AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್​ ಬಚ್ಚನ್​ ಮೇಲೆ ರಜನಿಕಾಂತ್​ ಅವರಿಗೆ ಅಪಾರ ಗೌರವ ಇದೆ. ಅನಂತ್​ ಅಂಬಾನಿಯ ಮದುವೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ರಜನಿಕಾಂತ್​ ಅವರ ಸರಳತೆ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ವಿದೇಶದಿಂದಲೂ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?
ಅಮಿತಾಭ್​ ಬಚ್ಚನ್​, ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2024 | 3:02 PM

Share

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್​ ಲೈಫ್​ನಲ್ಲಿ ತುಂಬ ಸಿಂಪಲ್​. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್​ ಬಚ್ಚನ್​ ಅವರನ್ನು ನೋಡಿದ ಕೂಡಲೇ ರಜನಿಕಾಂತ್​ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್​ ಬಚ್ಚನ್​ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.

ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಶೇರ್ವಾನಿ ಹಾಗೂ ಶಾಲ್​ ಧರಿಸಿ ಮಿಂಚಿದ್ದಾರೆ. ರಜನಿಕಾಂತ್​ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್​ ಹೊಂದಿದ್ದಾರೆ.

ಇದನ್ನೂ ಓದಿ: ಅನಂತ್​ ಅಂಬಾನಿ ವಿವಾಹದಲ್ಲಿ ರಜನಿಕಾಂತ್​ ಮಸ್ತ್​ ಡ್ಯಾನ್ಸ್​; ಯುವಕರೂ ನಾಚಬೇಕು

ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್​ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್​ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಜಾನ್ವಿ ಕಪೂರ್​, ಮಹೇಶ್​ ಬಾಬು, ರಿತೇಶ್ ದೇಶಮುಖ್​, ಜೆನಿಲಿಯಾ ದೇಶಮುಖ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ