AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್

ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲಾ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.  

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 20, 2021 | 10:14 PM

Share

ಅಮಿತಾಭ್​ ಬಚ್ಚನ್ ಅವರು ತಂಬಾಕು ಕಂಪನಿ ಕಮಲಾ ಪಸಂದ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋದ ವ್ಯಕ್ತವಾಗಿತ್ತು. ಜಾಹೀರಾತಿನಿಂದ ಹಿಂದೆ ಸರಿಯುವಂತೆ ಸಂಘಟನೆಯೊಂದು ವಿನಂತಿಸಿತ್ತು. ಈ ವಿನಂತಿಗೆ ಒಪ್ಪಿದ್ದ ಅಮಿತಾಭ್​ ಕಳೆದ ಅಕ್ಟೋಬರ್‌ನಲ್ಲಿ ಕಮಲಾ ಪಸಂದ್ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲ ಬ್ರ್ಯಾಂಡ್‌ಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.  

‘ಕಮಲಾ ಪಸಂದ್ ಅವರಿಗೆ ಅಮಿತಾಭ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಒಪ್ಪಂದ  ಮುಕ್ತಾಯಗೊಂಡಿದ್ದರೂ ಕಮಲಾ ಪಸಂದ್ ಅಮಿತಾಭ್​ ಇರುವ ಜಾಹೀರಾತನ್ನು ಪ್ರಸಾರ ಮಾಡಿದೆ’ ಎಂದು ಬಚ್ಚನ್​ ಕಾನೂನು ತಂಡದ ಮೂಲಗಳು ತಿಳಿಸಿವೆ.

‘ಪಾನ್ ಮಸಾಲಾ ಸೇವನೆಯು ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಭ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಬಚ್ಚನ್ ಅವರು ಜಾಹೀರಾತು ಪ್ರಚಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ