ್ಕೆ ಅವರು ಹಾಕಿರುವ ಶ್ರಮವೇ ಕಾರಣ. ತಮ್ಮ ಕಷ್ಟದ ಸಮಯದ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಈಗ ಅವರು ಬಾಲ್ಯದಲ್ಲಿ ಹೇಗಿದ್ದೆ ಎಂಬುದನ್ನು ತೋರಿಸಿದ್ದಾರೆ.

ಆಗ ಅಮಿತಾಭ್ ಬಚ್ಚನ್ ಅವರು ಸ್ಕೌಟ್ ಆ್ಯಂಡ್ ಗೈಡ್ಸ್​ನಲ್ಲಿ ಇದ್ದರು. ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹಗಳನ್ನು ಕಲಿಯುವದರ ಜೊತೆಗೆ, ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರೇಪಿಸಲಿರುವ ಕಾರ್ಯಕ್ರಮವೇ ಸ್ಕೌಟ್ ಮತ್ತು. ಇದರ ಭಾಗವಾಗಿದ್ದರು ಅಮಿತಾಭ್ ಬಚ್ಚನ್.

1954ರ ಅಲಹಾಬಾದ್ ಜಿಲ್ಲೆಯಲ್ಲಿ ತೆಗೆದ ಫೋಟೋವನ್ನು ಅಮಿತಾಭ್ ಬಚ್ಚನ್ ಹಂಚಿಕೊಂಡಿದ್ದಾರೆ. ‘ಇಂಟರ್​ ಟ್ರೂಪ್ ಚಾಲೆಂಜ್ ಶೀಲ್ಡ್​’ನ ವಿನ್ನರ್ ತಂಡದ ಫೋಟೋ ಇದಾಗಿದೆ. ಅಮಿತಾಭ್ ಅವರು ತಾವು ಎಲ್ಲಿ ನಿಂತಿದ್ದೆ ಎಂಬುದನ್ನು ತೋರಿಸಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘1954ರಲ್ಲಿ ಅಲ್ಲಿದ್ದ ಯಾರಿಗೂ ಅಮಿತಾಭ್ ಅವರ ಭವಿಷ್ಯದ ಬಗ್ಗೆ ಕಲ್ಪನೆಯೂ ಇರಲಿಲ್ಲ. ಈ ಬಾಲಕ ಇಷ್ಟು ದೊಡ್ಡ ವ್ಯಕ್ತಿ ಆಗುತ್ತಾನೆ ಎಂದು ಅಲ್ಲಿದ್ದ ಯಾರಿಗೂ ಗೊತ್ತಾಗುವುದಿಲ್ಲ’ ಎಂದಿದ್ದಾರೆ ಅಮಿತಾಭ್.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್ ಬಚ್ಚನ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Fri, 2 August 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ