AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amitabh Bachchan: ಶೂಟಿಂಗ್​ ವೇಳೆ ಅಮಿತಾಭ್​ ಬಚ್ಚನ್​ ಕಾಲಿಗೆ ಗಾಯ; ನಡೆಯಲೇಬೇಡಿ ಅಂತ ಸಲಹೆ ನೀಡಿದ ವೈದ್ಯರು

Amitabh Bachchan Hospitalized: ಕಾಲಿಗೆ ಪೆಟ್ಟಾಗಿರುವ ಬಗ್ಗೆ ತಮ್ಮ ಬ್ಲಾಗ್​ ಮೂಲಕ ಅಮಿತಾಭ್​ ಬಚ್ಚನ್ ಅವರು ಮಾಹಿತಿ ನೀಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಪ್ರಾರ್ಥಿಸಿದ್ದಾರೆ.

Amitabh Bachchan: ಶೂಟಿಂಗ್​ ವೇಳೆ ಅಮಿತಾಭ್​ ಬಚ್ಚನ್​ ಕಾಲಿಗೆ ಗಾಯ; ನಡೆಯಲೇಬೇಡಿ ಅಂತ ಸಲಹೆ ನೀಡಿದ ವೈದ್ಯರು
ಅಮಿತಾಭ್ ಬಚ್ಚನ್
TV9 Web
| Edited By: |

Updated on:Oct 24, 2022 | 7:50 AM

Share

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಇತ್ತೀಚೆಗಷ್ಟೇ 80ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅದರ ಬೆನ್ನಲ್ಲೇ ಒಂದು ಕಹಿ ಸುದ್ದಿ ಕೇಳಿಬಂದಿದೆ. ಶೂಟಿಂಗ್​ ವೇಳೆ ಅವರು ಎಡಗಾಲಿಗೆ ಪೆಟ್ಟು (Amitabh Bachchan Injury) ಮಾಡಿಕೊಂಡಿದ್ದಾರೆ. ರಕ್ತನಾಳ ಕಟ್​ ಆಗಿದ್ದರಿಂದ ವಿಪರೀತ ರಕ್ತ ಹೋಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೊಲಿಗೆ ಹಾಕಿಸಲಾಯಿತು. ಈಗ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಒತ್ತಡ ಹಾಕುವಂತಿಲ್ಲ, ನಡೆಯುವಂತಿಲ್ಲ ಎಂದು ಕೂಡ ವೈದ್ಯರು ಸಲಹೆ ನೀಡಿದ್ದಾರೆ ಎಂದು ಸ್ವತಃ ಅಮಿತಾಭ್​ ಬಚ್ಚನ್​ ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಅಮಿತಾಭ್​ ಬಚ್ಚನ್​ ಅವರ ಅನುಭವ ಅಪಾರ. 53 ವರ್ಷಗಳಿಗಿಂತಲೂ ಹೆಚ್ಚು ಕಾಲ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ದಣಿವರಿಯದ ಯುವಕನಂತೆ ಈಗಲೂ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಎಷ್ಟೋ ಜನರಿಗೆ ಅವರು ಮಾದರಿ ಆಗಿದ್ದಾರೆ. ತಮ್ಮದೇ ಬ್ಲಾಗ್​ ಹೊಂದಿರುವ ಅವರು ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಈಗ ಕಾಲಿಗೆ ಪೆಟ್ಟಾಗಿರುವ ಬಗ್ಗೆಯೂ ಬ್ಲಾಗ್​ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಅಮಿತಾಭ್​ ಬಚ್ಚನ್​ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಪ್ರಾರ್ಥಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅಮಿತಾಭ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಈಗ ಕಾಲಿಗೆ ಪೆಟ್ಟು ಮಾಡಿಕೊಂಡಿರುವುದು ಬೇಸರದ ಸಂಗತಿ. ಇಂಥ ಎಷ್ಟೇ ಅಡೆತಡೆಗಳು ಬಂದರೂ ಅಮಿತಾಭ್​ ಅವರು ಕುಗ್ಗುವುದಿಲ್ಲ. ಪ್ರತಿ ಬಾರಿಯೂ ಅವರು ಹೊಸ ಹುಮ್ಮಸ್ಸಿನೊಂದಿಗೆ ಕೆಲಸಕ್ಕೆ ಮರಳುತ್ತಾರೆ. ಅದು ಅನೇಕರಿಗೆ ಸ್ಫೂರ್ತಿ ತುಂಬುತ್ತದೆ.

ಇದನ್ನೂ ಓದಿ
Image
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Image
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
Image
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
Image
ಅಮಿತಾಭ್​ ಬಚ್ಚನ್​ ವ್ಯಕ್ತಿತ್ವ ಎಂಥದ್ದು? ಇಂಚಿಂಚು ವಿವರಿಸಿದ ರಶ್ಮಿಕಾ ಮಂದಣ್ಣ

ಇತ್ತೀಚೆಗೆ ಅದ್ದೂರಿಯಾಗಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಿತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಕಾರ್ಯಕ್ರಮಕ್ಕೆ ಅಮಿತಾಭ್​ ಬಚ್ಚನ್​ ಆಗಮಿಸಬೇಕಿತ್ತು. ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅವರಿಗೆ ಉತ್ತಮ ಒಡನಾಟ ಇದೆ. ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲು ಅವರಿಗೂ ಆಮಂತ್ರಣ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಅವರಿಗೆ ಬರಲು ಸಾಧ್ಯವಾಗಲಿಲ್ಲ. ವಿಡಿಯೋ ಸಂದೇಶದ ಮೂಲಕ ಪುನೀತ್​ ರಾಜ್​ಕುಮಾರ್​ ಅವರನ್ನು ಅಮಿತಾಭ್​ ಸ್ಮರಿಸಿದರು. ‘ಗಂಧದ ಗುಡಿ’ ಸಾಕ್ಷ್ಯಚಿತ್ರಕ್ಕೆ ಶುಭವಾಗಲಿ ಎಂದು ಹರಸಿದರು.

80ರ ಹರೆಯದಲ್ಲೂ ಅಮಿತಾಭ್​ ಬಚ್ಚನ್​ ಅವರು ಸಖತ್ ಬ್ಯುಸಿ ಆಗಿದ್ದಾರೆ. ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮ ನಡೆಸಿಕೊಡುವುದರ ಜೊತೆಗೆ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಅವರನ್ನು ಗಮನದಲ್ಲಿ ಇಟ್ಟುಕೊಂಡೇ ಅನೇಕ ನಿರ್ದೇಶಕರು ಕಥೆ ಬರೆಯುತ್ತಿದ್ದಾರೆ. ಅವರು ಮುಖ್ಯ ಭೂಮಿಕೆ ನಿಭಾಯಿಸಿದ ‘ಗುಡ್​ಬೈ’ ಸಿನಿಮಾ ಇತ್ತೀಚೆಗೆ ತೆರೆಕಂಡಿತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ಆ ಚಿತ್ರಕ್ಕೆ ಸಾಧ್ಯವಾಗಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Mon, 24 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ