AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ನಮಸ್ಕರಿಸಿದ ಅಮಿತಾಭ್​ ಬಚ್ಚನ್​; ಇಂಥ ಗೌರವ ಪಡೆದ ಈ ವ್ಯಕ್ತಿ ಯಾರು ಗೊತ್ತಾ?

ಚಿತ್ರರಂಗದಲ್ಲಿ ಅಮಿತಾಭ್​ ಬಚ್ಚನ್​ ಹಿರಿಯ ವ್ಯಕ್ತಿ. ಸಾಮಾನ್ಯವಾಗಿ ಎಲ್ಲರೂ ಅವರ ಕಾಲು ಮುಟ್ಟಿ ನಮಸ್ಕರಿಸುತ್ತಾರೆ. ಆದರೆ ‘ಕಲ್ಕಿ 2898 ಎಡಿ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮದ ವೇದಿಕೆಯಲ್ಲಿ ಅಮಿತಾಭ್​ ಬಚ್ಚನ್​ ಅವರೇ ಈ ವ್ಯಕ್ತಿಯ ಕಾಲಿಗೆ ನಮಸ್ಕರಿಸಿದ್ದಾರೆ. ಇದನ್ನು ನೋಡಿ ಎಲ್ಲರಿಗೂ ಅಚ್ಚರಿಯಾಯಿತು. ಆ ಕ್ಷಣದ ಫೊಟೋ ಹಾಗೂ ವಿಡಿಯೋ ವೈರಲ್​ ಆಗಿದೆ. ಅಷ್ಟಕ್ಕೂ ಅಮಿತಾಭ್​ ಬಚ್ಚನ್​ ನಮಸ್ಕರಿಸಿದ್ದು ಯಾರಿಗೆ? ಇಲ್ಲಿದೆ ಮಾಹಿತಿ..

ಕಾಲಿಗೆ ನಮಸ್ಕರಿಸಿದ ಅಮಿತಾಭ್​ ಬಚ್ಚನ್​; ಇಂಥ ಗೌರವ ಪಡೆದ ಈ ವ್ಯಕ್ತಿ ಯಾರು ಗೊತ್ತಾ?
ಅಶ್ವಿನಿ ದತ್​, ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on: Jun 20, 2024 | 4:22 PM

Share

ನಟ ಅಮಿತಾಭ್​ ಬಚ್ಚನ್ (Amitabh Bachchan) ಅವರು 81ನೇ ವಯಸ್ಸಿನಲ್ಲೂ ತುಂಬ ಆ್ಯಕ್ಟೀವ್​ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್​ ನಟಿಸಿರುವ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್​ 27ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಮುಂಬೈನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು. ಇದರಲ್ಲಿ ಪ್ರಭಾಸ್​, ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ರಾಣಾ ದಗ್ಗುಬಾಟಿ, ಕಮಲ್​ ಹಾಸನ್​ ಮುಂತಾದವರು ಭಾಗಿ ಆಗಿದ್ದರು. ಈ ವೇಳೆ ಅಶ್ವಿನಿ ದತ್​ (Ashwini Dutt) ಅವರ ಕಾಲಿಗೆ ಅಮಿತಾಭ್​ ಬಚ್ಚನ್​ ನಮಸ್ಕರಿಸಿದ್ದಾರೆ.

ಎಲ್ಲರೂ ಅಮಿತಾಭ್​ ಬಚ್ಚನ್​ ಅವರ ಕಾಲನ್ನು ಮುಟ್ಟಿ ನಮಸ್ಕಾರ ಮಾಡುವುದು ಸಹಜ. ಆದರೆ ‘ಕಲ್ಕಿ 2898 ಎಡಿ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ವೇದಿಕೆಯಲ್ಲಿ ಅಮಿತಾಭ್​ ಬಚ್ಚನ್​ ಅವರೇ ಅಶ್ವಿನಿ ದತ್​ ಅವರ ಕಾಲಿಗೆ ನಮಸ್ಕರಿಸಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ಆ ಸಂದರ್ಭದ ಫೊಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಅಷ್ಟಕ್ಕೂ ಯಾರು ಈ ಅಶ್ವಿನಿ ದತ್​? ಇವರ ಬಗ್ಗೆ ತಿಳಿದುಕೊಳ್ಳಲು ಗೂಗಲ್​ನಲ್ಲಿ ನೆಟ್ಟಿಗರು ಸರ್ಚ್​ ಮಾಡುತ್ತಿದ್ದಾರೆ.

ಅಶ್ವಿನಿ ದತ್​ ಯಾರು?

‘ವೈಜಯಂತಿ ಮೂವೀಸ್​’ ಬ್ಯಾನರ್ ಮೂಲಕ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ಮಾಣವಾಗಿದೆ. ಟಾಲಿವುಡ್​ನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಇದು ಕೂಡ ಒಂದು. ಈ ಸಂಸ್ಥೆಯ ಮಾಲಿಕರೇ ಅಶ್ವಿನಿ ದತ್​. 1974ರಲ್ಲಿ ‘ವೈಜಯಂತಿ ಮೂವೀಸ್​’ ಆರಂಭವಾಯಿತು. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಈ ಸಂಸ್ಥೆ ಬಂಡವಾಳ ಹೂಡಿದೆ. ಎನ್​ಟಿಆರ್​, ಎಎನ್​ಆರ್​, ಕೃಷ್ಣ, ಚಿರಂಜೀವಿ, ವೆಂಕಟೇಶ್​, ನಾಗಾರ್ಜುನ, ಮಹೇಶ್​ ಬಾಬು ಮುಂತಾದ ಸ್ಟಾರ್​ ನಟರ ಸಿನಿಮಾಗಳಿಗೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ. ಅವರ ಬಗ್ಗೆ ಅಮಿತಾಭ್​ ಬಚ್ಚನ್​ ಮಾತನಾಡಿದ್ದಾರೆ.

ಇದನ್ನೂ ಓದಿ: ಕಲ್ಕಿ 2898 ಎಡಿ ಇವೆಂಟ್​ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು

‘ಇವರು ವೈಜಯಂತಿ ಮೂವೀಸ್​ನ ಮಾಲಿಕರು. ಇವರ ಇಬ್ಬರ ಮಕ್ಕಳು ಸ್ವಪ್ನ ಮತ್ತು ಪ್ರಿಯಾಂಕಾ ಕೂಡ ನಿರ್ಮಾಪಕರು. ಅಶ್ವಿನಿ ಅವರಿಗಿಂತ ಸರಳ ಮತ್ತು ವಿನಮ್ರ ವ್ಯಕ್ತಿಯನ್ನು ನಾನು ನೋಡಿಲ್ಲ. ಪ್ರತಿ ಬಾರಿಯೂ ಶೂಟಿಂಗ್​ ಸೆಟ್​ಗೆ ಅವರೇ ಮೊದಲು ಬರುತ್ತಾರೆ. ವಿಮಾನ ನಿಲ್ದಾಣಕ್ಕೆ ಬಂದು ನಿಮ್ಮನ್ನು ಸ್ವಾಗತಿಸುತ್ತಾರೆ. ನಿಮ್ಮ ಸುರಕ್ಷತೆಯನ್ನು ನೋಡಿಕೊಳ್ಳುತ್ತಾರೆ. ಯಾರೂ ಕೂಡ ಅವರ ರೀತಿ ಆಲೋಚನೆ ಮಾಡುವುದಿಲ್ಲ’ ಎಂದು ಹೇಳಿದ ಬಳಿಕ ಅಮಿತಾಭ್​ ಬಚ್ಚನ್​ ಅವರು ಅಶ್ವಿನಿ ದತ್​ ಕಾಲಿಗೆ ನಮಸ್ಕರಿಸಿದರು.

ಅಮಿತಾಭ್​ ಬಚ್ಚನ್​ ತೋರಿಸಿದ ಈ ಗೌರವದ ಬಗ್ಗೆ ನಿರ್ದೇಶಕ, ನಿರ್ಮಾಪಕ ರಾಮ್​ ಗೋಪಾಲ್​ ವರ್ಮಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಅಮಿತಾಭ್​ ಬಚ್ಚನ್​ ಅವರಿಂದ ಈ ಗೌರವ ಪಡೆದಿದ್ದು ಅಶ್ವಿನಿ ದತ್​ ಅವರ ಸಾಧನೆ. ಎನ್​ಟಿಆರ್​ ಅವರಿಂದ ಆರಂಭಗೊಂಡು, ಇಂದಿನ ಯುವ ಹೀರೋಗಳ ತನಕ ಯಾರೂ ಕೂಡ ಈ ರೀತಿ ಮಾಡಿಲ್ಲ ಎನಿಸುತ್ತದೆ. ಬಿಗ್​ ಬಿ ಕೂಡ ತಮ್ಮ ವೃತ್ತಿಜೀವನದಲ್ಲಿ ಬೇರೆ ನಿರ್ಮಾಪಕರ ಕಾಲಿಗೆ ನಮಸ್ಕರಿಸಿದ್ದನ್ನು ನಾನು ನೋಡಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್