AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಜೆಕ್ಟ್ ಮಾಡಿದ ಈ ಐದು ಚಿತ್ರಗಳ ಬಗ್ಗೆ ಅಮಿತಾಭ್ ಬಚ್ಚನ್​ಗೆ ಇದೆ ವಿಷಾದ

ಅಮಿತಾಭ್ ‘ಕಲ್ಕಿ 2898 ಎಡಿ' ಮೂಲಕ ಪ್ರೇಕ್ಷಕರ ಮನ ಗೆಲ್ಲುತ್ತಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ನಿರ್ವಹಿಸಿದ ಅತ್ಯುತ್ತಮ ಪಾತ್ರಗಳಲ್ಲಿ ಇದೂ ಒಂದು. ಆದರೆ, ವೃತ್ತಿಜೀವನದಲ್ಲಿ ತಾವು ತಿರಸ್ಕರಿಸಿದ 5 ಚಿತ್ರಗಳ ಬಗ್ಗೆ ಅವರಿಗೆ ವಿಷಾದ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ರಿಜೆಕ್ಟ್ ಮಾಡಿದ ಈ ಐದು ಚಿತ್ರಗಳ ಬಗ್ಗೆ ಅಮಿತಾಭ್ ಬಚ್ಚನ್​ಗೆ ಇದೆ ವಿಷಾದ
ರಿಜೆಕ್ಟ್ ಮಾಡಿದ ಈ ಐದೂ ಚಿತ್ರಗಳ ಬಗ್ಗೆ ಅಮಿತಾಭ್ ಬಚ್ಚನ್​ಗೆ ಇದೆ ವಿಷಾದ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 04, 2024 | 11:47 AM

Share

ಪ್ರೇಕ್ಷಕರು ‘ಕಲ್ಕಿ 2898 ಎಡಿ’ ಚಿತ್ರವನ್ನು ಇಷ್ಟಪಡುತ್ತಿದ್ದಾರೆ. ಜೂನ್ 27ರಂದು ಬಿಡುಗಡೆಯಾದ ಈ ಸಿನಿಮಾ 700 ಕೋಟಿ ರೂಪಾಯಿ ವ್ಯವಹಾರ ಮಾಡಿದೆ. ಇದರಲ್ಲಿ ಸೌತ್ ಸೂಪರ್ ಸ್ಟಾರ್ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ಅಮಿತಾಭ್​ ಬಚ್ಚನ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. 83ರ ಹರೆಯದಲ್ಲೂ ಅಮಿತಾಭ್​ ಈ ಚಿತ್ರದಲ್ಲಿ ಅದ್ಭುತ ನಟನೆ ತೋರಿದ್ದಾರೆ. ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರದಲ್ಲಿ ಬಿಗ್ ಬಿ ನಟಿಸಿದ್ದಾರೆ.

‘ಕಲ್ಕಿ 2898 ಎಡಿ’ ಮೂಲಕ ಅಮಿತಾಭ್ ಪ್ರೇಕ್ಷಕರ ಮನ ಗೆಲ್ಲುತ್ತಿದ್ದಾರೆ. ಅಮಿತಾಭ್ ವೃತ್ತಿಜೀವನದಲ್ಲಿ ನಿರ್ವಹಿಸಿದ ಅತ್ಯುತ್ತಮ ಪಾತ್ರಗಳಲ್ಲಿ ಇದೂ ಒಂದು. ಆದರೆ, ವೃತ್ತಿಜೀವನದಲ್ಲಿ ತಾವು ತಿರಸ್ಕರಿಸಿದ 5 ಚಿತ್ರಗಳ ಬಗ್ಗೆ ಅವರಿಗೆ ವಿಷಾದ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಕೋಯಿ ಮಿಲ್ ಗಯಾ’

‘ಕೋಯಿ ಮಿಲ್ ಗಯಾ’ ಚಿತ್ರದಲ್ಲಿ ಹೃತಿಕ್ ರೋಷನ್, ರೇಖಾ, ಪ್ರೀತಿ ಜಿಂಟಾ ನಟಿಸಿದ್ದರು. ರಾಕೇಶ್ ರೋಷನ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಚಿತ್ರದಲ್ಲಿ ರೇಖಾ ಅವರ ಗಂಡನ ಪಾತ್ರವನ್ನು ಮಾಡಲು ಅಮಿತಾಭ್​ಗೆ ಅವಕಾಶ ನೀಡಲಾಗಿತ್ತು. ಇದು ವಿಜ್ಞಾನಿಯ ಪಾತ್ರ ಆಗಿತ್ತು. ಆದರೆ, ಬಿಗ್ ಬಿ ಈ ಪಾತ್ರ ಮಾಡಲು ನಿರಾಕರಿಸಿದ್ದರು.

ಕುರ್ಬಾನಿ

ಅಮಿತಾಭ್ ರಿಜೆಕ್ಟ್ ಮಾಡಿದ ಸಿನಿಮಾಗಳ ಸಾಲಿನಲ್ಲಿ ‘ಕುರ್ಬಾನಿ’ ಸಿನಿಮಾ ಕೂಡ ಒಂದು. 1980 ರಲ್ಲಿ ಬಂದ ಈ ಚಿತ್ರವನ್ನು ಅಮಿತಾಭ್ ಬಚ್ಚನ್ ಅವರಿಗೆ ನೀಡಲಾಯಿತು. ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಆ ಸಮಯದಲ್ಲಿ ಅಮಿತಾಭ್ ಬಿಡುವಿಲ್ಲದ ಕಾರಣ ಅವರು ಈ ಚಿತ್ರದಲ್ಲಿ ನಟಿಸಲು ಮಾಡಲು ನಿರಾಕರಿಸಿದರು. ನಂತರ ಈ ಚಿತ್ರದಲ್ಲಿ ವಿನೋದ್ ಖನ್ನಾ ನಾಯಕನಾಗಿ ಆಯ್ಕೆಯಾದರು. ಫಿರೋಜ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದರು.

ಸ್ಲಮ್‌ಡಾಗ್ ಮಿಲಿಯನೇರ್

ಅಮಿತಾಭ್ ಅವರ ಜನಪ್ರಿಯ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್ಪತಿ’ ಶೋನ ಸ್ಲಮ್‌ಡಾಗ್ ಮಿಲಿಯನೇರ್’ನಲ್ಲಿ ತೋರಿಸಲಾಯಿತು. ಚಿತ್ರದಲ್ಲಿ ಈ ಕಾರ್ಯಕ್ರಮವನ್ನು ಹೋಸ್ಟ್ ಮಾಡಲು ಅಮಿತಾಭ್​ ಬಚ್ಚನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು. ಇದರ ನಂತರ ಅನಿಲ್ ಕಪೂರ್ ಹೋಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರವು 8 ಆಸ್ಕರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಮಿಷನ್ ಕಾಶ್ಮೀರ

ವಿಧು ವಿನೋದ್ ಚೋಪ್ರಾ ನಿರ್ದೇಶನದ ‘ಮಿಷನ್ ಕಾಶ್ಮೀರ್’ ಚಿತ್ರದಲ್ಲಿ ‘ಇನಾಯತ್ ಖಾನ್’ ಪಾತ್ರವನ್ನು ಅಮಿತಾಭ್​ಗೆ ನೀಡಲಾಗಿತ್ತು. ಆ ಸಮಯದಲ್ಲಿ ಬಿಗ್ ಬಿ ‘ಮೊಹಬ್ಬತೇ’ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಹಾಗಾಗಿಯೇ ಅವರು ಈ ಚಿತ್ರವನ್ನೂ ತಿರಸ್ಕರಿಸಿದ್ದರು. 2002ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: 

ಮಿಸ್ಟರ್ ಇಂಡಿಯಾ

‘ಮಿಸ್ಟರ್ ಇಂಡಿಯಾ ಮೇ’ ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಆದರೆ ಈ ಚಿತ್ರಕ್ಕೆ ಅವರು ಮೊದಲ ಆಯ್ಕೆಯಾಗಿರಲಿಲ್ಲ ಎಂದು ಸಹೋದರ ಬೋನಿ ಕಪೂರ್ ಹೇಳಿದ್ದರು. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಬೋನಿ, ಅಮಿತಾಭ್ ಅವರಿಗೆ ಈ ಚಿತ್ರದ ಪಾತ್ರ ಆಫರ್ ಮಾಡಲಾಗಿತ್ತು. ಆದರೆ, ಕೆಲವು ವಿಷಯಗಳು ಸರಿ ಬರಲಿಲ್ಲ. ಹಾಗಾಗಿ ಅವರು ಈ ಚಿತ್ರವನ್ನು ತಿರಸ್ಕರಿಸಿದರು’ ಎಂದಿದ್ದರು. ಆ ಬಳಿಕ ಸಿನಿಮಾ ಅನಿಲ್ ಕಪೂರ್ ಪಾಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?