AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್

ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲಾ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.  

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
TV9 Web
| Edited By: |

Updated on: Nov 20, 2021 | 10:14 PM

Share

ಅಮಿತಾಭ್​ ಬಚ್ಚನ್ ಅವರು ತಂಬಾಕು ಕಂಪನಿ ಕಮಲಾ ಪಸಂದ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋದ ವ್ಯಕ್ತವಾಗಿತ್ತು. ಜಾಹೀರಾತಿನಿಂದ ಹಿಂದೆ ಸರಿಯುವಂತೆ ಸಂಘಟನೆಯೊಂದು ವಿನಂತಿಸಿತ್ತು. ಈ ವಿನಂತಿಗೆ ಒಪ್ಪಿದ್ದ ಅಮಿತಾಭ್​ ಕಳೆದ ಅಕ್ಟೋಬರ್‌ನಲ್ಲಿ ಕಮಲಾ ಪಸಂದ್ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲ ಬ್ರ್ಯಾಂಡ್‌ಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.  

‘ಕಮಲಾ ಪಸಂದ್ ಅವರಿಗೆ ಅಮಿತಾಭ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಒಪ್ಪಂದ  ಮುಕ್ತಾಯಗೊಂಡಿದ್ದರೂ ಕಮಲಾ ಪಸಂದ್ ಅಮಿತಾಭ್​ ಇರುವ ಜಾಹೀರಾತನ್ನು ಪ್ರಸಾರ ಮಾಡಿದೆ’ ಎಂದು ಬಚ್ಚನ್​ ಕಾನೂನು ತಂಡದ ಮೂಲಗಳು ತಿಳಿಸಿವೆ.

‘ಪಾನ್ ಮಸಾಲಾ ಸೇವನೆಯು ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಭ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಬಚ್ಚನ್ ಅವರು ಜಾಹೀರಾತು ಪ್ರಚಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ