AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್​ ಬಚ್ಚನ್​ ಮೇಲೆ ರಜನಿಕಾಂತ್​ ಅವರಿಗೆ ಅಪಾರ ಗೌರವ ಇದೆ. ಅನಂತ್​ ಅಂಬಾನಿಯ ಮದುವೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ರಜನಿಕಾಂತ್​ ಅವರ ಸರಳತೆ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ವಿದೇಶದಿಂದಲೂ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?
ಅಮಿತಾಭ್​ ಬಚ್ಚನ್​, ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2024 | 3:02 PM

Share

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್​ ಲೈಫ್​ನಲ್ಲಿ ತುಂಬ ಸಿಂಪಲ್​. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್​ ಬಚ್ಚನ್​ ಅವರನ್ನು ನೋಡಿದ ಕೂಡಲೇ ರಜನಿಕಾಂತ್​ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್​ ಬಚ್ಚನ್​ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.

ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಶೇರ್ವಾನಿ ಹಾಗೂ ಶಾಲ್​ ಧರಿಸಿ ಮಿಂಚಿದ್ದಾರೆ. ರಜನಿಕಾಂತ್​ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್​ ಹೊಂದಿದ್ದಾರೆ.

ಇದನ್ನೂ ಓದಿ: ಅನಂತ್​ ಅಂಬಾನಿ ವಿವಾಹದಲ್ಲಿ ರಜನಿಕಾಂತ್​ ಮಸ್ತ್​ ಡ್ಯಾನ್ಸ್​; ಯುವಕರೂ ನಾಚಬೇಕು

ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್​ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್​ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಜಾನ್ವಿ ಕಪೂರ್​, ಮಹೇಶ್​ ಬಾಬು, ರಿತೇಶ್ ದೇಶಮುಖ್​, ಜೆನಿಲಿಯಾ ದೇಶಮುಖ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್