AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐಶ್ವರ್ಯಾನ ಅಮಿತಾಭ್ ಸೊಸೆಯಂತೆ ಎಂದೂ ನೋಡಿಲ್ಲ’; ಜಯಾ ಬಚ್ಚನ್

ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಬೇರೆ ಆಗಿದ್ದಾರೆ ಎಂದು ವರದಿ ಆಗಿದೆ. ಇವರು ಶೀಘ್ರವೇ ಡಿವೋರ್ಸ್ ಘೋಷಿಸೋ ಸಾಧ್ಯತೆ ಇದೆ. ಅಮಿತಾಭ್ ಅವರೇ ಇದಕ್ಕೆಲ್ಲ ಕಾರಣ ಎನ್ನಲಾಗಿತ್ತು. ಹೀಗಿರುವಾಗಲೇ ಈ ಮೊದಲು ಜಯಾ ಅವರು ಅಮಿತಾಭ್ ಬಚ್ಚನ್ ಬಗ್ಗೆ ನೀಡಿದ ಹೇಳಿಕೆ ಒಂದು ಈಗ ವೈರಲ್ ಆಗುತ್ತಿದೆ.

‘ಐಶ್ವರ್ಯಾನ ಅಮಿತಾಭ್ ಸೊಸೆಯಂತೆ ಎಂದೂ ನೋಡಿಲ್ಲ’; ಜಯಾ ಬಚ್ಚನ್
‘ಐಶ್ವರ್ಯಾ ಹಾಗೂ ಅಮಿತಾಭ್ ಬಚ್ಚನ್ ಸಂಬಂಧ ಎಂಥದ್ದು? ವಿವರಿಸಿದ ಜಯಾ ಬಚ್ಚನ್
Follow us
ರಾಜೇಶ್ ದುಗ್ಗುಮನೆ
|

Updated on: Aug 05, 2024 | 7:03 AM

ಅಮಿತಾಭ್ ಬಚ್ಚನ್ ಕುಟುಂಬ ಐಶ್ವರ್ಯಾ ರೈ ಅವರನ್ನು ಬಿಟ್ಟು ತಾವಷ್ಟೇ ಅನಂತ್ ಅಂಬಾನಿ ಮದುವೆಗೆ ಬಂದಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಬಚ್ಚನ್ ಕುಟುಂಬದ ಜೊತೆ ಐಶ್ವರ್ಯಾ ಅವರ ಸಂಬಂಧ ಸರಿ ಇಲ್ಲ ಎನ್ನುವ ಮಾತು ಕೇಳಿಬಂತು. ಈಗ ಐಶ್ವರ್ಯಾ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯುತ್ತಾರೆ ಎನ್ನುವ ಮಾತು ಜೋರಾಗಿದೆ. ಹೀಗಿರುವಾಗಲೇ ಐಶ್ವರ್ಯಾ ಹಾಗೂ ಅಮಿತಾಭ್ ಸಂಬಂಧ ಎಂಥದ್ದು ಎಂಬುದನ್ನು ಜಯಾ ಈ ಮೊದಲು ವಿವರಿಸಿದ್ದರು. ಇಬ್ಬರೂ ತಂದೆ-ಮಗಳಂತೆ ಇದ್ದಾರೆ ಎಂದು ಜಯಾ ಹೇಳಿದ್ದರು.

ಕಾಫಿ ವಿತ್ ಕರಣ್ ಶೋಗೆ ಜಯಾ ಬಚ್ಚನ್ ಈ ಮೊದಲು ಬಂದಿದ್ದರು. ಈ ವೇಳೆ ಅವರು ಅಮಿತಾಭ್ ಅವರನ್ನು ಹೊಗಳಿದ್ದರು. ‘ಯಾವಾಗೆಲ್ಲ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ನೋಡುತ್ತಾರೋ ಆಗ ಖುಷಿ ಆಗುತ್ತಾರೆ. ಅವರು ಐಶ್ವರ್ಯಾ ಅವರನ್ನು ಸೊಸೆಯಂತೆ ಯಾವಾಗಲೂ ಕಾಣಲಿಲ್ಲ, ಅವರನ್ನು ಮಗಳಂತೆ ನೋಡಿಕೊಂಡರು. ಐಶ್ವರ್ಯಾ ಬರುತ್ತಿದ್ದರೆ, ಶ್ವೇತಾನೇ (ಮಗಳು) ಬರುತ್ತಿದ್ದಾರೆ ಎಂಬ ರೀತಿಯಲ್ಲಿ ನೋಡುತ್ತಾರೆ. ಶ್ವೇತಾ ಮದುವೆ ಆಗಿ ಹೋದ ಬಳಿಕ ಆ ಜಾಗವನ್ನು ಐಶ್ವರ್ಯಾ ತುಂಬಿದರು’ ಎಂದಿದ್ದರು ಜಯಾ.

ಐಶ್ವರ್ಯಾ ರೈ ಹಾಗೂ ಅವರ ಮಾವ ಅಮಿತಾಭ್ ಬಚ್ಚನ್ ಮಧ್ಯೆ ಕಲಹ ಬಂದಿದೆ ಎಂದು ವರದಿ ಆಗಿತ್ತು. ಈ ಕಾರಣಕ್ಕೆ ಐಶ್ವರ್ಯಾ ಅವರು ಪತಿ ಅಭಿಷೇಕ್ ಜೊತೆ ಜಗಳ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಚಾರವನ್ನು ಇವರು ಒಪ್ಪಿಕೊಂಡಿಲ್ಲ. ಹಾಗಂತ ಈ ವಿಚಾರವನ್ನು ತಳ್ಳಿ ಹಾಕುತ್ತಲೂ ಇಲ್ಲ. ಇವರ ನಡೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ಮೊದಲು ಅನಂತ್ ಅಂಬಾನಿ ಮದುವೆಗೆ ಐಶ್ವರ್ಯಾ ಹಾಗೂ ಮಗಳು ಆರಾಧ್ಯಾ ಪ್ರತ್ಯೇಕವಾಗಿ ಆಗಮಿಸಿದ್ದರು.

ಇದನ್ನೂ ಓದಿ: ನಿಜಕ್ಕೂ ಐಶ್ವರ್ಯಾ ರೈ ವಿರುದ್ಧ ದ್ವೇಷ ಸಾಧಿಸಿದ್ದರಾ ಸಲ್ಲು? ತಮ್ಮ ಕೊಟ್ಟಿದ್ದ ಸ್ಪಷ್ಟನೆಯಲ್ಲಿ ಏನಿತ್ತು?

ಮದುವೆ ಮುಗಿದ ಬಳಿಕ ಮಗಳ ಜೊತೆ ಐಶ್ವರ್ಯಾ ರೈ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಭಿಷೇಕ್ ಇರಲಿಲ್ಲ. ಇದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಈ ಮಧ್ಯೆ ಅಭಿಷೇಕ್ ಬಚ್ಚನ್ ಅವರು ಡಿವೋರ್ಸ್ ಬಗ್ಗೆ ಮಾಡಿದ ಪೋಸ್ಟ್​ನ ಲೈಕ್ ಮಾಡಿ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?