ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್​ ಬಚ್ಚನ್​ ಮೇಲೆ ರಜನಿಕಾಂತ್​ ಅವರಿಗೆ ಅಪಾರ ಗೌರವ ಇದೆ. ಅನಂತ್​ ಅಂಬಾನಿಯ ಮದುವೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ರಜನಿಕಾಂತ್​ ಅವರ ಸರಳತೆ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ವಿದೇಶದಿಂದಲೂ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?
ಅಮಿತಾಭ್​ ಬಚ್ಚನ್​, ರಜನಿಕಾಂತ್​
Follow us
|

Updated on: Jul 14, 2024 | 3:02 PM

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್​ ಲೈಫ್​ನಲ್ಲಿ ತುಂಬ ಸಿಂಪಲ್​. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್​ ಬಚ್ಚನ್​ ಅವರನ್ನು ನೋಡಿದ ಕೂಡಲೇ ರಜನಿಕಾಂತ್​ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್​ ಬಚ್ಚನ್​ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.

ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಶೇರ್ವಾನಿ ಹಾಗೂ ಶಾಲ್​ ಧರಿಸಿ ಮಿಂಚಿದ್ದಾರೆ. ರಜನಿಕಾಂತ್​ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್​ ಹೊಂದಿದ್ದಾರೆ.

ಇದನ್ನೂ ಓದಿ: ಅನಂತ್​ ಅಂಬಾನಿ ವಿವಾಹದಲ್ಲಿ ರಜನಿಕಾಂತ್​ ಮಸ್ತ್​ ಡ್ಯಾನ್ಸ್​; ಯುವಕರೂ ನಾಚಬೇಕು

ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್​ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್​ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಜಾನ್ವಿ ಕಪೂರ್​, ಮಹೇಶ್​ ಬಾಬು, ರಿತೇಶ್ ದೇಶಮುಖ್​, ಜೆನಿಲಿಯಾ ದೇಶಮುಖ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?