Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್

ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲಾ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.  

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 20, 2021 | 10:14 PM

ಅಮಿತಾಭ್​ ಬಚ್ಚನ್ ಅವರು ತಂಬಾಕು ಕಂಪನಿ ಕಮಲಾ ಪಸಂದ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋದ ವ್ಯಕ್ತವಾಗಿತ್ತು. ಜಾಹೀರಾತಿನಿಂದ ಹಿಂದೆ ಸರಿಯುವಂತೆ ಸಂಘಟನೆಯೊಂದು ವಿನಂತಿಸಿತ್ತು. ಈ ವಿನಂತಿಗೆ ಒಪ್ಪಿದ್ದ ಅಮಿತಾಭ್​ ಕಳೆದ ಅಕ್ಟೋಬರ್‌ನಲ್ಲಿ ಕಮಲಾ ಪಸಂದ್ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲ ಬ್ರ್ಯಾಂಡ್‌ಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.  

‘ಕಮಲಾ ಪಸಂದ್ ಅವರಿಗೆ ಅಮಿತಾಭ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಒಪ್ಪಂದ  ಮುಕ್ತಾಯಗೊಂಡಿದ್ದರೂ ಕಮಲಾ ಪಸಂದ್ ಅಮಿತಾಭ್​ ಇರುವ ಜಾಹೀರಾತನ್ನು ಪ್ರಸಾರ ಮಾಡಿದೆ’ ಎಂದು ಬಚ್ಚನ್​ ಕಾನೂನು ತಂಡದ ಮೂಲಗಳು ತಿಳಿಸಿವೆ.

‘ಪಾನ್ ಮಸಾಲಾ ಸೇವನೆಯು ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಭ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಬಚ್ಚನ್ ಅವರು ಜಾಹೀರಾತು ಪ್ರಚಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್