AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

ನಟ ಅಮಿತಾಭ್ ಬಚ್ಚನ್ ಇಂದು 83ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅವರು ಸಾವಿರಾರು ಕೋಟಿ ರೂ. ಸಂಪತ್ತಿನ ಒಡೆಯ. ಮುಂಬೈನಲ್ಲಿ ಹಲವು ಬಂಗಲೆಗಳು, ದುಬೈನಲ್ಲಿ ಐಷಾರಾಮಿ ಮ್ಯಾನ್ಷನ್, ಪ್ಯಾರಿಸ್‌ನಲ್ಲಿ ಮನೆ ಸೇರಿದಂತೆ ದೇಶ-ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ. ಅವರ ಒಟ್ಟು ಆಸ್ತಿ 1570 ಕೋಟಿ ರೂ.ಗೂ ಹೆಚ್ಚು ಎನ್ನಲಾಗಿದೆ.

ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
ಅಮಿತಾಭ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 11, 2025 | 8:12 AM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಇಂದು (ಅಕ್ಟೋಬರ್ 11) ಜನ್ಮದಿನ. ಅವರು 82 ವರ್ಷಗಳನ್ನು ಪೂರ್ಣಗೊಳಿಸಿ 83ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರು ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಅಮಿತಾಭ್ ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಇಂದು ಸಾವಿರಾರು ಕೋಟಿ ರೂಪಾಯಿಗಳ ಒಡೆಯ. ಅಮಿತಾಭ್ ಬಚ್ಚನ್ ಬಹಳ ಸಮಯದಿಂದ ಸಿನಿಮಾಗಳಲ್ಲಿದ್ದಾರೆ. ಅವರು ಭಾರತದಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಸಾಕಷ್ಟು ಶ್ರೀಮಂತ. ಜಯಾ ಬಚ್ಚನ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗ ಅಮಿತಾಭ್ ಬ್ಯಾಂಕ್ ಬ್ಯಾಲೆನ್ಸ್ ರಿವೀಲ್ ಆಗಿತ್ತು. ಅವರ ಬ್ಯಾಂಕ್ ಬ್ಯಾಲೆನ್ಸ್ 200 ಕೋಟಿ ರೂಪಾಯಿ ಇತ್ತು ಅನ್ನೋದು ವಿಶೇಷ. ಅವರ ಒಟ್ಟೂ ಆಸ್ತಿ 1570 ಕೋಟಿ ರೂಪಾಯಿ ಅನ್ನೋದು ವಿಶೇಷ.

ಇಷ್ಟೇ ಅಲ್ಲ, ಅಮಿತಾಭ್ ಬಚ್ಚನ್ ಮುಂಬೈನಲ್ಲಿ ದೊಡ್ಡ ಆಸ್ತಿಯನ್ನು ಹೊಂದಿದ್ದಾರೆ. ಮುಂಬೈನಲ್ಲಿ ಕೆಲವು ಬಂಗಲೆಗಳನ್ನು ಹೊಂದಿದ್ದಾರೆ. ಅವರು ಹಾಗೂ ಮಗ ಅಭಿಷೇಕ್ ಒಟ್ಟಾಗಿ ಸೇರಿ ಸಾಕಷ್ಟು ಆಸ್ತಿಗಳನ್ನು ಖರೀದಿ ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ

ಅಮಿತಾಭ್ ಬಚ್ಚನ್ ಹಲವು ಕಡೆಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮನೆ ಹೊಂದಿದ್ದಾರೆ. ಪ್ಯಾರಿಸ್​ನಲ್ಲೂ ಒಂದು ಮನೆ ಇದೆ. ಈ ಮನೆಯನ್ನು ಜಯಾ ಬಚ್ಚನ್ ಅರು ಅಮಿತಾಭ್​ಗೆ ಉಡುಗೊರೆಯಾಗಿ ನೀಡಿದ್ದಾರೆ ಎನ್ನಲಾಗಿದೆ. ಇದು ಫ್ರೆಂಚ್ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಇದೆ.

ಇನ್ನು ದುಬೈನಲ್ಲಿ ಅಮಿತಾಭ್ ಅವರು ದೊಡ್ಡ ಮ್ಯಾನ್ಶನ್ ಹೊಂದಿದ್ದಾರೆ. ಅವರು ಆಗಾಗ ದುಬೈ ಟ್ರಿಪ್ ತೆರಳುತ್ತಾರೆ ಮತ್ತು ಇದೇ ಮನೆಯಲ್ಲಿ ವಾಸ ಮಾಡುತ್ತಾರೆ. ಇಲ್ಲಿ ಗಾಲ್ಫ್ ಕ್ಲಬ್, ಸ್ವಮಿಂಗ್​​ಪೂಲ್​ಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಉದಾಹರಣೆ ನೀಡಿ ಅಮಿತಾಭ್ ಬಚ್ಚನ್​​ಗೆ ಪಾಠ ಮಾಡಿದ ನೆಟ್ಟಿಗರು 

ಅಮಿತಾಭ್ ಬಚ್ಚನ್ ಮುಂಬೈನಲ್ಲಿ ಜಲ್ಸಾ, ಜನಕ್, ವತ್ಸ ಮತ್ತು ಪ್ರತೀಕ್ಷಾ ಎಂಬ ಬಂಗಲೆಗಳನ್ನು ಹೊಂದಿದ್ದಾರೆ. ಈ ಪೈಕಿ ಪ್ರತೀಕ್ಷಾ ಅವರನ್ನು ಅಮಿತಾಬ್ ಬಚ್ಚನ್ ತಮ್ಮ ಮಗಳು ಶ್ವೇತಾ ನಂದಾಗೆ ಉಡುಗೊರೆಯಾಗಿ ನೀಡಿದ್ದಾರೆ. ಅಮಿತಾಭ್ ಬಚ್ಚನ್ ಬಹಳ ಸಮಯದಿಂದ ಚಿತ್ರರಂಗದಲ್ಲಿದ್ದಾರೆ. ಅಮಿತಾಬ್ ಬಚ್ಚನ್ ಜಾಹೀರಾತು ಮತ್ತು ನಟನೆಯ ಮೂಲಕ ಸಾಕಷ್ಟು ಸಂಪತ್ತನ್ನು ಗಳಿಸಿದ್ದಾರೆ. ‘ಕೌನ್ ಬನೇಗಾ ಕರೋಡ್ಪತಿ’ ಶೋ ಹೋಸ್ಟ್ ಮಾಡುವುದಕ್ಕೆ ಅವರಿಗೆ ಕೋಟಿ ಕೋಟಿ ಸಿಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:11 am, Sat, 11 October 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ