AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್; ನಿಜಕ್ಕೂ ಆಗಿದ್ದೇನು?

ಅಮಿತಾಭ್​ ಬಚ್ಚನ್​ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್; ನಿಜಕ್ಕೂ ಆಗಿದ್ದೇನು?
ಅಮಿತಾಭ್ ಬಚ್ಚನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Mar 16, 2024 | 7:54 AM

Share

ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಶುಕ್ರವಾರ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಹೇಳಲಾಗಿತ್ತು. ಅಮಿತಾಭ್ ಬಚ್ಚನ್​ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದಾಗ ಅಭಿಮಾನಿಗಳಿಗೆ ಆತಂಕ ಆಗೋದು ಸಹಜ. ಆದರೆ, ಫ್ಯಾನ್ಸ್ ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅಮಿತಾಭ್​ ಬಚ್ಚನ್​ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ. ನಟನ ಕಾಲಿನ ರಕ್ತನಾಳದ ಸಮಸ್ಯೆ ಉಂಟಾಗಿತ್ತು. ಇದಕ್ಕಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅಮಿತಾಭ್ ಶುಕ್ರವಾರ ಸಂಜೆಯೇ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಅವರ ಹೆಲ್ತ್​ ಅಪ್​ಡೇಟ್​ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಅವರು ಬೇಗ ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹೇಳಿದ್ದಾರೆ.

ಟ್ವಿಟರ್​ನಲ್ಲಿ ಪೋಸ್ಟ್

ಅಮಿತಾಭ್ ಟ್ವಿಟರ್​ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಸದಾ ಒಂದಲ್ಲಾ ಒಂದು ವಿಚಾರದ ಬಗ್ಗೆ ಟ್ವೀಟ್ ಮಾಡುತ್ತಾ ಇರುತ್ತಾರೆ. ಆಸ್ಪತ್ರೆಗೆ ಅಡ್ಮಿಟ್ ಆಗುವ ಸುದ್ದಿ ಹೊರ ಬೀಳುವುದಕ್ಕೂ ಮೊದಲು ಟ್ವಿಟರ್​ನಲ್ಲಿ ಒಂದು ಲೈನ್​ ಹಾಕಿದ್ದರು. ‘ಎಂದೆಂದಿಗೂ ಚಿರಋಣಿ’ ಎಂದು ಅವರು ಪೋಸ್ಟ್ ಮಾಡಿದ್ದರು. ಸರ್ಜರಿ ಆದ ಬಳಿಕ ಅವರು ಈ ರೀತಿ ಪೋಸ್ಟ್​ ಮಾಡಿರಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗೆ ಅಮಿತಾಭ್​ ಬಚ್ಚನ್​ ದಾಖಲು; ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು

ಚೇತರಿಕೆ ಕಂಡ ಬಿಗ್ ಬಿ

ಐಸಿಸಿ ವುಮನ್ ಟಿ20 ಮ್ಯಾಚ್ ನಡೆದಿದೆ. ಈ ಪಂದ್ಯವನ್ನು ಅಮಿತಾಭ್ ಅವರು ಖುಷಿಯಿಂದ ನೋಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ಪಾಪ್​ಕಾರ್ನ್​ ಕೂಡ ತಿಂದಿದ್ದಾರೆ. ಅಭಿಷೇಕ್ ಹಾಗೂ ಅಗಸ್ತ್ಯ ಕೂಡ ಅಮಿತಾಭ್​ ಜೊತೆ ಸೇರಿಕೊಂಡಿದ್ದಾರೆ.

ಸಿನಿಮಾ ಬಗ್ಗೆ

ಅಮಿತಾಭ್ ಬಚ್ಚನ್ ಅವರು 81ನೇ ವಯಸ್ಸಿನಲ್ಲೂ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ‘ಗಣಪತ್’ ಸಿನಿಮಾದಲ್ಲಿ ಟೈಗರ್ ಶ್ರಾಫ್ ಮತ್ತು ಕೃತಿ ಸನೋನ್ ನಟಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಇವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಮೇ 9ರಂದು ಈ ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ