AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು?

ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರ ಅಪ್ರತಿಮ ಶಿಸ್ತು ಅವರ ವೃತ್ತಿಪರತೆಯ ಯಶಸ್ಸಿನ ಗುಟ್ಟು. ಐದು ದಶಕಗಳಿಂದ ಸಕ್ರಿಯವಾಗಿರುವ ಬಿಗ್ ಬಿ, ರಾತ್ರಿ 8 ಗಂಟೆಯ ನಂತರ ಯಾರನ್ನೂ ಭೇಟಿ ಮಾಡುವುದಿಲ್ಲ. ಖಾಸಗಿ ಜೀವನಕ್ಕೆ ಪ್ರಾಮುಖ್ಯತೆ ನೀಡುವ ಅಮಿತಾಭ್, ಶೂಟಿಂಗ್ ಸೆಟ್‌ಗಳಲ್ಲೂ ತಮ್ಮ ಶಿಸ್ತು ಪ್ರದರ್ಶಿಸುತ್ತಾರೆ.

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು?
ಅಮಿತಾಭ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 23, 2026 | 8:12 AM

Share

ಅಮಿತಾಭ್ ಬಚ್ಚನ್ (Amitabh Bachchan) ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಸಿನಿಮಾ ರಂಗದಲ್ಲಿ ಅವರು ಐದು ದಶಕಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ತುಂಬಾನೇ ಶಿಸ್ತಿನ ವ್ಯಕ್ತಿ. ನಟನೆಯ ಜೊತೆಗೆ ಅವರು ಶಿಸ್ತನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರನ್ನು ರಾತ್ರಿ 8 ಗಂಟೆ ಬಳಿಕ ಇಂಡಸ್ಟ್ರಿಯವರು ಭೇಟಿ ಮಾಡಲು ಸಾಧ್ಯವಿಲ್ಲ.

ಸಾಮಾನ್ಯವಾಗಿ ಬಾಲಿವುಡ್ ಹೀರೋಗಳು ಹೆಚ್ಚೆಚ್ಚು ಪಾರ್ಟಿ ಮಾಡೋಕೆ ಇಷ್ಟಪಡುತ್ತಾರೆ. ಅವರ ರಾತ್ರಿ ಜೀವನವೇ ಬೇರೆ ರೀತಿ ಇರುತ್ತದೆ. ಬೇರೆ ಹೀರೋಗಳು ಕರೆದರು ಎಂದು ಪಾರ್ಟಿಗೆ ಜಾಯಿನ್ ಆಗುತ್ತಾರೆ. ಇಲ್ಲವೇ ಸಿನಿಮಾ ಶೂಟ್​​​ನಲ್ಲಿ ರಾತ್ರಿಯಿಡಿ ಪಾಲ್ಗೊಳ್ಳುತ್ತಾರೆ. ಆದರೆ, ಖಾಸಗಿ ಜೀವನವನ್ನು ಅಮಿತಾಭ್ ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದು, ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದಾರೆ.

ರಾಜಾ ಬುಂದೇಲಾ ಅವರು ಅಮಿತಾಭ್ ಬಚ್ಚನ್ ಜೊತೆ 1989ರ ‘ಮೇ ಆಜಾದ್ ಹೂ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಅಮಿತಾಭ್ ಕುರಿತ ಒಂದಷ್ಟು ವಿಷಗಳನ್ನು ಹಂಚಿಕೊಂಡಿದ್ದಾರೆ. ‘ಅಮಿತಾಭ್ ಬಚ್ಚನ್ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಅವರ ಜೊತೆ ಒಂದು ಸಿನಿಮಾ ಮಾಡಿದ್ದೆ. ಅವರಿಗೆ ಎಲ್ಲಾ ಸಂಭಾಷಣೆಗಳು ಚೆನ್ನಾಗಿ ನೆನಪಿದ್ದವು’ ಎಂದಿದ್ದಾರೆ.

‘ಒಮ್ಮೆ ನಾವು ಗೋವಾದಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ, ಅಮಿತಾಭ್ ಬಚ್ಚನ್ ಮುಂಬೈನಲ್ಲಿಯೇ ಉಳಿದುಹೋಗಿವೆ ಎಂದು ತಿಳಿದುಬಂತು. ಈ ಹಿಂದೆ ಅದೇ ಶೂನಲ್ಲಿ ಶೂಟ್ ಮಾಡಿದ್ದರಿಂದ ಕಂಟ್ಯೂನಿಟಿಗೆ ಅದೇ ಶೋಗಳು ಬೇಕಾಗಿದ್ದವು. ಆ ದಿನಗಳಲ್ಲಿ ವಿಮಾನದ ಕನೆಕ್ಟಿವಿಟಿ ಇಷ್ಟಾಗಿ ಇರಲಿಲ್ಲ’ ಎಂದಿದ್ದಾರೆ ಅವರು. ‘ಮರುದಿನ ಶೂಟ್ ಇರಲ್ಲ ಎಂದು ಎಲ್ಲರೂ ಖುಷಿಪಟ್ಟರು. ಆದರೆ, ಅಮಿತಾಭ್ ಅದೇ ಶೋಗಳ ಜೊತೆ ಮರುದಿನ 7.30ಕ್ಕೆ ಸೆಟ್​​​ನಲ್ಲಿ ಇದ್ದರು. ಅದು ಶಿಸ್ತು’ ಎಂದಿದ್ದಾರೆ ಬುಂದೇಲಾ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್

‘ಅವರು ಎಲ್ಲವನ್ನೂ ಸಮಯಕ್ಕೆ ಸರಿಯಾಗಿ ಮಾಡುತ್ತಾರೆ. ನಾವು ಅವರ ಮನೆಯಲ್ಲಿ ಭೇಟಿಯಾದಾಗಲೂ ಅವರು ಎಂದಿಗೂ ಗಾಸಿಪ್ ಮಾಡುತ್ತಿರಲಿಲ್ಲ. ನಾನು ಕೇಳಿರುವಂತೆ, ರಾತ್ರಿ 8 ಗಂಟೆಯ ನಂತರ ಅವರು ಉದ್ಯಮದ ಯಾರನ್ನೂ ತಮ್ಮ ಮನೆಗೆ ಬಿಡುತ್ತಿರಲಿಲ್ಲ. ಅವರು ತಮ್ಮ ಬಾಗಿಲುಗಳಿಗೆ ಬೀಗ ಹಾಕಿಕೊಳ್ಳುತ್ತಿದ್ದರು. ಅವರು ತಮ್ಮ ವ್ಯವಹಾರ ಮತ್ತು ಕುಟುಂಬದ ನಡುವೆ ಆ ಸಮತೋಲನವನ್ನು ಕಾಯ್ದುಕೊಳ್ಳಲು ಇಷ್ಟಪಡುತ್ತಾರೆ’ ಎಂದಿದ್ದಾರೆ ರಾಜಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Fri, 23 January 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ