AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ

Amitabh Bachchan Health: ಅಮಿತಾಭ್​ ಬಚ್ಚನ್​ ಮಾಡಿರುವ ಈ ಒಂದು ವಾಕ್ಯದ ಟ್ವೀಟ್​ ಕೆಲವೇ ಗಂಟೆಗಳಲ್ಲಿ ವೈರಲ್​ ಆಗಿದೆ. ಕಮೆಂಟ್​ ಮಾಡಿರುವ ಅನೇಕರು ಅಮಿತಾಭ್​ ಅವರ ಆರೋಗ್ಯದ ಬಗ್ಗೆ ಆತಂಕ ಹೊರಹಾಕಿದ್ದಾರೆ.

79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
ಅಮಿತಾಭ್ ಬಚ್ಚನ್
TV9 Web
| Edited By: |

Updated on: Feb 28, 2022 | 11:45 AM

Share

ನಟ ಅಮಿತಾಭ್​ ಬಚ್ಚನ್ (Amitabh Bachchan)​ ಅವರಿಗೆ ಚಿತ್ರರಂಗದಲ್ಲಿ ಹಲವು ದಶಕಗಳ ಅನುಭವ ಇದೆ. ಇಂದಿಗೂ ಅವರು ದಣಿವರಿಯದ ವ್ಯಕ್ತಿಯಂತೆ ಬಣ್ಣದ ಲೋಕದಲ್ಲಿ ಕೆಲಸ ಮಾಡುತ್ತಲೇ ಇದ್ದಾರೆ. ಅಮಿತಾಭ್​ ಬಚ್ಚನ್​ ಅವರಿಗೆ ಈಗ 79 ವರ್ಷ ವಯಸ್ಸು. ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಅವರು ಎದುರಿಸಿ ನಿಂತಿದ್ದಾರೆ. ಈ ವಯಸ್ಸಿನಲ್ಲೂ ಅವರು ಹಗಲಿರುಳು ಕಷ್ಟಪಡುತ್ತಿದ್ದಾರೆ. ಅನಾರೋಗ್ಯದ ಕಾರಣದಿಂದಲೂ ಅವರು ಆಗಾಗ ಸುದ್ದಿಯಾಗುತ್ತಾರೆ. ಅದರ ನಡುವೆ ಅಮಿತಾಭ್​ ಬಚ್ಚನ್​ ಅವರು ಮಾಡಿದ ಒಂದೇ ಒಂದು ಟ್ವೀಟ್​ನಿಂದ (Amitabh Bachchan Tweet) ಅಭಿಮಾನಿಗಳಲ್ಲಿ ಆತಂಕ ಮೂಡುವಂತಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಅವರು ತಮ್ಮ ದಿನಚರಿ ಕುರಿತ ಮಾಹಿತಿ ನೀಡುತ್ತಾ ಇರುತ್ತಾರೆ. ಭಾನುವಾರ ರಾತ್ರಿ (ಫೆ.27) ಅವರು ಮಾಡಿದ ಒಂದು ಟ್ವೀಟ್​ನಿಂದ ಎಲ್ಲರಿಗೂ ಚಿಂತೆ ಶುರುವಾಗಿದೆ. ‘ಹೃದಯ ಬಡಿಯುತ್ತಿದೆ.. ಕಾಳಜಿ ಆಗಿದೆ. ಭರವಸೆ ಇದೆ’ ಎಂದು ಅಮಿತಾಭ್​ ಬಚ್ಚನ್​ ಟ್ವೀಟ್​ ಮಾಡಿದ್ದಾರೆ. ಇದರ ಅರ್ಥ ಏನು ಎಂಬುದನ್ನು ಅವರು ಸರಿಯಾಗಿ ತಿಳಿಸಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಆತಂಕ ಆಗಿದೆ. ಅಮಿತಾಭ್​ ಆರೋಗ್ಯ (Amitabh Bachchan Health) ಕೈ ಕೊಟ್ಟಿರಬಹುದು ಎಂದು ಫ್ಯಾನ್ಸ್​ ಭಾವಿಸಿದ್ದಾರೆ.

ಅಮಿತಾಭ್​ ಬಚ್ಚನ್​ ಮಾಡಿರುವ ಈ ಒಂದು ವಾಕ್ಯದ ಟ್ವೀಟ್​ ಕೆಲವೇ ಗಂಟೆಗಳಲ್ಲಿ ವೈರಲ್​ ಆಗಿದೆ. ಸಾವಿರಾರು ಜನರು ಇದನ್ನು ಲೈಕ್​ ಮಾಡಿದ್ದು, ನೂರಾರು ಮಂದಿ ರೀಟ್ವೀಟ್​ ಮಾಡಿದ್ದಾರೆ. ಕಮೆಂಟ್​ ಮಾಡಿರುವ ಅನೇಕರು ಅಮಿತಾಭ್​ ಅವರ ಆರೋಗ್ಯದ ಬಗ್ಗೆ ಆತಂಕ ಹೊರಹಾಕಿದ್ದಾರೆ.

‘ನೀವು ಬೇಗ ಗುಣಮುಖರಾಗಲಿ ಅಂತ ಪ್ರಾರ್ಥಿಸುತ್ತೇವೆ ಸರ್’ ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಚಿಂತೆ ಮಾಡಬೇಡಿ ಸರ್​. ನಿಮಗೆ ಏನೂ ಆಗುವುದಿಲ್ಲ. ವಿಶ್ರಾಂತಿ ಪಡೆದು ಚೆನ್ನಾಗಿ ನಿದ್ರೆ ಮಾಡಿ’ ಎಂದು ಮತ್ತೊರ್ವ ಅಭಿಮಾನಿ ಸಲಹೆ ನೀಡಿದ್ದಾರೆ. ಜನರು ಈ ರೀತಿ ಕಮೆಂಟ್​ ಮಾಡಿದ್ದರೂ ಕೂಡ ಅಮಿತಾಭ್​ ಬಚ್ಚನ್​ ಅವರು ತಮ್ಮ ಟ್ವೀಟ್​ನ ಅರ್ಥ ಏನು ಎಂಬುದನ್ನು ವಿವರಿಸಿಲ್ಲ.

ವರ್ಷಗಳು ಉರುಳಿದಂತೆ ಅಮಿತಾಭ್​ ಬಚ್ಚನ್​ ಅವರ ಚಾರ್ಮ್​ ಹೆಚ್ಚುತ್ತಲೇ ಇದೆ. ಹೊಸ ತಲೆಮಾರಿನ ಯುವ ಹೀರೋಗಳಿಗೂ ಸಹ ಪೈಪೋಟಿ ನೀಡುವ ರೀತಿಯಲ್ಲಿ ಅಮಿತಾಭ್​ ಅವರು ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಬಾಲಿವುಡ್​ ನಿರ್ದೇಶಕರು ಬಿಗ್​ ಬಿ ಸಲುವಾಗಿಯೇ ಕಥೆಗಳನ್ನು ಸಿದ್ಧಪಡಿಸುತ್ತಾರೆ. ಅಮಿತಾಭ್​ ಅವರ ಕಾಲ್​ಶೀಟ್​ ಪಡೆಯಲು ಈಗಲೂ ನಿರ್ಮಾಪಕರು ಕ್ಯೂ ನಿಲ್ಲುತ್ತಾರೆ. ಚಿತ್ರರಂಗದ ಎಷ್ಟೋ ಹೀರೋಗಳಿಗೆ ಮಾದರಿಯಾಗಿ, ಪ್ರೇರಣೆಯಾಗಿ ಅಮಿತಾಭ್​ ಬಚ್ಚನ್​ ಕಾರ್ಯಮಗ್ನರಾಗಿದ್ದಾರೆ.

ಸದ್ಯ ಅಮಿತಾಭ್​ ಬಚ್ಚನ್​ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಕಳೆದ ವರ್ಷ ಬಿಡುಗಡೆ ಆದ ‘ಚೆಹ್ರೆ’ ಚಿತ್ರದಲ್ಲಿ ಅವರು ಡಿಫರೆಂಟ್​ ಪಾತ್ರ ನಿಭಾಯಿಸಿದ್ದರು. ಮಾ.4ರಂದು ಅವರ ‘ಜುಂಡ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅವರು ಫುಟ್​ಬಾಲ್​ ಕೋಚ್​ ಪಾತ್ರ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್​ ಬಚ್ಚನ್​ ಅವರು ‘ಗುಡ್​ ಬೈ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರ ಕೂಡ ಹೈಪ್​ ಸೃಷ್ಟಿ ಮಾಡಿದೆ. ಇದಲ್ಲದೇ ‘ಬ್ರಹ್ಮಾಸ್ತ್ರ’, ‘ಊಂಚಾಯಿ’, ‘ರನ್​ವೇ 34’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಮಿತಾಭ್​ ಬಚ್ಚನ್​ ನಟಿಸುತ್ತಿದ್ದಾರೆ. ಇದರ ನಡುವೆ ಅವರು ಕಿರುತೆರೆ ಕಾರ್ಯಕ್ರಮಗಳ ನಿರೂಪಣೆ ಮಾಡುವ ಮೂಲಕವೂ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.

ಇದನ್ನೂ ಓದಿ:

ಅಮಿತಾಭ್​​ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದಾರೆ ಕೃತಿ ಸನೋನ್​; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

‘ಕೌನ್​ ಬನೇಗಾ ಕರೋಡ್​​ಪತಿ’ ಶೋನಲ್ಲಿ ಕನ್ನಡ ಸಿನಿಮಾ ಮಾತು; ಅಮಿತಾಭ್​ ಕಡೆಯಿಂದ ಶುಭ ಹಾರೈಕೆ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು