Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡಿದ್ದಕ್ಕೆ ಅರ್ಥವೇನು ಎಂದು ಕೆಲವರು ಪ್ರಶ್ನಿಸಿದ್ದಾರೆ.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​
ಅಮಿತಾಭ್​ ಬಚ್ಚನ್​
Follow us
ಮದನ್​ ಕುಮಾರ್​
|

Updated on:Sep 05, 2023 | 5:04 PM

ಹಿರಿಯ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ವಿಚಾರಗಳ ಬಗ್ಗೆ ಅವರು ಆಗಾಗ ಪೋಸ್ಟ್​ ಮಾಡುತ್ತಾರೆ. ಈಗ ಅವರು ಮಾಡಿರುವ ಒಂದು ಟ್ವೀಟ್​ (Amitabh Bachchan Tweet) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿದ್ದಾರೆ. ಬೇರೆ ಯಾವುದೇ ಸಂದರ್ಭದಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿದ್ದರೆ ಅದು ಚರ್ಚೆ ಆಗುತ್ತಿರಲಿಲ್ಲ. ಈಗ ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್​’ (Bharat) ಎಂದು ಬದಲಾಯಿಸಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಅಮಿತಾಭ್​ ಬಚ್ಚನ್​ ಅವರು ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿರುವುದು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡುವ ಅವಶ್ಯಕತೆ ಏನು ಎಂದು ಕೆಲವರು ಪ್ರಶ್ನಿಸಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಅಮಿತಾಭ್​ ಬಚ್ಚನ್​ ಅವರ ಟ್ವೀಟ್​:

ಪ್ರತಿಪಕ್ಷಗಳು ‘INDIA’ ಎಂಬ ಹೆಸರಿನಲ್ಲಿ ಮೈತ್ರಿಕೂಟ ಮಾಡಿಕೊಂಡಿವೆ. ಆ ಕಾರಣದಿಂದಲೇ ದೇಶದ ಹೆಸರನ್ನು INDIA ಎಂಬುದರ ಬದಲು ‘ಭಾರತ್​’ ಎಂದು ಬದಲಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೆಲವರು ಊಹಿಸಿದ್ದಾರೆ. ಹಾಗಾದರೆ ಅಮಿತಾಭ್​ ಬಚ್ಚನ್​ ಅವರಿಗೂ ‘INDIA’ ಮೈತ್ರಿಕೂಟದ ಮೇಲೆ ಅಸಮಾಧಾನ ಇದೆಯೇ ಎಂದು ನೆಟ್ಟಿಗರು ಕಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ. ಆ ಬಗ್ಗೆಯೂ ಇನ್ನಷ್ಟೇ ಬಿಗ್​ ಬಿ ಕಡೆಯಿಂದ ಸ್ಪಷ್ಟನೆ ಸಿಗುವುದು ಬಾಕಿ ಇದೆ.

ಇದನ್ನೂ ಓದಿ: ಮಾವನ ಜತೆ ಮುದ್ದು ಸೊಸೆಯ ತರಲೆ-ತಮಾಷೆ; ಐಶ್​-ಅಮಿತಾಭ್​ ಬಚ್ಚನ್​ ಕ್ಯೂಟ್​ ವಿಡಿಯೋ ನೋಡಿ

ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್​ ಎಂದು ಬದಲಾಯಿಸುವ ಚರ್ಚೆಯ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ. ಈಗ ಹೆಸರು ಬದಲಾವಣೆಯಿಂದ ಏನೂ ಪ್ರಯೋಜನ ಇಲ್ಲ ಎಂದು ಕೆಲವರು ಹೇಳಿದ್ದಾರೆ. ‘ಇಂಡಿಯಾ ಎಂಬ ಹೆಸರು ಚೆನ್ನಾಗಿದೆ. ಆದರೆ ಭಾರತ್​ ಎಂಬುದು ಎಮೋಷನ್​’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ: Amitabh Bachchan: ಅಭಿಮಾನಿಗಳನ್ನು ಭೇಟಿ ಮಾಡುವಾಗ ಚಪ್ಪಲಿ ಹಾಕಿಕೊಳ್ಳಲ್ಲ ಅಮಿತಾಭ್​ ಬಚ್ಚನ್​; ಕಾರಣ ತಿಳಿಸಿದ ಸ್ಟಾರ್​ ನಟ

ಸಿನಿಮಾ ವಿಚಾರಕ್ಕೆ ಬರುವುದಾದರೆ ಅಮಿತಾಭ್​ ಬಚ್ಚನ್​ ಅವರು ‘ಕಲ್ಕಿ 2898 ಎಡಿ’, ‘ಗಣಪತ್​ ಪಾರ್ಟ್​ 1’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕೌನ್​ ಬನೇಗಾ ಕರೋಡ್​ಪತಿ ಸೀಸನ್​ 15’ ಶೋನ ನಿರೂಪಣೆ ಕೂಡ ಮಾಡುತ್ತಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:28 pm, Tue, 5 September 23

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ