AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಂ ಕಪೂರ್ ಬಗ್ಗೆ ಟ್ರೋಲ್ ಮಾಡಿದ ಯೂಟ್ಯೂಬರ್​ಗೆ ನೋಟಿಸ್ ನೀಡಿದ ಆನಂದ್ ಅಹುಜಾ

2007ರಲ್ಲಿ ರಿಲೀಸ್ ಆದ ‘ಸಾವರಿಯಾ’ ಅವರ ನಟನೆಯ ಮೊದಲ ಸಿನಿಮಾ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. ಆದರೆ, ಅವರ ನಟನೆಯಲ್ಲಿ ಹೆಚ್ಚು ಬದಲಾವಣೆ ಏನೂ ಕಂಡಿಲ್ಲ. ಈ ಬಗ್ಗೆ ಟ್ರೋಲ್ ಮಾಡಲಾಗಿದೆ.

ಸೋನಂ ಕಪೂರ್ ಬಗ್ಗೆ ಟ್ರೋಲ್ ಮಾಡಿದ ಯೂಟ್ಯೂಬರ್​ಗೆ ನೋಟಿಸ್ ನೀಡಿದ ಆನಂದ್ ಅಹುಜಾ
ಸೋನಂ, ಆನಂದ್, ರಾಗಿಣಿ
ರಾಜೇಶ್ ದುಗ್ಗುಮನೆ
|

Updated on: Oct 12, 2023 | 2:46 PM

Share

ಬಾಲಿವುಡ್ ನಟಿ ಸೋನಂ ಕಪೂರ್ (Sonam Kapoor) ಅವರಿಗೆ ಟ್ರೋಲ್ ಹೊಸದಲ್ಲ. ಅವರ ದೇಹದ ಬಗ್ಗೆ, ಅವರ ನಟನೆಯ ಬಗ್ಗೆ ಟೀಕೆಗಳು ಆಗಾಗ ವ್ಯಕ್ತವಾಗುತ್ತಲೇ ಇರುತ್ತವೆ. ಇದಕ್ಕೆ ಸೋನಂ ಕಪೂರ್ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅವರ ಬಗ್ಗೆ ಹುಟ್ಟಿರುವ ಟ್ರೋಲ್​ಗಳಿಗೆ ಅವರು ಉತ್ತರಿಸುವ ಗೋಜಿಗೂ ಹೋಗಿಲ್ಲ. ಆದರೆ, ಸೋನಂ ಕಪೂರ್ ಪತಿ ಆನಂದ್ ಅಹುಜಾ ಅವರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಂತಿದೆ. ಈ ಕಾರಣದಿಂದಲೇ ಪತ್ನಿಯನ್ನು ಟೀಕಿಸಿದ ಯೂಟ್ಯೂಬರ್​ಗೆ ನೋಟಿಸ್ ಕಳುಹಿಸಿದ್ದಾರೆ. ಆ ಯೂಟ್ಯೂಬರ್​ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

ಸೋನಂ ಕಪೂರ್ ಅವರು ಅನಿಲ್ ಕಪೂರ್ ಮಗಳು. ಈ ಒಂದೇ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ನಟಿಸೋಕೆ ಸುಲಭದಲ್ಲಿ ಅವಕಾಶ ಸಿಕ್ಕಿತು.   2007ರಲ್ಲಿ ರಿಲೀಸ್ ಆದ ‘ಸಾವರಿಯಾ’ ಅವರ ನಟನೆಯ ಮೊದಲ ಸಿನಿಮಾ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. ಆದರೆ, ಅವರ ನಟನೆಯಲ್ಲಿ ಹೆಚ್ಚು ಬದಲಾವಣೆ ಏನೂ ಕಂಡಿಲ್ಲ. ಈ ಬಗ್ಗೆ ಟ್ರೋಲ್ ಮಾಡಲಾಗಿದೆ.

ಯೂಟ್ಯೂಬ್​ ಕಾಂಟೆಂಟ್ ಕ್ರಿಯೇಟರ್ ರಾಗಿಣಿ ಅವರು ಸೋನಂ ಬಗ್ಗೆ ಟೀಕೆ ಮಾಡಿದ್ದರು. ಕೆಲವು ಒಳ್ಳೆಯ ವಿಚಾರಗಳನ್ನು ಹೇಳಿದರೆ, ಇನ್ನೂ ಕೆಲವು ವಿಚಾರಗಳಲ್ಲಿ ಅವರನ್ನು ಟೀಕೆ ಮಾಡಿದ್ದರು. ಈ ವಿಡಿಯೋ ಆನಂದ್ ಅಹೂಜ ಅವರನ್ನು ಕೆಣಕಿದೆ. ಹೀಗಾಗಿ, ಆನಂದ್ ಅವರು ಪ್ರಕರಣ ದಾಖಲು ಮಾಡಿದ್ದಾರೆ. ರಾಗಿಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ‘ಒಂದೇ ವಿಡಿಯೋದಿಂದ ಅವರಿಗೆ ತಲೆಕೆಟ್ಟು ಹೋಗಿದೆ’ ಎಂದು ರಾಗಿಣಿ ಬರೆದುಕೊಂಡಿದ್ದಾರೆ.

ರಾಗಿಣಿ ಅವರು ಹೊಸ ವಿಡಿಯೋ ಮಾಡಿ ಫೋಟೋ ಪೋಸ್ಟ್ ಮಾಡಿದ್ದಾರೆ. ನೋಟಿಸ್​ ಬಗ್ಗೆ ಅವರು ಅಸಮಾಧಾನ ಹೊರ ಹಾಕಿದ್ದಾರೆ.  ಸದ್ಯ ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸೋನಂ ಕಪೂರ್ ಬಗ್ಗೆ ರಾಣಾ ದಗ್ಗುಬಾಟಿ ಹೇಳಿಕೆ: ಪ್ರತಿಕ್ರಿಯೆ ನೀಡಿದ ದುಲ್ಕರ್ ಸಲ್ಮಾನ್

ಸಿನಿಮಾ ವಿಚಾರಕ್ಕೆ ಬರೋದಾದರೆ ಸುಜಯ್ ಘೋಷ್ ನಿರ್ದೇಶನದ ‘ಬ್ಲೈಂಡ್’ ಸಿನಿಮಾದಲ್ಲಿ ಸೋನಂ ಕಪೂರ್ ನಟಿಸಿದ್ದರು. ಈ ಚಿತ್ರ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಪೊಲೀಸ್ ಕೆಲಸದಲ್ಲಿರುವ ನಾಯಕಿ ಅಪಘಾತದಲ್ಲಿ ಕಣ್ಣು ಕಳೆದುಕೊಳ್ಳುತ್ತಾಳೆ. ಆದಾಗ್ಯೂ ಅವಳು ಸರಣಿ ಹಂತಕನ ಕಂಡು ಹಿಡಿಯುತ್ತಾಳೆ. ಈ ರೀತಿಯ ಕತೆಯನ್ನು ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!