AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮನೆ ಮಾಡಲು ಭೂಮಿ ಖರೀದಿಸಿದ ಅಮಿತಾಭ್; ಬೆಲೆ ಎಷ್ಟು ಕೋಟಿ?

ಮುಂದಿನ ದಿನಗಳಲ್ಲಿ ಅಯೋಧ್ಯೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಈ ವೇಳೆ ಭೂಮಿಗೆ ಬೆಲೆ ಹೆಚ್ಚಲಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅಮಿತಾಭ್ ಬಚ್ಚನ್ ಅವರು ಹೂಡಿಕೆ ಮಾಡಿದ್ದಾರೆ ಎಂದು ವರದಿ ಆಗಿದೆ. ಜನವರಿ 22ರಂದು ಅದ್ದೂರಿಯಾಗಿ ರಾಮ ಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆ ಆಗಲಿದೆ.

ಅಯೋಧ್ಯೆಯಲ್ಲಿ ಮನೆ ಮಾಡಲು ಭೂಮಿ ಖರೀದಿಸಿದ ಅಮಿತಾಭ್; ಬೆಲೆ ಎಷ್ಟು ಕೋಟಿ?
ಅಮಿತಾಭ್ ಬಚ್ಚನ್, ರಾಮ ಮಂದಿರ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 15, 2024 | 4:34 PM

Share

ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ಬೇರೆ ಬೇರೆ ಭಾಗಗಳಿಂದ ಜನರು ಬರುತ್ತಿದ್ದಾರೆ. ಹೀಗಿರುವಾಗಲೇ ಅಮಿತಾಭ್ ಬಚ್ಚನ್ (Amitabh Bachchan) ಅವರು ಅಯೋಧ್ಯೆಯಲ್ಲಿ ದೊಡ್ಡ ಭೂಮಿ ಖರೀದಿ ಮಾಡಿದ್ದಾರೆ. ಮುಂಬೈ ಮೂಲದ ಡೆವಲಪರ್​ನಿಂದ ಅವರು ಈ ಭೂಮಿ ಖರೀದಿ ಮಾಡಿದ್ದಾರೆ. 10 ಸಾವಿರ ಚದರ ಅಡಿ ಜಾಗವನ್ನು ಅಮಿತಾಭ್ ಖರೀದಿ ಮಾಡಿದ್ದಾರೆ. ಇದರ ಬೆಲೆ14.5 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಯಲ್ಲಿ (Ayodhya) ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಈ ವೇಳೆ ಭೂಮಿಗೆ ಬೆಲೆ ಹೆಚ್ಚಲಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅಮಿತಾಭ್ ಬಚ್ಚನ್ ಅವರು ಹೂಡಿಕೆ ಮಾಡಿದ್ದಾರೆ ಎಂದು ವರದಿ ಆಗಿದೆ.

ಜನವರಿ 22ರಂದು ಅದ್ದೂರಿಯಾಗಿ ರಾಮ ಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದರ ಉದ್ಘಾಟನೆ ಮಾಡಲಿದ್ದಾರೆ. ಅದಕ್ಕೂ ಮೊದಲು ಅಮಿತಾಭ್ ಬಚ್ಚನ್ ಇಲ್ಲಿ ಜಾಗ ಖರೀದಿ ಮಾಡಿದ್ದಾರೆ. ಅವರು ಇಲ್ಲಿ ಮನೆ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತಾಭ್ ಬಚ್ಚನ್ ಖರೀದಿ ಮಾಡಿರುವ ಜಾಗ ರಾಮ ಮಂದಿರದಿಂದ ಕೇವಲ 15 ನಿಮಿಷಗಳ ದಾರಿ. ಅಯೋಧ್ಯೆ ಇಂಟರ್​ ನ್ಯಾಷನಲ್ ಏರ್​ಪೋರ್ಟ್​ನಿಂದ 30 ನಿಮಿಷಕ್ಕೆ ಈ ಜಾಗ ತಲುಪಬಹುದು.

ರಾಮ ಮಂದಿರ ಉದ್ಘಾಟನೆಯಲ್ಲಿ ನರೇಂದ್ರ ಮೋದಿ, ಅಮಿತಾಭ್ ಬಚ್ಚನ್ ಸೇರಿ 3000 ವಿಐಪಿಗಳು ಭಾಗಿ ಆಗಲಿದ್ದಾರೆ. ಬಾಲಿವುಡ್​ನ ಅಕ್ಷಯ್ ಕುಮಾರ್, ಕಂಗನಾ ರಣಾವತ್, ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗ್ವತ್, ಉದ್ಯಮಿ ಮುಕೇಶ್ ಅಂಬಾನಿ, ರತನ್ ಟಾಟಾ, ಗೌತಮ್ ಅದಾನಿ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ಉಡುಪಿ ಬೀಚ್​ನ ಸೌಂದರ್ಯ ಹೊಗಳಿದ ಸೆಹ್ವಾಗ್​; ಅಮಿತಾಭ್​ ಬಚ್ಚನ್​ ಪ್ರತಿಕ್ರಿಯೆ ಏನು?

ಅಮಿತಾಭ್ ಬಚ್ಚನ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಮೇ 9ರಂದು ರಿಲೀಸ್ ಆಗಲಿರುವ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ‘ಬಟರ್​ಫ್ಲೈ’ ಮೊದಲಾದ ಸಿನಿಮಾಗಳಲ್ಲಿ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಇತ್ತೀಚೆಗೆ ಅಮಿತಾಭ್ ಬಚ್ಚನ್, ಸೂರ್ಯ, ಅಕ್ಷಯ್ ಕುಮಾರ್ ಒಟ್ಟಾಗಿ ಪೋಸ್ ನೀಡಿದ್ದಾರೆ. ‘ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್’ ಶೀಘ್ರವೇ ಆರಂಭ ಆಗಲಿದೆ. ಇದರಲ್ಲಿ ಆಡುವ ತಂಡಗಳ ಮಾಲಿಕತ್ವವನ್ನು ಸೆಲೆಬ್ರಿಟಿಗಳು ಖರೀದಿಸಿದ್ದಾರೆ. ಆ ಕಾರಣದಿಂದ ಅಕ್ಷಯ್ ಕುಮಾರ್, ಸೂರ್ಯ, ಅಮಿತಾಭ್ ಬಚ್ಚನ್ ಮುಂತಾದ ನಟರು ಈ ಜಾಹೀರಾತಿನಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?