AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡಿದ್ದಕ್ಕೆ ಅರ್ಥವೇನು ಎಂದು ಕೆಲವರು ಪ್ರಶ್ನಿಸಿದ್ದಾರೆ.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on:Sep 05, 2023 | 5:04 PM

Share

ಹಿರಿಯ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ವಿಚಾರಗಳ ಬಗ್ಗೆ ಅವರು ಆಗಾಗ ಪೋಸ್ಟ್​ ಮಾಡುತ್ತಾರೆ. ಈಗ ಅವರು ಮಾಡಿರುವ ಒಂದು ಟ್ವೀಟ್​ (Amitabh Bachchan Tweet) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿದ್ದಾರೆ. ಬೇರೆ ಯಾವುದೇ ಸಂದರ್ಭದಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿದ್ದರೆ ಅದು ಚರ್ಚೆ ಆಗುತ್ತಿರಲಿಲ್ಲ. ಈಗ ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್​’ (Bharat) ಎಂದು ಬದಲಾಯಿಸಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಅಮಿತಾಭ್​ ಬಚ್ಚನ್​ ಅವರು ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿರುವುದು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡುವ ಅವಶ್ಯಕತೆ ಏನು ಎಂದು ಕೆಲವರು ಪ್ರಶ್ನಿಸಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಅಮಿತಾಭ್​ ಬಚ್ಚನ್​ ಅವರ ಟ್ವೀಟ್​:

ಪ್ರತಿಪಕ್ಷಗಳು ‘INDIA’ ಎಂಬ ಹೆಸರಿನಲ್ಲಿ ಮೈತ್ರಿಕೂಟ ಮಾಡಿಕೊಂಡಿವೆ. ಆ ಕಾರಣದಿಂದಲೇ ದೇಶದ ಹೆಸರನ್ನು INDIA ಎಂಬುದರ ಬದಲು ‘ಭಾರತ್​’ ಎಂದು ಬದಲಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೆಲವರು ಊಹಿಸಿದ್ದಾರೆ. ಹಾಗಾದರೆ ಅಮಿತಾಭ್​ ಬಚ್ಚನ್​ ಅವರಿಗೂ ‘INDIA’ ಮೈತ್ರಿಕೂಟದ ಮೇಲೆ ಅಸಮಾಧಾನ ಇದೆಯೇ ಎಂದು ನೆಟ್ಟಿಗರು ಕಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ. ಆ ಬಗ್ಗೆಯೂ ಇನ್ನಷ್ಟೇ ಬಿಗ್​ ಬಿ ಕಡೆಯಿಂದ ಸ್ಪಷ್ಟನೆ ಸಿಗುವುದು ಬಾಕಿ ಇದೆ.

ಇದನ್ನೂ ಓದಿ: ಮಾವನ ಜತೆ ಮುದ್ದು ಸೊಸೆಯ ತರಲೆ-ತಮಾಷೆ; ಐಶ್​-ಅಮಿತಾಭ್​ ಬಚ್ಚನ್​ ಕ್ಯೂಟ್​ ವಿಡಿಯೋ ನೋಡಿ

ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್​ ಎಂದು ಬದಲಾಯಿಸುವ ಚರ್ಚೆಯ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ. ಈಗ ಹೆಸರು ಬದಲಾವಣೆಯಿಂದ ಏನೂ ಪ್ರಯೋಜನ ಇಲ್ಲ ಎಂದು ಕೆಲವರು ಹೇಳಿದ್ದಾರೆ. ‘ಇಂಡಿಯಾ ಎಂಬ ಹೆಸರು ಚೆನ್ನಾಗಿದೆ. ಆದರೆ ಭಾರತ್​ ಎಂಬುದು ಎಮೋಷನ್​’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ: Amitabh Bachchan: ಅಭಿಮಾನಿಗಳನ್ನು ಭೇಟಿ ಮಾಡುವಾಗ ಚಪ್ಪಲಿ ಹಾಕಿಕೊಳ್ಳಲ್ಲ ಅಮಿತಾಭ್​ ಬಚ್ಚನ್​; ಕಾರಣ ತಿಳಿಸಿದ ಸ್ಟಾರ್​ ನಟ

ಸಿನಿಮಾ ವಿಚಾರಕ್ಕೆ ಬರುವುದಾದರೆ ಅಮಿತಾಭ್​ ಬಚ್ಚನ್​ ಅವರು ‘ಕಲ್ಕಿ 2898 ಎಡಿ’, ‘ಗಣಪತ್​ ಪಾರ್ಟ್​ 1’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕೌನ್​ ಬನೇಗಾ ಕರೋಡ್​ಪತಿ ಸೀಸನ್​ 15’ ಶೋನ ನಿರೂಪಣೆ ಕೂಡ ಮಾಡುತ್ತಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:28 pm, Tue, 5 September 23

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ