AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್

ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲಾ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.  

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
TV9 Web
| Edited By: |

Updated on: Nov 20, 2021 | 10:14 PM

Share

ಅಮಿತಾಭ್​ ಬಚ್ಚನ್ ಅವರು ತಂಬಾಕು ಕಂಪನಿ ಕಮಲಾ ಪಸಂದ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋದ ವ್ಯಕ್ತವಾಗಿತ್ತು. ಜಾಹೀರಾತಿನಿಂದ ಹಿಂದೆ ಸರಿಯುವಂತೆ ಸಂಘಟನೆಯೊಂದು ವಿನಂತಿಸಿತ್ತು. ಈ ವಿನಂತಿಗೆ ಒಪ್ಪಿದ್ದ ಅಮಿತಾಭ್​ ಕಳೆದ ಅಕ್ಟೋಬರ್‌ನಲ್ಲಿ ಕಮಲಾ ಪಸಂದ್ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲ ಬ್ರ್ಯಾಂಡ್‌ಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.  

‘ಕಮಲಾ ಪಸಂದ್ ಅವರಿಗೆ ಅಮಿತಾಭ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಒಪ್ಪಂದ  ಮುಕ್ತಾಯಗೊಂಡಿದ್ದರೂ ಕಮಲಾ ಪಸಂದ್ ಅಮಿತಾಭ್​ ಇರುವ ಜಾಹೀರಾತನ್ನು ಪ್ರಸಾರ ಮಾಡಿದೆ’ ಎಂದು ಬಚ್ಚನ್​ ಕಾನೂನು ತಂಡದ ಮೂಲಗಳು ತಿಳಿಸಿವೆ.

‘ಪಾನ್ ಮಸಾಲಾ ಸೇವನೆಯು ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಭ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಬಚ್ಚನ್ ಅವರು ಜಾಹೀರಾತು ಪ್ರಚಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು