AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್ ಖರೀದಿಸಿದ ಈ ಮನೆಯಲ್ಲಿ ಈಗ ಯಾರೂ ಇಲ್ಲ; ಎಲ್ಲರೂ ಇಲ್ಲಿಂದ ದೂರ ಹೋಗಿದ್ದೇಕೆ?

ಅಮಿತಾಭ್ ಬಚ್ಚನ್ ಅವರ ಪ್ರತೀಕ್ಷಾ ಬಂಗಲೆಯು ಬಾಲಿವುಡ್ ಸೂಪರ್‌ಸ್ಟಾರ್‌ನ ಅನೇಕ ನೆನಪುಗಳನ್ನು ಹೊಂದಿದೆ. ಹರಿವಂಶರಾಯ್ ಬಚ್ಚನ್ ಅವರು ನಾಮಕರಣ ಮಾಡಿದ ಈ ಬಂಗಲೆಯಲ್ಲಿ ಅಮಿತಾಭ್ ಅವರ ಮಕ್ಕಳು ಜನಿಸಿದರು ಮತ್ತು ಬೆಳೆದರು. 'ಶೋಲೆ' ಚಿತ್ರದ ಯಶಸ್ಸಿನ ನಂತರ ಖರೀದಿಸಲ್ಪಟ್ಟ ಈ ಮನೆ, ಅವರ ಹೆತ್ತವರ ಮರಣದ ನಂತರ ಮುಚ್ಚಲ್ಪಟ್ಟಿದೆ.

ಅಮಿತಾಭ್ ಖರೀದಿಸಿದ ಈ ಮನೆಯಲ್ಲಿ ಈಗ ಯಾರೂ ಇಲ್ಲ; ಎಲ್ಲರೂ ಇಲ್ಲಿಂದ ದೂರ ಹೋಗಿದ್ದೇಕೆ?
ಅಮಿತಾಭ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 21, 2025 | 10:08 AM

Share

ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachan) ಅನೇಕ ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಬಾಲಿವುಡ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರಿಸುವಾಗ ಅಮಿತಾಭ್ ಬಚ್ಚನ್ ಅವರ ಜೀವನದಲ್ಲಿ ಅನೇಕ ಒಳ್ಳೆಯ ಮತ್ತು ಕೆಟ್ಟ ಘಟನೆಗಳು ಸಂಭವಿಸಿದವು. ಅದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಬಚ್ಚನ್ ಕುಟುಂಬವು ಮುಂಬೈನಲ್ಲಿ ಸಾಕಷ್ಟು ಆಸ್ತಿಯನ್ನು ಹೊಂದಿದೆ. ಅವುಗಳಲ್ಲಿ ಒಂದು ಜುಹುವಿನಲ್ಲಿರುವ ಬಿಗ್ ಬಿ ಅವರ ಬಂಗಲೆ. ಈ ಬಂಗಲೆಯ ಹೆಸರು ಪ್ರತೀಕ್ಷಾ. ಈ ಬಂಗಲೆ ಬಿಗ್ ಬಿ ಅವರ ಲೆಕ್ಕವಿಲ್ಲದಷ್ಟು ನೆನಪುಗಳನ್ನು ಹೊಂದಿದೆ. ಆದರೆ, ಈಗ ಇಲ್ಲಿ ಯಾರೂ ಇಲ್ಲ.

ಅಮಿತಾಭ್ ಬಚ್ಚನ್ ಅವರ ತಂದೆ ಹರಿವಂಶ ರಾಯ್ ಬಚ್ಚನ್ ಈ ಬಂಗಲೆಗೆ ಪ್ರತೀಕ್ಷಾ ಎಂದು ಹೆಸರಿಟ್ಟಿದ್ದರು. ಇದೇ ಮನೆಯಲ್ಲಿ ಅಮಿತಾಭ್ ಮತ್ತು ಜಯಾ ಬಚ್ಚನ್ ಮಗಳು ಶ್ವೇತಾ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರನ್ನು ಸ್ವಾಗತಿಸಿದರು. ಐಶ್ವರ್ಯಾ ಮತ್ತು ಅಭಿಷೇಕ್ ಅವರ ವಿವಾಹದ ಬಳಿಕ ಪ್ರತೀಕ್ಷಾ ಬಂಗಲೆಯಲ್ಲಿ ಸಂಸಾರ ಸಾಗಿತು. ಈ ಬಂಗಲೆಯ ಇತಿಹಾಸವೂ ತುಂಬಾ ಹಳೆಯದು.

1976 ರಲ್ಲಿ ಬಿಡುಗಡೆಯಾದ ‘ಶೋಲೆ’ ಚಿತ್ರದ ಯಶಸ್ಸಿನ ನಂತರ ಅಮಿತಾಭ್​ ಬಚ್ಚನ್ ಮತ್ತು ಜಯಾ ಬಚ್ಚನ್ ಒಂದು ಬಂಗಲೆ ಖರೀದಿಸಿದರು. ಆ ಸಮಯದಲ್ಲಿ, ಇಬ್ಬರೂ ಮದುವೆಯಾಗಿ ಮೂರು ವರ್ಷಗಳಾಗಿತ್ತು. ‘ಹೂ ವಾಂಟ್ಸ್ ಟು ಬಿ ಎ ಮಿಲಿಯನೇರ್’ನಲ್ಲಿ ಅಮಿತಾಬ್ ಬಚ್ಚನ್ ಒಮ್ಮೆ, ಬಂಗಲೆ ಬಗ್ಗೆ ಮಾತನಾಡಿದ್ದರು.

‘ಪ್ರತೀಕ್ಷಾ ಎಂದು ಬಂಗೆಲೆಗೆ ಏಕೆ ಹೆಸರಿಡಲಾಗಿದೆ ಎಂದು ಅನೇಕ ಜನರು ನನ್ನನ್ನು ಕೇಳಿದರು. ನಾನು ನನ್ನ ತಂದೆಯನ್ನು ಪ್ರತಿಕ್ಷಾ ಎಂಬ ಹೆಸರೇಕೆ ಎಂದು ಕೇಳಿದೆ? ಇದರ ಬಗ್ಗೆ ನನ್ನ ತಂದೆ ಹೇಳಿದ್ದರು. ‘ನಾವು ಎಲ್ಲವನ್ನೂ ಸ್ವಾಗತಿಸಲು ಉತ್ಸುಕರಾಗಿದ್ದೇವೆ. ಆದರೆ ಯಾರಿಗೂ ಕಾಯುವುದಿಲ್ಲ’ ಎಂಬರ್ಥ ಇದೆ ಎಂದು ತಂದೆ ವಿವರಿಸಿದ್ದರು. ಆರಾಧ್ಯ ಬಚ್ಚನ್ ಜನಿಸಿದ ನಂತರವೂ ಇದೇ ಬಂಗಲೆಗೆ ಕರೆತರಲಾಯಿತು. ಆರಾಧ್ಯಳನ್ನು ಆಕೆಯ ದಿವಂಗತ ಮುತ್ತಜ್ಜ ಮತ್ತು ಮುತ್ತಜ್ಜಿಯ ಆಶೀರ್ವಾದ ಪಡೆಯಲು ಪ್ರತೀಕ್ಷಾ ಬಂಗಲೆಗೆ ಕರೆತರಲಾಗಿತ್ತು.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಬಗ್ಗೆ ತಡವಾಗಿ ಪ್ರತಿಕ್ರಿಯಿಸಿ ಟ್ರೋಲ್ ಆದ ಅಮಿತಾಭ್ ಬಚ್ಚನ್

ಹೆತ್ತವರ ಮರಣದ ನಂತರ, ಅಮಿತಾಭ್ ಬಚ್ಚನ್ ಮತ್ತು ಅವರ ಇಡೀ ಕುಟುಂಬವು ಜಲ್ಸಾಗೆ ಸ್ಥಳಾಂತರಗೊಂಡಿತು. 2007ರಲ್ಲಿ ತಾಯಿಯ ಮರಣದ ನಂತರ, ಬಂಗಲೆ ಮುಚ್ಚಲ್ಪಟ್ಟಿತು ಮತ್ತು ಎರಡು ದಶಕಗಳ ಕಾಲ ಮುಚ್ಚೇ ಇದೆ. ಅವರು ಬಂಗಲೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ತಮ್ಮ ಹೆತ್ತವರ ನೆನಪುಗಳನ್ನು ಈ ಬಂಗಲೆಯಲ್ಲಿ ಸಂರಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ