‘ಕಲ್ಕಿ 2898 ಎಡಿ’ ಚಿತ್ರದಿಂದ ಅಮಿತಾಭ್ ಬಚ್ಚನ್ ವೃತ್ತಿ ಜೀವನಕ್ಕೆ ಸಿಗಲಿದೆ ಮೈಲೇಜ್?

ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಕುರುಕ್ಷೇತ್ರದ ಯುದ್ಧದ ಬಳಿಕ ‘ಕಲ್ಕಿ 2898 ಎಡಿ’ ಸಿನಿಮಾದ ಕಥೆ ಆರಂಭ ಆಗುತ್ತದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿರುವುದರಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎನ್ನಲಾಗಿದೆ.

‘ಕಲ್ಕಿ 2898 ಎಡಿ’ ಚಿತ್ರದಿಂದ ಅಮಿತಾಭ್ ಬಚ್ಚನ್ ವೃತ್ತಿ ಜೀವನಕ್ಕೆ ಸಿಗಲಿದೆ ಮೈಲೇಜ್?
ಅಮಿತಾಭ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 27, 2024 | 12:18 PM

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ತಯಾರಾದ ಅತ್ಯಂತ ದುಬಾರಿ ಚಿತ್ರ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಪೌರಾಣಿಕ ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರದಲ್ಲಿ ಅಮಿತಾಭ್​ ಬಚ್ಚನ್ ನಟಿಸಿದ್ದಾರೆ. ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್, ನಟಿ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಬಹುದಿನಗಳ ನಿರೀಕ್ಷೆಯ ನಂತರ ಚಿತ್ರ ಇಂದು (ಜೂನ್ 27) ಬಿಡುಗಡೆಯಾಗಿದೆ. ಈ ಚಿತ್ರದಿಂದ ಅಮಿತಾಭ್​ಗೆ ದೊಡ್ಡ ಗೆಲುವಿನ ಅಗತ್ಯವಿದೆ.

‘ಕಲ್ಕಿ 2898 ಎಡಿ’ ನಿರ್ಮಾಪಕರು ಸಿನಿಮಾಗೆ 600 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಈ ಚಿತ್ರದ ನಿರ್ದೇಶಕರಿಗೆ ಅಮಿತಾಭ್​ ಬಚ್ಚನ್‌ಗೆ ಹಿಟ್ ನೀಡುವ ದೊಡ್ಡ ಜವಾಬ್ದಾರಿಯೂ ಇದೆ. ಅಮಿತಾಭ್​ ಬಚ್ಚನ್ ಕೂಡ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅಮಿತಾಭ್ ಬಚ್ಚನ್‌ಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಯಾವುದೇ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಗೆಲುವು ಕಾಣಲಿಲ್ಲ.

2019ರಲ್ಲಿ ಅಮಿತಾಭ್​ ಬಚ್ಚನ್ ‘ಬದ್ಲಾ’ ಚಿತ್ರದಲ್ಲಿ ಕಾಣಿಸಿಕೊಂಡರು. ಚಿತ್ರದಲ್ಲಿ ತಾಪ್ಸಿ ಪನ್ನು ಕೂಡ ಇದ್ದರು. ಸುಜೋಯ್ ಘೋಷ್ ಅವರ ನಿರ್ದೇಶನದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಯಿತು. ಅವರು ಮತ್ತೊಂದು ದೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. 2022ರಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಗೆಲುವಿನಲ್ಲಿ ರಣಬೀರ್ ಹಾಗೂ ಆಲಿಯಾ ಪಾತ್ರ ಹಿರಿಯದಿದೆ.

ಬಿಗ್ ಬಿ ಅವರ ಕೊನೆಯ ಏಳು ಚಿತ್ರಗಳ ಸ್ಥಿತಿ

ಸೈರಾ ನರಸಿಂಹ ರೆಡ್ಡಿ  (2019)

ಗುಲಾಬೋ ಸಿತಾಬೋ (2020)

ಚೆಹ್ರೆ (2021)

ಝುಂಡ್ (2022)

ರನ್​ವೇ 34 (2022)

ಬ್ರಹ್ಮಾಸ್ತ್ರ (2022)

ಗುಡ್​ಬೈ (2022)

ಊಂಚಾಯಿ (2022)

ಗಣಪತ್ (2023)

ಅಮಿತಾಭ್ ಬಚ್ಚನ್ ಅವರ ‘ಝುಂಡ್’ ಸೇರಿ ಇನ್ನೂ ಕೆಲವು ಚಿತ್ರಗಳು ವಿಮರ್ಶಕರಿಂದ ಪ್ರಶಂಸಿಸಲ್ಪಟ್ಟವು. ಆದರೆ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಹಣ ಗಳಿಸಲು ಸಾಧ್ಯವಾಗಲಿಲ್ಲ. ಈಗ ಎಲ್ಲರ ಕಣ್ಣು ‘ಕಲ್ಕಿ 2898 ಎಡಿ’ ಚಿತ್ರದ ಮೇಲಿದೆ. ಚಿತ್ರದ ಬಗ್ಗೆ ಗುಸುಗುಸು ಕೂಡ ಜೋರಾಗಿದೆ. ಮೊದಲ ದಿನದ ಮುಂಗಡ ಬುಕ್ಕಿಂಗ್ ಕೂಡ ಜೋರಾಗಿದೆ. ದೇಶದಲ್ಲಷ್ಟೇ ಅಲ್ಲ ವಿದೇಶಗಳಲ್ಲೂ ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಸಖತ್ ಆಗಿರುವುದು ಚಿತ್ರ ಹಲವು ದಾಖಲೆಗಳನ್ನು ಮುರಿಯಲಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ:  ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದ ಗಳಿಕೆ ಎಷ್ಟು? ಸೃಷ್ಟಿ ಆಗಲಿದೆ ದಾಖಲೆ?

‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಬಹಳ ದಿನಗಳಿಂದ ಯಾವುದೇ ದೊಡ್ಡ ಚಿತ್ರಗಳು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿಲ್ಲ. ಆದ್ದರಿಂದ ಹಿರಿಯ ತಾರೆಯರು ನಟಿಸಿದ ಕಲ್ಕಿ ಚಿತ್ರವನ್ನು ಪ್ರೇಕ್ಷಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಈ ಸಿನಿಮಾ ಮೊದಲ ದಿನ 200 ಕೋಟಿ ರೂಪಾಯಿ ಬಾಚಿಕೊಳ್ಳಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ