AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡಿದ್ದಕ್ಕೆ ಅರ್ಥವೇನು ಎಂದು ಕೆಲವರು ಪ್ರಶ್ನಿಸಿದ್ದಾರೆ.

‘ಇಂಡಿಯಾ’ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್​ ಮಾತಾ ಕಿ ಜೈ’ ಎಂದ ಅಮಿತಾಭ್​ ಬಚ್ಚನ್​
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on:Sep 05, 2023 | 5:04 PM

Share

ಹಿರಿಯ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ವಿಚಾರಗಳ ಬಗ್ಗೆ ಅವರು ಆಗಾಗ ಪೋಸ್ಟ್​ ಮಾಡುತ್ತಾರೆ. ಈಗ ಅವರು ಮಾಡಿರುವ ಒಂದು ಟ್ವೀಟ್​ (Amitabh Bachchan Tweet) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿದ್ದಾರೆ. ಬೇರೆ ಯಾವುದೇ ಸಂದರ್ಭದಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿದ್ದರೆ ಅದು ಚರ್ಚೆ ಆಗುತ್ತಿರಲಿಲ್ಲ. ಈಗ ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್​’ (Bharat) ಎಂದು ಬದಲಾಯಿಸಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಅಮಿತಾಭ್​ ಬಚ್ಚನ್​ ಅವರು ‘ಭಾರತ್​ ಮಾತಾ ಕಿ ಜೈ’ ಎಂದು ಟ್ವೀಟ್​ ಮಾಡಿರುವುದು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಮಿತಾಭ್​ ಬಚ್ಚನ್​ ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಭಾರತದ ಧ್ವಜ ಮತ್ತು ಕೆಂಪು ಬಾವುಟ ಇರುವ ಎಮೋಜಿಯನ್ನು ಅವರು ಬಳಸಿದ್ದಾರೆ. ಕೇವಲ ಎರಡೂವರೆ ಗಂಟೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ಈ ನಿರ್ದಿಷ್ಟ ಸಮಯದಲ್ಲಿ ಈ ರೀತಿ ಟ್ವೀಟ್​ ಮಾಡುವ ಅವಶ್ಯಕತೆ ಏನು ಎಂದು ಕೆಲವರು ಪ್ರಶ್ನಿಸಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಅಮಿತಾಭ್​ ಬಚ್ಚನ್​ ಅವರ ಟ್ವೀಟ್​:

ಪ್ರತಿಪಕ್ಷಗಳು ‘INDIA’ ಎಂಬ ಹೆಸರಿನಲ್ಲಿ ಮೈತ್ರಿಕೂಟ ಮಾಡಿಕೊಂಡಿವೆ. ಆ ಕಾರಣದಿಂದಲೇ ದೇಶದ ಹೆಸರನ್ನು INDIA ಎಂಬುದರ ಬದಲು ‘ಭಾರತ್​’ ಎಂದು ಬದಲಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೆಲವರು ಊಹಿಸಿದ್ದಾರೆ. ಹಾಗಾದರೆ ಅಮಿತಾಭ್​ ಬಚ್ಚನ್​ ಅವರಿಗೂ ‘INDIA’ ಮೈತ್ರಿಕೂಟದ ಮೇಲೆ ಅಸಮಾಧಾನ ಇದೆಯೇ ಎಂದು ನೆಟ್ಟಿಗರು ಕಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ. ಆ ಬಗ್ಗೆಯೂ ಇನ್ನಷ್ಟೇ ಬಿಗ್​ ಬಿ ಕಡೆಯಿಂದ ಸ್ಪಷ್ಟನೆ ಸಿಗುವುದು ಬಾಕಿ ಇದೆ.

ಇದನ್ನೂ ಓದಿ: ಮಾವನ ಜತೆ ಮುದ್ದು ಸೊಸೆಯ ತರಲೆ-ತಮಾಷೆ; ಐಶ್​-ಅಮಿತಾಭ್​ ಬಚ್ಚನ್​ ಕ್ಯೂಟ್​ ವಿಡಿಯೋ ನೋಡಿ

ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್​ ಎಂದು ಬದಲಾಯಿಸುವ ಚರ್ಚೆಯ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ. ಈಗ ಹೆಸರು ಬದಲಾವಣೆಯಿಂದ ಏನೂ ಪ್ರಯೋಜನ ಇಲ್ಲ ಎಂದು ಕೆಲವರು ಹೇಳಿದ್ದಾರೆ. ‘ಇಂಡಿಯಾ ಎಂಬ ಹೆಸರು ಚೆನ್ನಾಗಿದೆ. ಆದರೆ ಭಾರತ್​ ಎಂಬುದು ಎಮೋಷನ್​’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ: Amitabh Bachchan: ಅಭಿಮಾನಿಗಳನ್ನು ಭೇಟಿ ಮಾಡುವಾಗ ಚಪ್ಪಲಿ ಹಾಕಿಕೊಳ್ಳಲ್ಲ ಅಮಿತಾಭ್​ ಬಚ್ಚನ್​; ಕಾರಣ ತಿಳಿಸಿದ ಸ್ಟಾರ್​ ನಟ

ಸಿನಿಮಾ ವಿಚಾರಕ್ಕೆ ಬರುವುದಾದರೆ ಅಮಿತಾಭ್​ ಬಚ್ಚನ್​ ಅವರು ‘ಕಲ್ಕಿ 2898 ಎಡಿ’, ‘ಗಣಪತ್​ ಪಾರ್ಟ್​ 1’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕೌನ್​ ಬನೇಗಾ ಕರೋಡ್​ಪತಿ ಸೀಸನ್​ 15’ ಶೋನ ನಿರೂಪಣೆ ಕೂಡ ಮಾಡುತ್ತಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:28 pm, Tue, 5 September 23

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?