AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್​ ಬಚ್ಚನ್​ ಮೇಲೆ ರಜನಿಕಾಂತ್​ ಅವರಿಗೆ ಅಪಾರ ಗೌರವ ಇದೆ. ಅನಂತ್​ ಅಂಬಾನಿಯ ಮದುವೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ರಜನಿಕಾಂತ್​ ಅವರ ಸರಳತೆ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ವಿದೇಶದಿಂದಲೂ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?
ಅಮಿತಾಭ್​ ಬಚ್ಚನ್​, ರಜನಿಕಾಂತ್​
ಮದನ್​ ಕುಮಾರ್​
|

Updated on: Jul 14, 2024 | 3:02 PM

Share

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್​ ಲೈಫ್​ನಲ್ಲಿ ತುಂಬ ಸಿಂಪಲ್​. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್​ ಬಚ್ಚನ್​ ಅವರನ್ನು ನೋಡಿದ ಕೂಡಲೇ ರಜನಿಕಾಂತ್​ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್​ ಬಚ್ಚನ್​ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.

ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಶೇರ್ವಾನಿ ಹಾಗೂ ಶಾಲ್​ ಧರಿಸಿ ಮಿಂಚಿದ್ದಾರೆ. ರಜನಿಕಾಂತ್​ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್​ ಹೊಂದಿದ್ದಾರೆ.

ಇದನ್ನೂ ಓದಿ: ಅನಂತ್​ ಅಂಬಾನಿ ವಿವಾಹದಲ್ಲಿ ರಜನಿಕಾಂತ್​ ಮಸ್ತ್​ ಡ್ಯಾನ್ಸ್​; ಯುವಕರೂ ನಾಚಬೇಕು

ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್​ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್​ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಜಾನ್ವಿ ಕಪೂರ್​, ಮಹೇಶ್​ ಬಾಬು, ರಿತೇಶ್ ದೇಶಮುಖ್​, ಜೆನಿಲಿಯಾ ದೇಶಮುಖ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ